ಬಿಜೆಪಿಯ ತಳವಾರ್ ಸಾಬಣ್ಣ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವದ್ವಯರು, 2013ರಿಂದ 23ರವರೆಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ₹10,228 ಕೋಟಿ ನೀಡಲಾಗಿದೆ. ಅದರಲ್ಲಿ ₹8,333 ಕೋಟಿ ವಿನಿಯೋಗಿಸಲಾಗಿದೆ. ಕ್ರಿಯಾ ಯೋಜನೆ, ಅನುಮೋದನೆ, ಟೆಂಡರ್ ಸೇರಿದಂತೆ ವಿವಿಧ ಹಂತಗಳಲ್ಲಿ ವಿಳಂಬದ ಕಾರಣ ಆಯಾ ವರ್ಷದ ಹಣ ಅದೇ ವರ್ಷ ಖರ್ಚಾಗುತ್ತಿಲ್ಲ. ಹಾಗಾಗಿ, ಖರ್ಚಾಗದ ಹಣವನ್ನು ಸರ್ಕಾರ ಮರಳಿ ಪಡೆಯದಂತೆ ನಿಯಮ ರೂಪಿಸಲಾಗಿದೆ ಎಂದರು.