<p><strong>ಹುಬ್ಬಳ್ಳಿ:</strong>ಪಾಕಿಸ್ತಾನದ ಪರ ಘೋಷಣೆ ಕೂಗಿದ ನಗರದ ಗೋಕುಲ ರಸ್ತೆಯ ಕೆಎಲ್ಇ ಎಂಜಿನಿಯರ್ ಕಾಲೇಜಿನ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ, ದೇಶದ್ರೋಹ ಹಾಗೂ ಕೋಮು ಸೌಹಾರ್ದ ಕದಡುವ ಪ್ರಕರಣ ದಾಖಲಿಸಿದ್ದಾರೆ.</p>.<p>ಸಿವಿಲ್ ವಿಭಾಗದಲ್ಲಿ 4ನೇ ಸೆಮಿಸ್ಟರ್ ಓದುತ್ತಿರುವ ಅಮೀರ್, ಬಾಸಿತ್ ಹಾಗೂ ಎರಡನೇ ಸೆಮಿಸ್ಟರ್ ಓದುತ್ತಿರುವ ತಾಲೀಬ್ ಈ ಕೃತ್ಯದಲ್ಲಿ ಪಾಲ್ಗೊಂಡವರು.</p>.<p>ಪುಲ್ವಾಮಾ ದಾಳಿ ನಡೆದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಫೆ.14 ರಂದು ಕಾಲೇಜಿನಲ್ಲಿ ಹುತಾತ್ಮರನ್ನು ಸ್ಮರಿಸಲಾಗಿತ್ತು. ಆದರೆ, ಈ ಮೂವರೂ ಕೊಟಗುಣಸಿಯಲ್ಲಿರುವ ಕಾಲೇಜಿನ ವಸತಿ ಗೃಹದಲ್ಲಿ ಪಾಕ್ ಸೇನೆಯ ಹಾಡಿಗೆ ದನಿಗೂಡಿಸಿ ‘ಪಾಕಿಸ್ತಾನ ಜಿಂದಾಬಾದ್’, ‘ಪಾಕಿಸ್ತಾನ ಆಜಾದಿ’ ಎಂದು ಘೋಷಣೆ ಕೂಗಿದ್ದರು. ಅದನ್ನು ವಾಟ್ಸ್ಆ್ಯಪ್ ಗ್ರೂಪ್ಗೆ ಕಳುಹಿಸಿದ್ದರು.</p>.<p>ವಿಡಿಯೊ ವೈರಲ್ ಆಗುತ್ತಿದ್ದಂತೆಯೇ ಕಾಲೇಜಿನ ಪ್ರಾಚಾರ್ಯ ಬಸವರಾಜ ಅಣಾಮಿ ಅವರು, ಶನಿವಾರ ವಿದ್ಯಾರ್ಥಿಗಳ ವಿಚಾರಣೆ ನಡೆಸಿದರು. ಬಜರಂಗ ದಳದ ಕಾರ್ಯಕರ್ತರು ಪ್ರಾಚಾರ್ಯರ ಕೊಠಡಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪರಿಸ್ಥಿತಿ ಬಿಗಡಾಯಿಸುತ್ತಿರುವುದನ್ನು ಗಮನಿಸಿದ ಪ್ರಾಚಾರ್ಯರು, ಗೋಕುಲ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದರು.</p>.<p>‘ವಿಡಿಯೊವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಹಿಸಲಾಗುವುದು’ ಎಂದು ಪೊಲೀಸ್ ಕಮಿಷನರ್ ಆರ್. ದಿಲೀಪ್ ತಿಳಿಸಿದರು.</p>.<p>ಈ ಮೂವರೂ ವಿದ್ಯಾರ್ಥಿಗಳು ಸರ್ಕಾರಿ ಕೋಟಾದಡಿ ಆಯ್ಕೆಯಾಗಿದ್ದು, ಅವರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ ಎಂದು ಪ್ರಾಚಾರ್ಯ ಬಸವರಾಜ ಅಣಾಮಿ ಹೇಳಿದರು.</p>.<p><strong>ವಾದ ಮಂಡಿಸದಿರಲು ನಿರ್ಣಯ:</strong> ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಪರ ಯಾರೂ ವಾದ ಮಂಡಿಸಬಾರದು ಎಂದು ಹುಬ್ಬಳ್ಳಿ ವಕೀಲರ ಸಂಘ ನಿರ್ಣಯಿಸಿದೆ.</p>.<p>ಸಂಘದ ಸಭೆಯಲ್ಲಿ ಈಗಾಗಲೇ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ ಸಂಘದ ಸರ್ವ ಸದಸ್ಯರ ಸಭೆ ಕರೆದು ವಿಷಯ ತಿಳಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ಗುರು ಹಿರೇಮಠ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಯುವ ವಕೀಲರ ಸಂಘವೂ ವಾದ ಮಂಡಿಸದಿರುವ ನಿರ್ಣಯ ಕೈಗೊಂಡಿದೆ ಎಂದು ಸಂಘದ ಅಧ್ಯಕ್ಷ ಅಶೋಕ ಅಣ್ವೇಕರ್ ತಿಳಿಸಿದ್ದಾರೆ.</p>.<p>*<br />ಸರ್ಕಾರಿ ಕೋಟಾದಡಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು. ವಿಡಿಯೊ ಗಮನಿಸಿ ಪೊಲೀಸರಿಗೆ ದೂರು ನೀಡಿದ್ದೇವೆ. ಕಾಲೇಜಿನಿಂದ ಅಮಾನತು ಮಾಡಲಾಗಿದೆ.<br /><em><strong>-ಬಸವರಾಜ ಅಣಾಮಿ, ಕಾಲೇಜಿನ ಪ್ರಾಚಾರ್ಯರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong>ಪಾಕಿಸ್ತಾನದ ಪರ ಘೋಷಣೆ ಕೂಗಿದ ನಗರದ ಗೋಕುಲ ರಸ್ತೆಯ ಕೆಎಲ್ಇ ಎಂಜಿನಿಯರ್ ಕಾಲೇಜಿನ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ, ದೇಶದ್ರೋಹ ಹಾಗೂ ಕೋಮು ಸೌಹಾರ್ದ ಕದಡುವ ಪ್ರಕರಣ ದಾಖಲಿಸಿದ್ದಾರೆ.</p>.<p>ಸಿವಿಲ್ ವಿಭಾಗದಲ್ಲಿ 4ನೇ ಸೆಮಿಸ್ಟರ್ ಓದುತ್ತಿರುವ ಅಮೀರ್, ಬಾಸಿತ್ ಹಾಗೂ ಎರಡನೇ ಸೆಮಿಸ್ಟರ್ ಓದುತ್ತಿರುವ ತಾಲೀಬ್ ಈ ಕೃತ್ಯದಲ್ಲಿ ಪಾಲ್ಗೊಂಡವರು.</p>.<p>ಪುಲ್ವಾಮಾ ದಾಳಿ ನಡೆದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಫೆ.14 ರಂದು ಕಾಲೇಜಿನಲ್ಲಿ ಹುತಾತ್ಮರನ್ನು ಸ್ಮರಿಸಲಾಗಿತ್ತು. ಆದರೆ, ಈ ಮೂವರೂ ಕೊಟಗುಣಸಿಯಲ್ಲಿರುವ ಕಾಲೇಜಿನ ವಸತಿ ಗೃಹದಲ್ಲಿ ಪಾಕ್ ಸೇನೆಯ ಹಾಡಿಗೆ ದನಿಗೂಡಿಸಿ ‘ಪಾಕಿಸ್ತಾನ ಜಿಂದಾಬಾದ್’, ‘ಪಾಕಿಸ್ತಾನ ಆಜಾದಿ’ ಎಂದು ಘೋಷಣೆ ಕೂಗಿದ್ದರು. ಅದನ್ನು ವಾಟ್ಸ್ಆ್ಯಪ್ ಗ್ರೂಪ್ಗೆ ಕಳುಹಿಸಿದ್ದರು.</p>.<p>ವಿಡಿಯೊ ವೈರಲ್ ಆಗುತ್ತಿದ್ದಂತೆಯೇ ಕಾಲೇಜಿನ ಪ್ರಾಚಾರ್ಯ ಬಸವರಾಜ ಅಣಾಮಿ ಅವರು, ಶನಿವಾರ ವಿದ್ಯಾರ್ಥಿಗಳ ವಿಚಾರಣೆ ನಡೆಸಿದರು. ಬಜರಂಗ ದಳದ ಕಾರ್ಯಕರ್ತರು ಪ್ರಾಚಾರ್ಯರ ಕೊಠಡಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪರಿಸ್ಥಿತಿ ಬಿಗಡಾಯಿಸುತ್ತಿರುವುದನ್ನು ಗಮನಿಸಿದ ಪ್ರಾಚಾರ್ಯರು, ಗೋಕುಲ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದರು.</p>.<p>‘ವಿಡಿಯೊವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಹಿಸಲಾಗುವುದು’ ಎಂದು ಪೊಲೀಸ್ ಕಮಿಷನರ್ ಆರ್. ದಿಲೀಪ್ ತಿಳಿಸಿದರು.</p>.<p>ಈ ಮೂವರೂ ವಿದ್ಯಾರ್ಥಿಗಳು ಸರ್ಕಾರಿ ಕೋಟಾದಡಿ ಆಯ್ಕೆಯಾಗಿದ್ದು, ಅವರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ ಎಂದು ಪ್ರಾಚಾರ್ಯ ಬಸವರಾಜ ಅಣಾಮಿ ಹೇಳಿದರು.</p>.<p><strong>ವಾದ ಮಂಡಿಸದಿರಲು ನಿರ್ಣಯ:</strong> ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಪರ ಯಾರೂ ವಾದ ಮಂಡಿಸಬಾರದು ಎಂದು ಹುಬ್ಬಳ್ಳಿ ವಕೀಲರ ಸಂಘ ನಿರ್ಣಯಿಸಿದೆ.</p>.<p>ಸಂಘದ ಸಭೆಯಲ್ಲಿ ಈಗಾಗಲೇ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ ಸಂಘದ ಸರ್ವ ಸದಸ್ಯರ ಸಭೆ ಕರೆದು ವಿಷಯ ತಿಳಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ಗುರು ಹಿರೇಮಠ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಯುವ ವಕೀಲರ ಸಂಘವೂ ವಾದ ಮಂಡಿಸದಿರುವ ನಿರ್ಣಯ ಕೈಗೊಂಡಿದೆ ಎಂದು ಸಂಘದ ಅಧ್ಯಕ್ಷ ಅಶೋಕ ಅಣ್ವೇಕರ್ ತಿಳಿಸಿದ್ದಾರೆ.</p>.<p>*<br />ಸರ್ಕಾರಿ ಕೋಟಾದಡಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು. ವಿಡಿಯೊ ಗಮನಿಸಿ ಪೊಲೀಸರಿಗೆ ದೂರು ನೀಡಿದ್ದೇವೆ. ಕಾಲೇಜಿನಿಂದ ಅಮಾನತು ಮಾಡಲಾಗಿದೆ.<br /><em><strong>-ಬಸವರಾಜ ಅಣಾಮಿ, ಕಾಲೇಜಿನ ಪ್ರಾಚಾರ್ಯರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>