<p><strong>ಬೆಂಗಳೂರು:</strong> ‘ಶಾಸಕ ಕೆ.ಎನ್. ರಾಜಣ್ಣ ಇತ್ತೀಚೆಗೆ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಸವಿತಾ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಅವರು ಕೂಡಲೇ ಕ್ಷಮೆ ಕೇಳಬೇಕು’ ಎಂದು ರಾಜ್ಯ ಸವಿತಾ ಸಮುದಾಯದ ಕಾರ್ಯಾಧ್ಯಕ್ಷ ಬೈಲಪ್ಪ ನಾರಾಯಣ ಸ್ವಾಮಿ ಆಗ್ರಹಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಶಾಸಕರು ಬಳಸಿದ ಪದದಿಂದಾಗಿ ನಮ್ಮ ಸಮುದಾಯಕ್ಕೆ ನೋವುಂಟಾಗಿದೆ. ರಾಜಣ್ಣ ಅವರ ಹೇಳಿಕೆಯನ್ನು ವಾಹಿನಿಯವರು ಪ್ರಶ್ನಿಸಬಹುದಿತ್ತು. ಅಲ್ಲದೇ ಆ ನಿರ್ದಿಷ್ಟ ತುಣುಕು ಪ್ರಸಾರವಾಗದಂತೆ ಎಚ್ಚರ ವಹಿಸಬೇಕಿತ್ತು’ ಎಂದು ಹೇಳಿದರು.</p>.<p>ಪ್ರಧಾನ ಕಾರ್ಯದರ್ಶಿ ಕೆ. ಬಾಲಕೃಷ್ಣ ಮಾತನಾಡಿ, ‘ಇದೇ ರೀತಿ ಹಿಂದೆ ಆಕ್ಷೇಪಾರ್ಹ ಪದ ಬಳಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ವಿರುದ್ಧ ಪ್ರತಿಭಟಿಸಿದ್ದೆವು. ಸಾರ್ವಜನಿಕರು ಆ ಪದವನ್ನು ಬೈಗುಳವಾಗಿ ಬಳಸಬಾರದು’ ಎಂದು ತಿಳಿಸಿದರು.</p>.<p>‘ಕರ್ನಾಟಕ ದ್ವೇಷ ಭಾಷಣ ಮತ್ತು ಅಪರಾಧ(ತಡೆ) ಮಸೂದೆ 2025’ ಜಾರಿಗೆ ಬಂದರೆ ಇಂಥ ಆಕ್ಷೇಪಾರ್ಹ ಪದ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಅನುಕೂಲವಾಗಲಿದೆ. ಸವಿತಾ ಸಮಾಜದವರು ಈ ಕಾಯ್ದೆ ಬಳಸಿ, ದೂರು ಸಲ್ಲಿಸಬೇಕು’ ಎಂದು ಸಮುದಾಯದ ನಾಯಕಿ ನಾಗವೇಣಿ ತಿಳಿಸಿದರು.</p>.<p>ಸವಿತಾ ಸಮಾಜದ ಮುಖಂಡರಾದ ವೇಣುಗೋಪಾಲ್, ರಾಘವೇಂದ್ರ, ಕೌಶಿಕ್ ಮತ್ತು ಜಿ.ಆರ್. ಅಭೀಷೇಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಶಾಸಕ ಕೆ.ಎನ್. ರಾಜಣ್ಣ ಇತ್ತೀಚೆಗೆ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಸವಿತಾ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಅವರು ಕೂಡಲೇ ಕ್ಷಮೆ ಕೇಳಬೇಕು’ ಎಂದು ರಾಜ್ಯ ಸವಿತಾ ಸಮುದಾಯದ ಕಾರ್ಯಾಧ್ಯಕ್ಷ ಬೈಲಪ್ಪ ನಾರಾಯಣ ಸ್ವಾಮಿ ಆಗ್ರಹಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಶಾಸಕರು ಬಳಸಿದ ಪದದಿಂದಾಗಿ ನಮ್ಮ ಸಮುದಾಯಕ್ಕೆ ನೋವುಂಟಾಗಿದೆ. ರಾಜಣ್ಣ ಅವರ ಹೇಳಿಕೆಯನ್ನು ವಾಹಿನಿಯವರು ಪ್ರಶ್ನಿಸಬಹುದಿತ್ತು. ಅಲ್ಲದೇ ಆ ನಿರ್ದಿಷ್ಟ ತುಣುಕು ಪ್ರಸಾರವಾಗದಂತೆ ಎಚ್ಚರ ವಹಿಸಬೇಕಿತ್ತು’ ಎಂದು ಹೇಳಿದರು.</p>.<p>ಪ್ರಧಾನ ಕಾರ್ಯದರ್ಶಿ ಕೆ. ಬಾಲಕೃಷ್ಣ ಮಾತನಾಡಿ, ‘ಇದೇ ರೀತಿ ಹಿಂದೆ ಆಕ್ಷೇಪಾರ್ಹ ಪದ ಬಳಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ವಿರುದ್ಧ ಪ್ರತಿಭಟಿಸಿದ್ದೆವು. ಸಾರ್ವಜನಿಕರು ಆ ಪದವನ್ನು ಬೈಗುಳವಾಗಿ ಬಳಸಬಾರದು’ ಎಂದು ತಿಳಿಸಿದರು.</p>.<p>‘ಕರ್ನಾಟಕ ದ್ವೇಷ ಭಾಷಣ ಮತ್ತು ಅಪರಾಧ(ತಡೆ) ಮಸೂದೆ 2025’ ಜಾರಿಗೆ ಬಂದರೆ ಇಂಥ ಆಕ್ಷೇಪಾರ್ಹ ಪದ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಅನುಕೂಲವಾಗಲಿದೆ. ಸವಿತಾ ಸಮಾಜದವರು ಈ ಕಾಯ್ದೆ ಬಳಸಿ, ದೂರು ಸಲ್ಲಿಸಬೇಕು’ ಎಂದು ಸಮುದಾಯದ ನಾಯಕಿ ನಾಗವೇಣಿ ತಿಳಿಸಿದರು.</p>.<p>ಸವಿತಾ ಸಮಾಜದ ಮುಖಂಡರಾದ ವೇಣುಗೋಪಾಲ್, ರಾಘವೇಂದ್ರ, ಕೌಶಿಕ್ ಮತ್ತು ಜಿ.ಆರ್. ಅಭೀಷೇಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>