<p><strong>ಬೆಳಗಾವಿ: </strong>‘ರೈತ ವಿರೋಧಿಯಾದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಡಿ.13ರಂದು ವಿಧಾನಮಂಡಲ ಚಳಿಗಾಲದ ಅಧಿವೇಶನದ ವೇಳೆ ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.</p>.<p>‘ಕೇಂದ್ರ ಸರ್ಕಾರವು ಕಾಯ್ದೆಗಳನ್ನು ಶಾಸನಬದ್ಧವಾಗಿ ವಾಪಸ್ ಪಡೆದಿದೆ. ರಾಜ್ಯ ಸರ್ಕಾರವೂ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.</p>.<p>‘ನರೇಂದ್ರ ಮೋದಿ ಅವರು ಪ್ರಧಾನಿ ಆಗುವುದಕ್ಕಿಂತಲೂ ಮುನ್ನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನೀಡಲಾಗುವುದು ಎಂದು ಹೇಳಿದ್ದರು. ಆದರೆ, ಅದು ಅನುಷ್ಠಾನಕ್ಕೆ ಬಂದಿಲ್ಲ. ಕೇಂದ್ರ ಸರ್ಕಾರವು ಇನ್ನಾದರೂ, ಎಂಎಸ್ಪಿಯನ್ನು ಶಾಸನಬದ್ಧಗೊಳಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕಾಯ್ದೆ ವಾಪಸ್ ಪಡೆಯದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ರೈತ ವಿರೋಧಿ ಸರ್ಕಾರ ಎಂದು ಪರಿಗಣಿಸಬೇಕಾಗುತ್ತದೆ. ರೈತರ ಪರ ಇರುವುದಾದರೆ ತಕ್ಷಣ ಕ್ರಮ ವಹಿಸಬೇಕು. ಇಲ್ಲದಿದ್ದರೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಹಲವು ರೈತ ಸಂಘಟನೆಗಳು ಕೈಜೋಡಿಸಲಿವೆ’ ಎಂದರು.</p>.<p>‘ಮುತ್ತಿಗೆ ಹಾಕುತ್ತೇವೆ ಎಂದು ಅನುಮತಿ ಕೇಳಿದರೆ ಪೊಲೀಸರು ಕೊಡುತ್ತಾರೆಯೇ? ಪೊಲೀಸರು ತಡೆಯಲು ಪ್ರಯತ್ನಿಸಲಿ, ನಮ್ಮ ಕೆಲಸ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ಹಲಗಾ–ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿಗೆ ರೈತರು ಜಮೀನು ಕೊಡಲು ನಿರಾಕರಿಸಿದ್ದರೆ. ಹೀಗಿದ್ದರೂ ಪೊಲೀಸರನ್ನು ಬಳಸಿಕೊಂಡು ಜಿಲ್ಲಾಡಳಿತವು ದೌರ್ಜನ್ಯ ನಡೆಸಿರುವುದು ಸರಿಯಲ್ಲ. ಕೂಡಲೇ ಕಾಮಗಾರಿಯನ್ನು ನಿಲ್ಲಿಸಬೇಕು. ಇಂತಹ ವಿಚಾರಗಳಲ್ಲಿ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ರೈತರ ಮೇಲೆ ಗೂಂಡಾಗಿರಿ ಮಾಡುವುದನ್ನು ಸಹಿಸಲಾಗುವುದಿಲ್ಲ’ ಎಂದು ತಿಳಿಸಿದರು.</p>.<p>‘ಅತಿವೃಷ್ಟಿಯಿಂದಾಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ರೈತರಿಗೆ ಆಗಿರುವ ನಷ್ಟವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು. ಎನ್ಡಿಆರ್ಎಫ್ ಮಾರ್ಗಸೂಚಿಯಲ್ಲಿ ಮೂರ್ಕಾಸು ಕೊಟ್ಟು ಕಣ್ಣೊರೆಸುವುದನ್ನು ಬಿಡಬೇಕು. ವೈಜ್ಞಾನಿಕವಾಗಿ ಪರಿಹಾರ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.</p>.<p>ಬಳಿಕ ಅವರು, ತಾಲ್ಲೂಕಿನ ಹಲಗಾ–ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದರು. ಕೆಲವು ರೈತರು ನಮ್ಮ ಜಮೀನು ಉಳಿಸಿಕೊಡುವಂತೆ ಕೋಡಿಹಳ್ಳಿ ಕಾಲಿಗೆ ಬಿದ್ದು ಕೋರಿಕೊಂಡರು. ಅಳಲು ತೋಡಿಕೊಂಡರು. ‘ನಮ್ಮ ಜಮೀನು ಕಸಿದುಕೊಳ್ಳಲಾಗುತ್ತಿದೆ. ಅಕ್ರಮವಾಗಿ ಕಾಮಗಾರಿ ನಡೆಸಲಾಗುತ್ತಿದೆ’ ಎಂದು ಕೆಲವರು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ರೈತ ವಿರೋಧಿಯಾದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಡಿ.13ರಂದು ವಿಧಾನಮಂಡಲ ಚಳಿಗಾಲದ ಅಧಿವೇಶನದ ವೇಳೆ ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.</p>.<p>‘ಕೇಂದ್ರ ಸರ್ಕಾರವು ಕಾಯ್ದೆಗಳನ್ನು ಶಾಸನಬದ್ಧವಾಗಿ ವಾಪಸ್ ಪಡೆದಿದೆ. ರಾಜ್ಯ ಸರ್ಕಾರವೂ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.</p>.<p>‘ನರೇಂದ್ರ ಮೋದಿ ಅವರು ಪ್ರಧಾನಿ ಆಗುವುದಕ್ಕಿಂತಲೂ ಮುನ್ನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನೀಡಲಾಗುವುದು ಎಂದು ಹೇಳಿದ್ದರು. ಆದರೆ, ಅದು ಅನುಷ್ಠಾನಕ್ಕೆ ಬಂದಿಲ್ಲ. ಕೇಂದ್ರ ಸರ್ಕಾರವು ಇನ್ನಾದರೂ, ಎಂಎಸ್ಪಿಯನ್ನು ಶಾಸನಬದ್ಧಗೊಳಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕಾಯ್ದೆ ವಾಪಸ್ ಪಡೆಯದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ರೈತ ವಿರೋಧಿ ಸರ್ಕಾರ ಎಂದು ಪರಿಗಣಿಸಬೇಕಾಗುತ್ತದೆ. ರೈತರ ಪರ ಇರುವುದಾದರೆ ತಕ್ಷಣ ಕ್ರಮ ವಹಿಸಬೇಕು. ಇಲ್ಲದಿದ್ದರೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಹಲವು ರೈತ ಸಂಘಟನೆಗಳು ಕೈಜೋಡಿಸಲಿವೆ’ ಎಂದರು.</p>.<p>‘ಮುತ್ತಿಗೆ ಹಾಕುತ್ತೇವೆ ಎಂದು ಅನುಮತಿ ಕೇಳಿದರೆ ಪೊಲೀಸರು ಕೊಡುತ್ತಾರೆಯೇ? ಪೊಲೀಸರು ತಡೆಯಲು ಪ್ರಯತ್ನಿಸಲಿ, ನಮ್ಮ ಕೆಲಸ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ಹಲಗಾ–ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿಗೆ ರೈತರು ಜಮೀನು ಕೊಡಲು ನಿರಾಕರಿಸಿದ್ದರೆ. ಹೀಗಿದ್ದರೂ ಪೊಲೀಸರನ್ನು ಬಳಸಿಕೊಂಡು ಜಿಲ್ಲಾಡಳಿತವು ದೌರ್ಜನ್ಯ ನಡೆಸಿರುವುದು ಸರಿಯಲ್ಲ. ಕೂಡಲೇ ಕಾಮಗಾರಿಯನ್ನು ನಿಲ್ಲಿಸಬೇಕು. ಇಂತಹ ವಿಚಾರಗಳಲ್ಲಿ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ರೈತರ ಮೇಲೆ ಗೂಂಡಾಗಿರಿ ಮಾಡುವುದನ್ನು ಸಹಿಸಲಾಗುವುದಿಲ್ಲ’ ಎಂದು ತಿಳಿಸಿದರು.</p>.<p>‘ಅತಿವೃಷ್ಟಿಯಿಂದಾಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ರೈತರಿಗೆ ಆಗಿರುವ ನಷ್ಟವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು. ಎನ್ಡಿಆರ್ಎಫ್ ಮಾರ್ಗಸೂಚಿಯಲ್ಲಿ ಮೂರ್ಕಾಸು ಕೊಟ್ಟು ಕಣ್ಣೊರೆಸುವುದನ್ನು ಬಿಡಬೇಕು. ವೈಜ್ಞಾನಿಕವಾಗಿ ಪರಿಹಾರ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.</p>.<p>ಬಳಿಕ ಅವರು, ತಾಲ್ಲೂಕಿನ ಹಲಗಾ–ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದರು. ಕೆಲವು ರೈತರು ನಮ್ಮ ಜಮೀನು ಉಳಿಸಿಕೊಡುವಂತೆ ಕೋಡಿಹಳ್ಳಿ ಕಾಲಿಗೆ ಬಿದ್ದು ಕೋರಿಕೊಂಡರು. ಅಳಲು ತೋಡಿಕೊಂಡರು. ‘ನಮ್ಮ ಜಮೀನು ಕಸಿದುಕೊಳ್ಳಲಾಗುತ್ತಿದೆ. ಅಕ್ರಮವಾಗಿ ಕಾಮಗಾರಿ ನಡೆಸಲಾಗುತ್ತಿದೆ’ ಎಂದು ಕೆಲವರು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>