<p><strong>ಬೆಂಗಳೂರು:</strong> ಕರಾವಳಿ ಹಾಗೂ ಮಲೆನಾಡಿನ ಪ್ರವಾಹ ಪರಿಹಾರಕ್ಕೆ ರಾಜ್ಯದ 81 ದೇವಸ್ಥಾನಗಳ ಹುಂಡಿಯಲ್ಲಿರುವ ಒಟ್ಟು ₹12.30 ಕೋಟಿ ನೀಡುವಂತೆ ಮುಜರಾಯಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. ಈ ಮೊತ್ತವನ್ನು ಇಲಾಖೆಯ ಖಾತೆಗೆ ಜಮೆ ಮಾಡಬೇಕು ಎಂದೂ ಸೂಚಿಸಲಾಗಿದೆ.</p>.<p>ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ₹3 ಕೋಟಿ, ನಂಜನಗೂಡು ಶ್ರೀಕಂಠೇಶ್ವರ, ಕೊಲ್ಲೂರು ಮೂಕಾಂಬಿಕಾ ಹಾಗೂ ಮೈಸೂರು ಚಾಮುಂಡೇಶ್ವರಿ ದೇವಸ್ಥಾನ ತಲಾ ₹1 ಕೋಟಿ, ಕಟೀಲು ದುರ್ಗಾಪರಮೇಶ್ವರಿ ₹75 ಲಕ್ಷ, ಬೆಂಗಳೂರಿನ ಬನಶಂಕರಿ, ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ಸ್ವಾಮಿ, ಸವದತ್ತಿ ಯಲ್ಲಮ್ಮ, ಕೊಪ್ಪಳ ಹುಲಿಗೆಮ್ಮ, ಮಂದಾರ್ತಿ ತಲಾ ₹50 ಲಕ್ಷ ನೀಡಬೇಕು ಎಂದು ಸೂಚಿಸಲಾಗಿದೆ. ಉಳಿದ ದೇವಸ್ಥಾನಗಳ ಮೊತ್ತ ₹ 25 ಸಾವಿರದಿಂದ ₹25 ಲಕ್ಷದ ನಡುವೆ ಇದೆ.</p>.<p><strong>ಪ್ರತ್ಯೇಕ ಕೌಂಟರ್</strong></p>.<p>ಕೆಲವು ಸಂಘ ಸಂಸ್ಥೆಗಳು ಹಾಗೂ ಭಕ್ತರು ಧನಸಹಾಯ ನೀಡಲು ಮುಂದೆ ಬಂದಿದ್ದಾರೆ. ಇದಕ್ಕಾಗಿ ಪ್ರಮುಖ ದೇವಸ್ಥಾನಗಳಲ್ಲಿ ಪ್ರತ್ಯೇಕ ಕೌಂಟರ್ ಆರಂಭಿಸಬೇಕು. ಆಯ್ದ ದೇವಸ್ಥಾನಗಳು ನಿಧಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಉದಾರವಾಗಿ ದೇಣಿಗೆ ನೀಡಬೇಕು ಎಂದು ಮುಜರಾಯಿ ಸಚಿವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರಾವಳಿ ಹಾಗೂ ಮಲೆನಾಡಿನ ಪ್ರವಾಹ ಪರಿಹಾರಕ್ಕೆ ರಾಜ್ಯದ 81 ದೇವಸ್ಥಾನಗಳ ಹುಂಡಿಯಲ್ಲಿರುವ ಒಟ್ಟು ₹12.30 ಕೋಟಿ ನೀಡುವಂತೆ ಮುಜರಾಯಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. ಈ ಮೊತ್ತವನ್ನು ಇಲಾಖೆಯ ಖಾತೆಗೆ ಜಮೆ ಮಾಡಬೇಕು ಎಂದೂ ಸೂಚಿಸಲಾಗಿದೆ.</p>.<p>ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ₹3 ಕೋಟಿ, ನಂಜನಗೂಡು ಶ್ರೀಕಂಠೇಶ್ವರ, ಕೊಲ್ಲೂರು ಮೂಕಾಂಬಿಕಾ ಹಾಗೂ ಮೈಸೂರು ಚಾಮುಂಡೇಶ್ವರಿ ದೇವಸ್ಥಾನ ತಲಾ ₹1 ಕೋಟಿ, ಕಟೀಲು ದುರ್ಗಾಪರಮೇಶ್ವರಿ ₹75 ಲಕ್ಷ, ಬೆಂಗಳೂರಿನ ಬನಶಂಕರಿ, ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ಸ್ವಾಮಿ, ಸವದತ್ತಿ ಯಲ್ಲಮ್ಮ, ಕೊಪ್ಪಳ ಹುಲಿಗೆಮ್ಮ, ಮಂದಾರ್ತಿ ತಲಾ ₹50 ಲಕ್ಷ ನೀಡಬೇಕು ಎಂದು ಸೂಚಿಸಲಾಗಿದೆ. ಉಳಿದ ದೇವಸ್ಥಾನಗಳ ಮೊತ್ತ ₹ 25 ಸಾವಿರದಿಂದ ₹25 ಲಕ್ಷದ ನಡುವೆ ಇದೆ.</p>.<p><strong>ಪ್ರತ್ಯೇಕ ಕೌಂಟರ್</strong></p>.<p>ಕೆಲವು ಸಂಘ ಸಂಸ್ಥೆಗಳು ಹಾಗೂ ಭಕ್ತರು ಧನಸಹಾಯ ನೀಡಲು ಮುಂದೆ ಬಂದಿದ್ದಾರೆ. ಇದಕ್ಕಾಗಿ ಪ್ರಮುಖ ದೇವಸ್ಥಾನಗಳಲ್ಲಿ ಪ್ರತ್ಯೇಕ ಕೌಂಟರ್ ಆರಂಭಿಸಬೇಕು. ಆಯ್ದ ದೇವಸ್ಥಾನಗಳು ನಿಧಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಉದಾರವಾಗಿ ದೇಣಿಗೆ ನೀಡಬೇಕು ಎಂದು ಮುಜರಾಯಿ ಸಚಿವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>