ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯವಾದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ’ ಎಂಬ ಅವರ ಹೇಳಿಕೆ ಖಂಡನೀಯ. ಭಾರತದ ಅಖಂಡತೆ ಮತ್ತು ಸಾರ್ವಭೌಮತ್ವ ಕಾಪಾಡುವುದಾಗಿ ಪ್ರತಿಜ್ಞೆ ಮಾಡಿದ ಜನಪ್ರತಿನಿಧಿಗಳು ಮಾತನಾಡುವ ಮೊದಲು ಆಲೋಚಿಸಬೇಕು ಎಂದರು.