<p>ಕೋಲಾರ: ರಾಜ್ಯದಲ್ಲಿ ನಿರುದ್ಯೋಗಿಗಳ ಸಂಖ್ಯೆ ವರ್ಷಗಳು ಕಳೆದಂತೆ ಹೆಚ್ಚಾಗುತ್ತಿದೆ. ಖಾಲಿ ಇರುವ 2.84 ಲಕ್ಷ ಹುದ್ದೆಗಳಿಗೆ ಸರ್ಕಾರ ಈ ಕೂಡಲೇ ನೇಮಕಾತಿ ಮಾಡಿ ನಿರುದ್ಯೋಗಿಗಳಿಗೆ ನ್ಯಾಯ ಒದಗಿಸಬೇಕು ಎಂದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರ ಎ.ಪ್ರಮೋದ್ ಕುಮಾರ್ ಆಗ್ರಹಿಸಿದರು.</p>.<p>ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೇಮಕಾತಿ ವಿಷಯದಲ್ಲಿ ಸರ್ಕಾರ ಕೇವಲ ಭರವಸೆ ನೀಡಿ ಕಾಲಹರಣ ಮಾಡುತ್ತಿದೆಯೇ ಹೊರತು, ಅಧಿಸೂಚನೆ ಹೊರಡಿಸಿಲ್ಲ ಎಂದರು.</p>.<p>ನೇಮಕಾತಿ ವಿಳಂಬ ಧೋರಣೆ ಖಂಡಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಹೋರಾಟ ನಡೆಸಿದರೂ ಸರ್ಕಾರ ಮಣಿಯುತ್ತಿಲ್ಲ. ರಾಜ್ಯದ ಬಜೆಟ್ನಲ್ಲಿ 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸರ್ಕಾರ ತಿಳಿಸಿದೆ. ಕೇವಲ ಆಶ್ವಾಸನೆಗ ನೀಡುವುದನ್ನು ಬಿಟ್ಟು ತಕ್ಷಣ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಪನ್ಮೂಲ ವ್ಯಕ್ತಿ ಎಸ್.ಆರ್.ರಾಕೇಶ್, ‘ಸರ್ಕಾರವು ಕೇವಲ ಮೀಸಲಾತಿ, ಒಳಮೀಸಲಾತಿ ಎಂದು ಕಥೆ ಹೇಳಿ ನೇಮಕಾತಿ ಮಾಡದೆ ಕಾಲಹರಣ ಮಾಡುತ್ತಿದೆ. ಅಭ್ಯರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ’ ಎಂದು ದೂರಿದರು.</p>.<p>ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಜಿ.ಮುರಳಿ, ‘ಕೆಪಿಎಸ್ಸಿ ಪರೀಕ್ಷೆಗಳಲ್ಲಿ ನಿರಂತರ ಅಕ್ರಮಗಳ ಸದ್ದು ಕೇಳಿ ಬರುತ್ತಿದೆ. ತನಿಖೆ ಮಾಡಿ ಅಕ್ರಮ ಎಸಗಿದ ಯಾರೊಬ್ಬರನ್ನೂ ಬಿಡದೆ ಶಿಕ್ಷೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಬಿ.ಗೋಪಾಲ್, ಶಶಿಕುಮಾರ್, .ಪ್ರಸನ್ನ ಕುಮಾರ್,ಎಸ್. ಮುಕ್ತಾನಂದ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-18-1381989462</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ರಾಜ್ಯದಲ್ಲಿ ನಿರುದ್ಯೋಗಿಗಳ ಸಂಖ್ಯೆ ವರ್ಷಗಳು ಕಳೆದಂತೆ ಹೆಚ್ಚಾಗುತ್ತಿದೆ. ಖಾಲಿ ಇರುವ 2.84 ಲಕ್ಷ ಹುದ್ದೆಗಳಿಗೆ ಸರ್ಕಾರ ಈ ಕೂಡಲೇ ನೇಮಕಾತಿ ಮಾಡಿ ನಿರುದ್ಯೋಗಿಗಳಿಗೆ ನ್ಯಾಯ ಒದಗಿಸಬೇಕು ಎಂದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರ ಎ.ಪ್ರಮೋದ್ ಕುಮಾರ್ ಆಗ್ರಹಿಸಿದರು.</p>.<p>ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೇಮಕಾತಿ ವಿಷಯದಲ್ಲಿ ಸರ್ಕಾರ ಕೇವಲ ಭರವಸೆ ನೀಡಿ ಕಾಲಹರಣ ಮಾಡುತ್ತಿದೆಯೇ ಹೊರತು, ಅಧಿಸೂಚನೆ ಹೊರಡಿಸಿಲ್ಲ ಎಂದರು.</p>.<p>ನೇಮಕಾತಿ ವಿಳಂಬ ಧೋರಣೆ ಖಂಡಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಹೋರಾಟ ನಡೆಸಿದರೂ ಸರ್ಕಾರ ಮಣಿಯುತ್ತಿಲ್ಲ. ರಾಜ್ಯದ ಬಜೆಟ್ನಲ್ಲಿ 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸರ್ಕಾರ ತಿಳಿಸಿದೆ. ಕೇವಲ ಆಶ್ವಾಸನೆಗ ನೀಡುವುದನ್ನು ಬಿಟ್ಟು ತಕ್ಷಣ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಪನ್ಮೂಲ ವ್ಯಕ್ತಿ ಎಸ್.ಆರ್.ರಾಕೇಶ್, ‘ಸರ್ಕಾರವು ಕೇವಲ ಮೀಸಲಾತಿ, ಒಳಮೀಸಲಾತಿ ಎಂದು ಕಥೆ ಹೇಳಿ ನೇಮಕಾತಿ ಮಾಡದೆ ಕಾಲಹರಣ ಮಾಡುತ್ತಿದೆ. ಅಭ್ಯರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ’ ಎಂದು ದೂರಿದರು.</p>.<p>ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಜಿ.ಮುರಳಿ, ‘ಕೆಪಿಎಸ್ಸಿ ಪರೀಕ್ಷೆಗಳಲ್ಲಿ ನಿರಂತರ ಅಕ್ರಮಗಳ ಸದ್ದು ಕೇಳಿ ಬರುತ್ತಿದೆ. ತನಿಖೆ ಮಾಡಿ ಅಕ್ರಮ ಎಸಗಿದ ಯಾರೊಬ್ಬರನ್ನೂ ಬಿಡದೆ ಶಿಕ್ಷೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಬಿ.ಗೋಪಾಲ್, ಶಶಿಕುಮಾರ್, .ಪ್ರಸನ್ನ ಕುಮಾರ್,ಎಸ್. ಮುಕ್ತಾನಂದ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-18-1381989462</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>