<p><strong>ಬೆಂಗಳೂರು</strong>: ನಿಲ್ಲದ ‘ಡಿಜಿಟಲ್ ಅರೆಸ್ಟ್ ಸುಲಿಗೆ’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಮಾರ್ಚ್ 9ರಂದು ಪ್ರಕಟವಾದ ವರದಿಯನ್ನು ವಿಧಾನ ಪರಿಷತ್ನಲ್ಲಿ ಪ್ರಸ್ತಾಪಿಸಿದ ಕಿಶೋರ್ ಕುಮಾರ್ ಪುತ್ತೂರು, ಆನ್ಲೈನ್ ವಂಚನೆ ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರ ತ್ವರಿತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.</p>.<p>ಆರ್ಥಿಕ ವಂಚನೆಯ ಪ್ರಕರಣಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಬೇಕು. ಸೈಬರ್ ಅಪರಾಧ ಠಾಣೆಗಳಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳನ್ನು ತ್ವರಿತವಾಗಿ ತನಿಖೆ ನಡೆಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಬೇಕು. ಸೈಬರ್ ಅಪರಾಧ ಠಾಣೆಗಳಿಗೆ ಅಗತ್ಯ ಸಿಬ್ಬಂದಿಯನ್ನೂ ನೇಮಿಸಬೇಕು ಎಂದು ಕೋರಿದರು.</p>.<p>ವೈಟ್ಫೀಲ್ಡ್ನ ಇ.ಸಿ.ಸಿ ರಸ್ತೆಯ ಲಕ್ಷ್ಮಿ ಎನ್ಕ್ಲೇವ್ ಅಪಾರ್ಟ್ಮೆಂಟ್ನಲ್ಲಿ ನೆಲಸಿರುವ 64 ವರ್ಷದ ವೃದ್ದರೊಬ್ಬರಿಗೆ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವಂಚಕರು ಬೆದರಿಸಿ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿದ್ದ ಸಂಬಂಧಿಸಿದಂತೆ ಪ್ರಕಟವಾಗಿದ್ದ ವರದಿಯನ್ನು ಕಿಶೋರ್ ಪ್ರಸ್ತಾಪಿಸಿದರು. </p>.<p>‘ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 1,655 ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವಂಚನೆ ಪ್ರಕರಣಗಳು ನಡೆದಿದ್ದು, ₹372 ಕೋಟಿಯಷ್ಟು ವಂಚನೆ ನಡೆದಿದೆ. 1,372 ಪ್ರಕರಣಗಳಲ್ಲಿ ಆರೋಪಿಗಳು ಪತ್ತೆ ಆಗಿಲ್ಲ. ₹339 ಕೋಟಿ ಜಪ್ತಿ ಮಾಡಿಕೊಳ್ಳುವುದು ಬಾಕಿಯಿದೆ’ ಎಂದು ಕಿಶೋರ್ ಪ್ರಶ್ನೆಗೆ ರಾಜ್ಯ ಸರ್ಕಾರ ಉತ್ತರಿಸಿದೆ.</p>.<p>ಕಳೆದ ಮೂರು ವರ್ಷಗಳಲ್ಲಿ 59,626 ಇತರೆ ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. ಆ ಪೈಕಿ 48,173 ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಯಾಗಿಲ್ಲ ಎಂದು ಸರ್ಕಾರ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಿಲ್ಲದ ‘ಡಿಜಿಟಲ್ ಅರೆಸ್ಟ್ ಸುಲಿಗೆ’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಮಾರ್ಚ್ 9ರಂದು ಪ್ರಕಟವಾದ ವರದಿಯನ್ನು ವಿಧಾನ ಪರಿಷತ್ನಲ್ಲಿ ಪ್ರಸ್ತಾಪಿಸಿದ ಕಿಶೋರ್ ಕುಮಾರ್ ಪುತ್ತೂರು, ಆನ್ಲೈನ್ ವಂಚನೆ ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರ ತ್ವರಿತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.</p>.<p>ಆರ್ಥಿಕ ವಂಚನೆಯ ಪ್ರಕರಣಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಬೇಕು. ಸೈಬರ್ ಅಪರಾಧ ಠಾಣೆಗಳಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳನ್ನು ತ್ವರಿತವಾಗಿ ತನಿಖೆ ನಡೆಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಬೇಕು. ಸೈಬರ್ ಅಪರಾಧ ಠಾಣೆಗಳಿಗೆ ಅಗತ್ಯ ಸಿಬ್ಬಂದಿಯನ್ನೂ ನೇಮಿಸಬೇಕು ಎಂದು ಕೋರಿದರು.</p>.<p>ವೈಟ್ಫೀಲ್ಡ್ನ ಇ.ಸಿ.ಸಿ ರಸ್ತೆಯ ಲಕ್ಷ್ಮಿ ಎನ್ಕ್ಲೇವ್ ಅಪಾರ್ಟ್ಮೆಂಟ್ನಲ್ಲಿ ನೆಲಸಿರುವ 64 ವರ್ಷದ ವೃದ್ದರೊಬ್ಬರಿಗೆ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವಂಚಕರು ಬೆದರಿಸಿ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿದ್ದ ಸಂಬಂಧಿಸಿದಂತೆ ಪ್ರಕಟವಾಗಿದ್ದ ವರದಿಯನ್ನು ಕಿಶೋರ್ ಪ್ರಸ್ತಾಪಿಸಿದರು. </p>.<p>‘ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 1,655 ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವಂಚನೆ ಪ್ರಕರಣಗಳು ನಡೆದಿದ್ದು, ₹372 ಕೋಟಿಯಷ್ಟು ವಂಚನೆ ನಡೆದಿದೆ. 1,372 ಪ್ರಕರಣಗಳಲ್ಲಿ ಆರೋಪಿಗಳು ಪತ್ತೆ ಆಗಿಲ್ಲ. ₹339 ಕೋಟಿ ಜಪ್ತಿ ಮಾಡಿಕೊಳ್ಳುವುದು ಬಾಕಿಯಿದೆ’ ಎಂದು ಕಿಶೋರ್ ಪ್ರಶ್ನೆಗೆ ರಾಜ್ಯ ಸರ್ಕಾರ ಉತ್ತರಿಸಿದೆ.</p>.<p>ಕಳೆದ ಮೂರು ವರ್ಷಗಳಲ್ಲಿ 59,626 ಇತರೆ ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. ಆ ಪೈಕಿ 48,173 ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಯಾಗಿಲ್ಲ ಎಂದು ಸರ್ಕಾರ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>