<p><strong>ನವದೆಹಲಿ:</strong> ‘ಕೋಲಾರ ಜಿಲ್ಲೆ ಬರಪೀಡಿತ ಜಿಲ್ಲೆಯಾಗಿದೆ. ನೀರಿನ ಮೂಲಗಳಿಲ್ಲ. ಹಾಗಾಗಿ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿಯಿಂದ ನೀರು ಒದಗಿಸಬೇಕು’ ಎಂದು ಕೋಲಾರ ಸಂಸದ ಎಂ.ಮಲ್ಲೇಶಬಾಬು ಆಗ್ರಹಿಸಿದರು. </p>.ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು: ತಗ್ಗು ಪ್ರದೇಶಗಳು ಜಲಾವೃತ.<p>ಲೋಕಸಭೆಯಲ್ಲಿ ಗುರುವಾರ ಕೇಂದ್ರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಶ್ರೀನಿವಾಸಪುರ ಮಾವು ಬೆಳೆಗೆ ಪ್ರಸಿದ್ಧವಾಗಿದೆ. ಆದರೆ, ಸಂಸ್ಕರಣೆಗೆ ವ್ಯವಸ್ಥೆ ಇಲ್ಲ. ಜಿಲ್ಲೆಯಲ್ಲಿ ಆಹಾರ ಸಂಸ್ಕರಣ ಘಟಕ ಸ್ಥಾಪಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. </p><p>2016ರ ಬಜೆಟ್ನಲ್ಲಿ ಕೋಲಾರಕ್ಕೆ ರೈಲ್ವೆ ಕೋಚ್ ಫ್ಯಾಕ್ಟರಿ ಘೋಷಣೆಯಾಗಿದೆ. ಅದನ್ನು ಕಾರ್ಯರೂಪಕ್ಕೆ ತರಬೇಕು. ಕೆಜಿಎಫ್ನಲ್ಲಿರುವ ಬಿಇಎಂಎಲ್ನ ನೌಕರರ ಕಾಯಂಗೊಳಿಸಬೇಕು. ಹೊಸಕೋಟೆ–ಮದನಪಲ್ಲಿ ಸೇರಿದಂತೆ ಹಲವು ಹೆದ್ದಾರಿಗಳನ್ನು ಮೇಲ್ದರ್ಜೆಗೆ ಏರಿಸಬೇಕು ಎಂದು ಅವರು ಒತ್ತಾಯಿಸಿದರು.</p> .ಕೋಲಾರಕ್ಕೆ ಕೃಷ್ಣಾ ನೀರು: ಮಲ್ಲೇಶಬಾಬು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೋಲಾರ ಜಿಲ್ಲೆ ಬರಪೀಡಿತ ಜಿಲ್ಲೆಯಾಗಿದೆ. ನೀರಿನ ಮೂಲಗಳಿಲ್ಲ. ಹಾಗಾಗಿ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿಯಿಂದ ನೀರು ಒದಗಿಸಬೇಕು’ ಎಂದು ಕೋಲಾರ ಸಂಸದ ಎಂ.ಮಲ್ಲೇಶಬಾಬು ಆಗ್ರಹಿಸಿದರು. </p>.ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು: ತಗ್ಗು ಪ್ರದೇಶಗಳು ಜಲಾವೃತ.<p>ಲೋಕಸಭೆಯಲ್ಲಿ ಗುರುವಾರ ಕೇಂದ್ರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಶ್ರೀನಿವಾಸಪುರ ಮಾವು ಬೆಳೆಗೆ ಪ್ರಸಿದ್ಧವಾಗಿದೆ. ಆದರೆ, ಸಂಸ್ಕರಣೆಗೆ ವ್ಯವಸ್ಥೆ ಇಲ್ಲ. ಜಿಲ್ಲೆಯಲ್ಲಿ ಆಹಾರ ಸಂಸ್ಕರಣ ಘಟಕ ಸ್ಥಾಪಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. </p><p>2016ರ ಬಜೆಟ್ನಲ್ಲಿ ಕೋಲಾರಕ್ಕೆ ರೈಲ್ವೆ ಕೋಚ್ ಫ್ಯಾಕ್ಟರಿ ಘೋಷಣೆಯಾಗಿದೆ. ಅದನ್ನು ಕಾರ್ಯರೂಪಕ್ಕೆ ತರಬೇಕು. ಕೆಜಿಎಫ್ನಲ್ಲಿರುವ ಬಿಇಎಂಎಲ್ನ ನೌಕರರ ಕಾಯಂಗೊಳಿಸಬೇಕು. ಹೊಸಕೋಟೆ–ಮದನಪಲ್ಲಿ ಸೇರಿದಂತೆ ಹಲವು ಹೆದ್ದಾರಿಗಳನ್ನು ಮೇಲ್ದರ್ಜೆಗೆ ಏರಿಸಬೇಕು ಎಂದು ಅವರು ಒತ್ತಾಯಿಸಿದರು.</p> .ಕೋಲಾರಕ್ಕೆ ಕೃಷ್ಣಾ ನೀರು: ಮಲ್ಲೇಶಬಾಬು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>