‘ಕೋಲಾರ ಟಿಕೆಟ್ ಆಯ್ಕೆ ವಿಚಾರದಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ಸಚಿವ ಮುನಿಯಪ್ಪ ಅವರು ಗೆಲ್ಲುವ ತಂತ್ರಗಾರಿಕೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು. ಎಸ್ಸಿ ಎಡಗೈ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದೂ ಅವರು ಮನವರಿಕೆ ಮಾಡಿಕೊಟ್ಟಿದ್ದರು ಎಂದು ಸುರ್ಜೇವಾಲ ಹೇಳಿದ್ದಾರೆ.
ಮುಂದುವರಿದು, ಕೋಲಾರ ಕ್ಷೇತ್ರದ ಎಲ್ಲಾ ಕಾಂಗ್ರೆಸ್ ನಾಯಕರ ಅಭಿಪ್ರಾಯ ಕೂಡ ಕೇಳಿದ್ದೇವೆ. ಕೇಂದ್ರ ಚುನಾವಣಾ ಸಮಿತಿ ಯಾವುದೇ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೂ ಕೆಲಸ ಮಾಡುತ್ತೇವೆಂದು ಹೇಳಿದರು. ವೈಯಕ್ತಿಕ ಭಿನ್ನಾಭಿಪ್ರಾಯ ಏನೇ ಇದ್ದರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ ಇರುತ್ತೇವೆ ಎಂದೂ ಹೇಳಿದರು. ಏಳು ಬಾರಿ ಸಂಸದರಾಗಿರುವ ಮುನಿಯಪ್ಪ ಕೂಡ ಪಕ್ಷಕ್ಕಾಗಿ ಯಾವುದೇ ತ್ಯಾಗ ಮಾಡಲು ಸಿದ್ದ ಎಂದಿದ್ದಾರೆ. ಒಟ್ಟಿಗೆ ಚುನಾವಣಾ ನಡೆಸಿ ಅಭ್ಯರ್ಥಿಯನ್ನು ಗೆಲ್ಲಿಸುವ ಅಭಿಪ್ರಾಯ ಹೊಂದಿದ್ದಾರೆ’ ಎಂದು ಸುರ್ಜೇವಾಲ ಪೋಸ್ಟ್ ಮಾಡಿದ್ದಾರೆ.