<p><strong>ಬೆಂಗಳೂರು</strong>: ನೌಕರರಿಗೆ ಪ್ರೀಮಿಯಂರಹಿತವಾಗಿ ತಲಾ ₹1 ಕೋಟಿ ಮೊತ್ತದ ಅಪಘಾತ ವಿಮಾ ಯೋಜನೆ ಜಾರಿಗೊಳಿಸಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು (ಕೆಕೆಆರ್ಟಿಸಿ) ಕೆನರಾ ಬ್ಯಾಂಕ್ ಜೊತೆ ಒಪ್ಪಂದ ಮಾಡಿಕೊಂಡಿದೆ.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಮತ್ತು ಕೆನರಾ ಬ್ಯಾಂಕ್ನ ಜನರಲ್ ಮ್ಯಾನೇಜರ್ ವಿಜಯಕುಮಾರ್ ಅವರು ಒಡಂಬಡಿಕೆಗಳನ್ನು ವಿನಿಮಯ ಮಾಡಿಕೊಂಡರು.</p>.<p>‘ನಿಗಮದ ನೌಕರರ ವೇತನ ಖಾತೆಗಳನ್ನು ಕೆನರಾ ಬ್ಯಾಂಕಿನ ‘ಪೇ–ರೋಲ್ ಪ್ಯಾಕೇಜ್ ಸ್ಕೀಮ್’ ಅಡಿಯಲ್ಲಿ ತೆರೆದು ಈ ವಿಮಾ ಸೌಲಭ್ಯವನ್ನು ಎಲ್ಲ ನೌಕರರು ಶುಲ್ಕರಹಿತವಾಗಿ ಪಡೆದುಕೊಳ್ಳಬಹುದು’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ತಿಳಿಸಿದರು. </p>.<p>ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಮಲಿಂಗಾರೆಡ್ಡಿ ಅವರು ಮಾತನಾಡಿ, ‘ನಿಗಮದ ನೌಕರರು ವೈಯಕ್ತಿಕ ಮತ್ತು ಕರ್ತವ್ಯನಿರತ ಸಂದರ್ಭದಲ್ಲಿ ಅಪಘಾತವಾಗಿ ನಿಧನರಾದರೆ ₹ 1 ಕೋಟಿ ಅಪಘಾತ ವಿಮೆಯ ಪರಿಹಾರ ಮೊತ್ತವನ್ನು ನಾಮನಿರ್ದೇಶಿತರಿಗೆ ನೀಡಲಾಗುತ್ತದೆ. ಡೆಬಿಟ್ ಕಾರ್ಡ್ ಹೊಂದಿದರೆ ₹ 6 ಲಕ್ಷದಿಂದ ₹14 ಲಕ್ಷದವರೆಗೂ ಹಾಗೂ ಪ್ರೀಮಿಯಂರಹಿತವಾಗಿ ₹ 1 ಲಕ್ಷದಿಂದ ₹6 ಲಕ್ಷದವರೆಗೆ ಉಚಿತ ಅವಧಿ ವಿಮೆಯನ್ನು ಪಾಲಿಸಿಯಲ್ಲಿ ನಾಮನಿರ್ದೇಶಿತರಾದವರಿಗೆ ವಿತರಿಸಲಾಗುತ್ತದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನೌಕರರಿಗೆ ಪ್ರೀಮಿಯಂರಹಿತವಾಗಿ ತಲಾ ₹1 ಕೋಟಿ ಮೊತ್ತದ ಅಪಘಾತ ವಿಮಾ ಯೋಜನೆ ಜಾರಿಗೊಳಿಸಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು (ಕೆಕೆಆರ್ಟಿಸಿ) ಕೆನರಾ ಬ್ಯಾಂಕ್ ಜೊತೆ ಒಪ್ಪಂದ ಮಾಡಿಕೊಂಡಿದೆ.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಮತ್ತು ಕೆನರಾ ಬ್ಯಾಂಕ್ನ ಜನರಲ್ ಮ್ಯಾನೇಜರ್ ವಿಜಯಕುಮಾರ್ ಅವರು ಒಡಂಬಡಿಕೆಗಳನ್ನು ವಿನಿಮಯ ಮಾಡಿಕೊಂಡರು.</p>.<p>‘ನಿಗಮದ ನೌಕರರ ವೇತನ ಖಾತೆಗಳನ್ನು ಕೆನರಾ ಬ್ಯಾಂಕಿನ ‘ಪೇ–ರೋಲ್ ಪ್ಯಾಕೇಜ್ ಸ್ಕೀಮ್’ ಅಡಿಯಲ್ಲಿ ತೆರೆದು ಈ ವಿಮಾ ಸೌಲಭ್ಯವನ್ನು ಎಲ್ಲ ನೌಕರರು ಶುಲ್ಕರಹಿತವಾಗಿ ಪಡೆದುಕೊಳ್ಳಬಹುದು’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ತಿಳಿಸಿದರು. </p>.<p>ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಮಲಿಂಗಾರೆಡ್ಡಿ ಅವರು ಮಾತನಾಡಿ, ‘ನಿಗಮದ ನೌಕರರು ವೈಯಕ್ತಿಕ ಮತ್ತು ಕರ್ತವ್ಯನಿರತ ಸಂದರ್ಭದಲ್ಲಿ ಅಪಘಾತವಾಗಿ ನಿಧನರಾದರೆ ₹ 1 ಕೋಟಿ ಅಪಘಾತ ವಿಮೆಯ ಪರಿಹಾರ ಮೊತ್ತವನ್ನು ನಾಮನಿರ್ದೇಶಿತರಿಗೆ ನೀಡಲಾಗುತ್ತದೆ. ಡೆಬಿಟ್ ಕಾರ್ಡ್ ಹೊಂದಿದರೆ ₹ 6 ಲಕ್ಷದಿಂದ ₹14 ಲಕ್ಷದವರೆಗೂ ಹಾಗೂ ಪ್ರೀಮಿಯಂರಹಿತವಾಗಿ ₹ 1 ಲಕ್ಷದಿಂದ ₹6 ಲಕ್ಷದವರೆಗೆ ಉಚಿತ ಅವಧಿ ವಿಮೆಯನ್ನು ಪಾಲಿಸಿಯಲ್ಲಿ ನಾಮನಿರ್ದೇಶಿತರಾದವರಿಗೆ ವಿತರಿಸಲಾಗುತ್ತದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>