ಸೋಮವಾರ, 29 ಡಿಸೆಂಬರ್ 2025
×
ADVERTISEMENT
ADVERTISEMENT

ಕೋಗಿಲು ಒತ್ತುವರಿ ತೆರವು | ಸಿಎಂ ಸಭೆ ಇಂದು: ಸಚಿವ ಜಮೀರ್‌ ಅಹಮದ್‌ ಖಾನ್‌

Published : 28 ಡಿಸೆಂಬರ್ 2025, 23:30 IST
Last Updated : 28 ಡಿಸೆಂಬರ್ 2025, 23:30 IST
ಫಾಲೋ ಮಾಡಿ
Comments
ಸರ್ಕಾರದ ಕ್ರಮ ಸಮರ್ಥಿಸಿಕೊಂಡು ಕೇರಳ ಮುಖ್ಯಮಂತ್ರಿಗೆ ಉತ್ತರ ನೀಡಿರುವ ನೀವು ಎಐಸಿಸಿಯ ನಿಮ್ಮ ಬಾಸ್‌ ವೇಣುಗೋಪಾಲ್ ಅವರಿಗೆ ಅದೇ ಧಾಟಿಯಲ್ಲಿ ಉತ್ತರ ನೀಡುವ ಧೈರ್ಯ ಇದೆಯಾ?
ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ಕಾನೂನು ಪ್ರಕಾರ ಕ್ರಮ: ಡಿಕೆಶಿ
‘ಕೋಗಿಲು ಗ್ರಾಮದಲ್ಲಿ ಸ್ಥಳೀಯ ವ್ಯಕ್ತಿಯೊಬ್ಬ ಹಣ ಪಡೆದುಕೊಂಡು ಗುಡಿಸಲು ನಿರ್ಮಿಸಿಕೊಳ್ಳಲು ಬಿಟ್ಟಿದ್ದಾನೆ. ಈ ಬಗ್ಗೆ ವರದಿ ತರಿಸಿಕೊಂಡಿದ್ದೇನೆ. ಇಲ್ಲಿ ಎಲ್ಲ ಸಮುದಾಯದವರೂ ಇದ್ದು ಕಾನೂನು ಪ್ರಕಾರವೇ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು ‘ಕೆ.ಸಿ.ವೇಣುಗೋಪಾಲ್‌ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿ. ಅವರು ನಮಗೆ ಸಲಹೆ ನೀಡಬಾರದೆ? ಬಿಜೆಪಿ ರಾಷ್ಟ್ರೀಯ ನಾಯಕರು ನೀಡುವ ಸಲಹೆಯನ್ನು ರಾಜ್ಯ ನಾಯಕರು ಕೇಳುವುದಿಲ್ಲವೇ’ ಎಂದು ಅವರು ಪ್ರಶ್ನಿಸಿದರು.
ಬುಲ್ಡೋಜರ್ ನೀತಿ: ಶಾಸಕ ಜಲೀಲ್
‘ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಅವರ ಸರ್ಕಾರದ ಬುಲ್ಡೋಜರ್‌ ನೀತಿಯನ್ನು ಕರ್ನಾಟಕ ಸರ್ಕಾರ ಅನುಸರಿಸುತ್ತಿದೆ’ ಎಂದು ಕೇರಳ ಆಡಳಿತಾರೂಢ ಎಲ್‌ಡಿಎಫ್‌ ಶಾಸಕ ಕೆ.ಟಿ.ಜಲೀಲ್‌ ಆಪಾದಿಸಿದರು. ಭಾನುವಾರ ಕೋಗಿಲು ಗ್ರಾಮಕ್ಕೆ ಭೇಟಿ ನೀಡಿ ನಿರಾಶ್ರಿತರ ಜತೆ ಮಾತುಕತೆ ನಡೆಸಿದ ಅವರು ಸುದ್ದಿಗಾರರ ಜತೆ ಮಾತನಾಡಿದರು. ರಾಜ್ಯಸಭೆಯ ಎಲ್‌ಡಿಎಫ್‌ ಸದಸ್ಯ ಎ.ಎ.ರಹೀಂ ಅವರು ಶನಿವಾರ ಇಲ್ಲಿಗೆ ಭೇಟಿ ನೀಡಿ ನಿರಾಶ್ರಿತರ ಜತೆ ಚರ್ಚೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT