<p><strong>ಹುಬ್ಬಳ್ಳಿ: </strong>ನಗರದ ಗೋಕುಲ ರಸ್ತೆಯ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ಕಾಶ್ಮಿರ ಮೂಲದ ಮೂವರು ವಿದ್ಯಾರ್ಥಿಗಳು 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದ ವಿಡಿಯೊ ವೈರಲ್ ಆಗಿದೆ.</p>.<p>ಸಿವಿಲ್ ವಿಭಾಗದಲ್ಲಿ ಓದುತ್ತಿರುವ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಹೇಳಲಾಗಿದೆ. ಪುಲ್ವಾಮಾ ದಾಳಿ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳು ವಿಡಿಯೊ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಪ್ರಾಚಾರ್ಯ ಡಾ. ಬಸವರಾಜ ಆನಾಮಿ, 'ಸರ್ಕಾರಿ ಕೋಟಾದ ಅಡಿ ಮೂವರು ಕಾಶ್ಮಿರಿ ವಿದ್ಯಾರ್ಥಿಗಳು ಸೀಟು ಪಡೆದಿದ್ದರು. ವಿದ್ಯಾರ್ಥಿಗಳ ವಿಡಿಯೊ ಗಮನಿಸಿ ಪೊಲೀಸರಿಗೆ ನಾವೇ ಮಾಹಿತಿ ನೀಡಿದ್ದೇವೆ. ಅವರ ಮೇಲೆ ಕಾನೂನು ಕ್ರಮ ಕೈಗೊಂಡು ಅಮಾನತು ಮಾಡಲಾಗುವುದು' ಎಂದು ತಿಳಿಸಿದ್ದಾರೆ.</p>.<p>ಸ್ಥಳಕ್ಕೆ ಗೋಕುಲ ಠಾಣೆ ಪೊಲೀಸರು ಆಗಮಿಸಿ, ವಿದ್ಯಾರ್ಥಿಗಳಿಂದ ಹಾಗೂ ಪ್ರಾಚಾರ್ಯರಿಂದ ಮಾಹಿತಿ ಪಡೆಯುತ್ತಿದ್ದಾರೆ. ಬಜರಂಗ ದಳದ ಕಾರ್ಯಕರ್ತರು ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ನಗರದ ಗೋಕುಲ ರಸ್ತೆಯ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ಕಾಶ್ಮಿರ ಮೂಲದ ಮೂವರು ವಿದ್ಯಾರ್ಥಿಗಳು 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದ ವಿಡಿಯೊ ವೈರಲ್ ಆಗಿದೆ.</p>.<p>ಸಿವಿಲ್ ವಿಭಾಗದಲ್ಲಿ ಓದುತ್ತಿರುವ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಹೇಳಲಾಗಿದೆ. ಪುಲ್ವಾಮಾ ದಾಳಿ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳು ವಿಡಿಯೊ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಪ್ರಾಚಾರ್ಯ ಡಾ. ಬಸವರಾಜ ಆನಾಮಿ, 'ಸರ್ಕಾರಿ ಕೋಟಾದ ಅಡಿ ಮೂವರು ಕಾಶ್ಮಿರಿ ವಿದ್ಯಾರ್ಥಿಗಳು ಸೀಟು ಪಡೆದಿದ್ದರು. ವಿದ್ಯಾರ್ಥಿಗಳ ವಿಡಿಯೊ ಗಮನಿಸಿ ಪೊಲೀಸರಿಗೆ ನಾವೇ ಮಾಹಿತಿ ನೀಡಿದ್ದೇವೆ. ಅವರ ಮೇಲೆ ಕಾನೂನು ಕ್ರಮ ಕೈಗೊಂಡು ಅಮಾನತು ಮಾಡಲಾಗುವುದು' ಎಂದು ತಿಳಿಸಿದ್ದಾರೆ.</p>.<p>ಸ್ಥಳಕ್ಕೆ ಗೋಕುಲ ಠಾಣೆ ಪೊಲೀಸರು ಆಗಮಿಸಿ, ವಿದ್ಯಾರ್ಥಿಗಳಿಂದ ಹಾಗೂ ಪ್ರಾಚಾರ್ಯರಿಂದ ಮಾಹಿತಿ ಪಡೆಯುತ್ತಿದ್ದಾರೆ. ಬಜರಂಗ ದಳದ ಕಾರ್ಯಕರ್ತರು ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>