<p><strong>ಹೊಸಕೋಟೆ:</strong> ‘ನವೆಂಬರ್ ಕ್ರಾಂತಿಗೀತಿ ಏನೂ ಇಲ್ಲ. ನಮ್ಮ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳು ರಾಜ್ಯದಲ್ಲಿ ಕ್ರಾಂತಿ ಮಾಡುತ್ತಿವೆ ಅಷ್ಟೇ’ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್ ₹300 ಕೋಟಿ ಹಣ ನೀಡಿದೆ ಎಂಬ ಬಿಜೆಪಿಯವರ ಆರೋಪದಲ್ಲಿ ಹುರುಳಿಲ್ಲ. ಚುನಾವಣಾ ಬಾಂಡ್ ಮೂಲಕ ಬಿಜೆಪಿ ಸಂಗ್ರಹಿಸಿದ ಹಣದ ಬಗ್ಗೆ ಅವರು ಮೊದಲು ಸ್ಪಷ್ಟನೆ ನೀಡಲಿ ಎಂದು ಸವಾಲು ಹಾಕಿದರು.</p>.<p>ಇದಕ್ಕೆ ಧ್ವನಿಗೂಡಿಸಿದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ‘ಹಾಗಾದರೆ ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಂದ ಬಿಹಾರ ಚುನಾವಣೆಗೆ ಎಷ್ಟು ಹಣ ಕಳಿಸಲಾಗಿದೆ’ ಎಂದು ಪ್ರಶ್ನಿಸಿದರು.</p>.<p>ಯಾವುದೇ ಸಂಘ, ಸಂಸ್ಥೆಯಾದರೂ ಅನುಮತಿ ಪಡೆದ ಬಳಿಕವೇ ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಕಾರ್ಯಕ್ರಮ ಮಾಡಬೇಕು. ಅದಕ್ಕೆ ಸರ್ಕಾರದ ಅಭ್ಯಂತರ ಇಲ್ಲ. ಈ ನೆಲದ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಜಾರ್ಜ್, ಚಿತ್ತಾಪುರದ ಆರ್ಎಸ್ಎಸ್ ಪಥ ಸಂಚಲನ ಕುರಿತ ವಿವಾದಕ್ಕೆ ಸ್ಪಷ್ಟನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ‘ನವೆಂಬರ್ ಕ್ರಾಂತಿಗೀತಿ ಏನೂ ಇಲ್ಲ. ನಮ್ಮ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳು ರಾಜ್ಯದಲ್ಲಿ ಕ್ರಾಂತಿ ಮಾಡುತ್ತಿವೆ ಅಷ್ಟೇ’ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್ ₹300 ಕೋಟಿ ಹಣ ನೀಡಿದೆ ಎಂಬ ಬಿಜೆಪಿಯವರ ಆರೋಪದಲ್ಲಿ ಹುರುಳಿಲ್ಲ. ಚುನಾವಣಾ ಬಾಂಡ್ ಮೂಲಕ ಬಿಜೆಪಿ ಸಂಗ್ರಹಿಸಿದ ಹಣದ ಬಗ್ಗೆ ಅವರು ಮೊದಲು ಸ್ಪಷ್ಟನೆ ನೀಡಲಿ ಎಂದು ಸವಾಲು ಹಾಕಿದರು.</p>.<p>ಇದಕ್ಕೆ ಧ್ವನಿಗೂಡಿಸಿದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ‘ಹಾಗಾದರೆ ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಂದ ಬಿಹಾರ ಚುನಾವಣೆಗೆ ಎಷ್ಟು ಹಣ ಕಳಿಸಲಾಗಿದೆ’ ಎಂದು ಪ್ರಶ್ನಿಸಿದರು.</p>.<p>ಯಾವುದೇ ಸಂಘ, ಸಂಸ್ಥೆಯಾದರೂ ಅನುಮತಿ ಪಡೆದ ಬಳಿಕವೇ ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಕಾರ್ಯಕ್ರಮ ಮಾಡಬೇಕು. ಅದಕ್ಕೆ ಸರ್ಕಾರದ ಅಭ್ಯಂತರ ಇಲ್ಲ. ಈ ನೆಲದ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಜಾರ್ಜ್, ಚಿತ್ತಾಪುರದ ಆರ್ಎಸ್ಎಸ್ ಪಥ ಸಂಚಲನ ಕುರಿತ ವಿವಾದಕ್ಕೆ ಸ್ಪಷ್ಟನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>