ಬೆಂಗಳೂರು: ‘ಸಮಾಜದಲ್ಲಿ ಭಿನ್ನಭಿನ್ನ ಸ್ವರೂಪಗಳಲ್ಲಿ ವ್ಯಾಪಿಸಿರುವ ಲಂಚಗುಳಿತನ, ಸಾರ್ವಜನಿಕ ಆಡಳಿತಕ್ಕೆ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸಿದೆ’ ಎಂದು ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ‘ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ನೌಕರರೂ ಭ್ರಷ್ಟಾಚಾರ ನಿಗ್ರಹ (ಪಿಸಿ) ಕಾಯ್ದೆ ವ್ಯಾಪ್ತಿಗೆ ಒಳಪಡುತ್ತಾರೆ’ ಎಂದು ಮಹತ್ವದ ಆದೇಶ ನೀಡಿದೆ.