<p><strong>ಮಡಿಕೇರಿ:</strong> ಕೊಡಗಿನಲ್ಲಿ ಹುತ್ತರಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಬುಧವಾರ ರಾತ್ರಿ ಕಾವೇರಿಯ ತವರಿನಲ್ಲಿ ‘ಸಿರಿ ಹಬ್ಬ’ವನ್ನು ಆಚರಿಸಲಾಯಿತು.</p>.<p>ಚಳಿಯಲ್ಲಿ ರಾತ್ರಿಯೇ ಗದ್ದೆಗಳಿಗೆ ತೆರಳಿದ ಕೃಷಿಕರು, ಭತ್ತದ ಕದಿರು ಕೊಯ್ಲು ಮಾಡಿ ಧಾನ್ಯಲಕ್ಷ್ಮಿಯನ್ನು ಮೆರವಣಿಗೆ ಮೂಲಕ ಮನೆ ತುಂಬಿಸಿಕೊಂಡರು. ವ್ಯವಸಾಯವನ್ನೇ ನಂಬಿ ಬದುಕುವ ರೈತರು, ಭತ್ತದ ಪೈರು ಬೆಳೆದಾಗ ಅದನ್ನು ಶಾಸ್ತ್ರೋಕ್ತವಾಗಿ ಕಟಾವು ಮಾಡಿ ಮನೆ ತುಂಬಿಸಿಕೊಳ್ಳುವುದೇ ಹುತ್ತರಿ ಹಬ್ಬದ ವಿಶೇಷ.</p>.<p>ಇಗ್ಗುತಪ್ಪ ದೇವಾಲಯದಲ್ಲಿ ಕದಿರು ತೆಗೆದ ಮೇಲೆ ಜಿಲ್ಲೆಯಾದ್ಯಂತ ಹಬ್ಬವನ್ನು ಆಚರಿಸಲಾಯಿತು. ಅರಳಿ, ಮಾವು, ಹಲಸು, ಕುಂಬಳಿ ಹಾಗೂ ಗೇರು ಮರದ ಎಲೆಗಳಿಂದ ನೆರೆ ಕಟ್ಟಲಾಗಿತ್ತು. ಪ್ರಥಮ ಕೊಯ್ಲಿಗೆಂದು ನಿಗದಿಪಡಿಸಿದ್ದ ಗದ್ದೆಯಲ್ಲಿ ಕುಟುಂಬದ ಹಿರಿಯರು, ಪೈರಿಗೆ ಪೂಜೆ ಸಲ್ಲಿಸಿ ಹಾಲು–ಜೇನು ಸಮರ್ಪಿಸಿದರು.</p>.<p>ಕುಟುಂಬದ ಮುಖ್ಯಸ್ಥರು, ಮೂರು ಸುತ್ತು ಗುಂಡು ಹಾರಿಸಿದ ಮೇಲೆ ಕದಿರು ತೆಗೆಯಲಾಯಿತು. ‘ಪೊಲಿ ಪೊಲಿ ದೇವಾ ಪೊಲಿಯೇ ಬಾ...’ ಎಂದು ಘೋಷಣೆ ಕೂಗುತ್ತಾ ಪ್ರಾರ್ಥನೆ ಸಲ್ಲಿಸಿದರು. ನಂತರ, ಕದಿರನ್ನು ಮೂಲಮನೆಗೆ ತರಲಾಯಿತು.</p>.<p>ಬಾಳೆಹಣ್ಣಿನಿಂದ ತಯಾರಿಸಿದ್ದ ತಂಬಿಟ್ಟು, ಏಲಕ್ಕಿ ಪುಟ್, ಗದ್ದೆಯಿಂದ ಕೊಯ್ಲು ಮಾಡಿ ತಂದ ಭತ್ತದ ಅಕ್ಕಿಯ ಪಾಯಸವನ್ನು ಸವಿದ ಕೊಡವರು, ಕೊಡವ ವಾಲಗಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಅವರ ಕೋಲಾಟ, ಕತ್ತಿಯಾಟ್ ಹಬ್ಬಕ್ಕೆ ಮೆರುಗು ತುಂಬಿದವು.</p>.<p>ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯಿಂದ ಕುಶಾಲನಗರ ಸಮೀಪದ ಚಿಕ್ಕಬೆಟ್ಟಗೇರಿ ಗ್ರಾಮದಲ್ಲಿ 26ನೇ ಸಾರ್ವತ್ರಿಕ ‘ಪುತ್ತರಿ ನಮ್ಮೆ’ಯು, ಹಬ್ಬದ ಸಡಗರ ಹೆಚ್ಚಿಸಿತ್ತು.</p>.<p><strong>ಇಂದು ಕೋಲಾಟ:</strong> ಹುತ್ತರಿ ಹಬ್ಬದ ಬಳಿಕ ಒಂದುವಾರ ಜಿಲ್ಲೆಯಲ್ಲಿ ಕೋಲಾಟ, ಕ್ರೀಡಾಕೂಟಗಳು ನಡೆಯಲಿವೆ. ಮಡಿಕೇರಿಯ ಹಳೆಯ ಕೋಟೆ ಆವರಣದಲ್ಲಿ ಗುರುವಾರ ಮಧ್ಯಾಹ್ನ ಪಾಂಡಿರ ಕುಟುಂಬದ ಸಹಯೋಗದಲ್ಲಿ ಹುತ್ತರಿ ಕೋಲಾಟ ಜರುಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗಿನಲ್ಲಿ ಹುತ್ತರಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಬುಧವಾರ ರಾತ್ರಿ ಕಾವೇರಿಯ ತವರಿನಲ್ಲಿ ‘ಸಿರಿ ಹಬ್ಬ’ವನ್ನು ಆಚರಿಸಲಾಯಿತು.</p>.<p>ಚಳಿಯಲ್ಲಿ ರಾತ್ರಿಯೇ ಗದ್ದೆಗಳಿಗೆ ತೆರಳಿದ ಕೃಷಿಕರು, ಭತ್ತದ ಕದಿರು ಕೊಯ್ಲು ಮಾಡಿ ಧಾನ್ಯಲಕ್ಷ್ಮಿಯನ್ನು ಮೆರವಣಿಗೆ ಮೂಲಕ ಮನೆ ತುಂಬಿಸಿಕೊಂಡರು. ವ್ಯವಸಾಯವನ್ನೇ ನಂಬಿ ಬದುಕುವ ರೈತರು, ಭತ್ತದ ಪೈರು ಬೆಳೆದಾಗ ಅದನ್ನು ಶಾಸ್ತ್ರೋಕ್ತವಾಗಿ ಕಟಾವು ಮಾಡಿ ಮನೆ ತುಂಬಿಸಿಕೊಳ್ಳುವುದೇ ಹುತ್ತರಿ ಹಬ್ಬದ ವಿಶೇಷ.</p>.<p>ಇಗ್ಗುತಪ್ಪ ದೇವಾಲಯದಲ್ಲಿ ಕದಿರು ತೆಗೆದ ಮೇಲೆ ಜಿಲ್ಲೆಯಾದ್ಯಂತ ಹಬ್ಬವನ್ನು ಆಚರಿಸಲಾಯಿತು. ಅರಳಿ, ಮಾವು, ಹಲಸು, ಕುಂಬಳಿ ಹಾಗೂ ಗೇರು ಮರದ ಎಲೆಗಳಿಂದ ನೆರೆ ಕಟ್ಟಲಾಗಿತ್ತು. ಪ್ರಥಮ ಕೊಯ್ಲಿಗೆಂದು ನಿಗದಿಪಡಿಸಿದ್ದ ಗದ್ದೆಯಲ್ಲಿ ಕುಟುಂಬದ ಹಿರಿಯರು, ಪೈರಿಗೆ ಪೂಜೆ ಸಲ್ಲಿಸಿ ಹಾಲು–ಜೇನು ಸಮರ್ಪಿಸಿದರು.</p>.<p>ಕುಟುಂಬದ ಮುಖ್ಯಸ್ಥರು, ಮೂರು ಸುತ್ತು ಗುಂಡು ಹಾರಿಸಿದ ಮೇಲೆ ಕದಿರು ತೆಗೆಯಲಾಯಿತು. ‘ಪೊಲಿ ಪೊಲಿ ದೇವಾ ಪೊಲಿಯೇ ಬಾ...’ ಎಂದು ಘೋಷಣೆ ಕೂಗುತ್ತಾ ಪ್ರಾರ್ಥನೆ ಸಲ್ಲಿಸಿದರು. ನಂತರ, ಕದಿರನ್ನು ಮೂಲಮನೆಗೆ ತರಲಾಯಿತು.</p>.<p>ಬಾಳೆಹಣ್ಣಿನಿಂದ ತಯಾರಿಸಿದ್ದ ತಂಬಿಟ್ಟು, ಏಲಕ್ಕಿ ಪುಟ್, ಗದ್ದೆಯಿಂದ ಕೊಯ್ಲು ಮಾಡಿ ತಂದ ಭತ್ತದ ಅಕ್ಕಿಯ ಪಾಯಸವನ್ನು ಸವಿದ ಕೊಡವರು, ಕೊಡವ ವಾಲಗಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಅವರ ಕೋಲಾಟ, ಕತ್ತಿಯಾಟ್ ಹಬ್ಬಕ್ಕೆ ಮೆರುಗು ತುಂಬಿದವು.</p>.<p>ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯಿಂದ ಕುಶಾಲನಗರ ಸಮೀಪದ ಚಿಕ್ಕಬೆಟ್ಟಗೇರಿ ಗ್ರಾಮದಲ್ಲಿ 26ನೇ ಸಾರ್ವತ್ರಿಕ ‘ಪುತ್ತರಿ ನಮ್ಮೆ’ಯು, ಹಬ್ಬದ ಸಡಗರ ಹೆಚ್ಚಿಸಿತ್ತು.</p>.<p><strong>ಇಂದು ಕೋಲಾಟ:</strong> ಹುತ್ತರಿ ಹಬ್ಬದ ಬಳಿಕ ಒಂದುವಾರ ಜಿಲ್ಲೆಯಲ್ಲಿ ಕೋಲಾಟ, ಕ್ರೀಡಾಕೂಟಗಳು ನಡೆಯಲಿವೆ. ಮಡಿಕೇರಿಯ ಹಳೆಯ ಕೋಟೆ ಆವರಣದಲ್ಲಿ ಗುರುವಾರ ಮಧ್ಯಾಹ್ನ ಪಾಂಡಿರ ಕುಟುಂಬದ ಸಹಯೋಗದಲ್ಲಿ ಹುತ್ತರಿ ಕೋಲಾಟ ಜರುಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>