<p>ಪಶ್ಚಿಮ ಘಟ್ಟದ ಆಗುಂಬೆ–ಸೋಮೇಶ್ವರ ಪ್ರದೇಶವು ಕಾಳಿಂಗ ಸರ್ಪಗಳ ಚೈತ್ರಭೂಮಿ. ಆದರೆ ಇಲ್ಲಿ ಸಂಶೋಧನೆ ಹೆಸರಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ವನ್ಯಜೀವಿಪರ ಹೋರಾಟಗಾರರು ಆರೋಪಿಸಿದ್ದಾರೆ. ಕಾಳಿಂಗ ಸರ್ಪಗಳನ್ನು ಬಂಧನದಲ್ಲಿಟ್ಟು ಶೋಷಣೆ, ವಾಣಿಜ್ಯ ಚಟುವಟಿಕೆ, ರೆಸಾರ್ಟ್ ನಿರ್ಮಾಣ, ಕೃತಕ ಸಂತಾನೋತ್ಪತ್ತಿ – ಇವೆಲ್ಲವೂ ವನ್ಯಜೀವಿ ಸಂರಕ್ಷಣೆ ಕಾಯ್ದೆಯ ಉಲ್ಲಂಘನೆಯಾಗಿದೆ ಎಂಬುದು ವನ್ಯಜೀವಿಪರ ಹೋರಾಟಗಾರರ ಆರೋಪ. ಈ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ಈಗ ತನಿಖೆಗೆ ಆದೇಶಿಸಿದ್ದಾರೆ. ಅರಣ್ಯಇಲಾಖೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಬೆಳವಣಿಗೆಗಳ ಸಂಪೂರ್ಣ ವಿವರ ಈ ವಿಡಿಯೊದಲ್ಲಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>