<p><strong>ಬೆಂಗಳೂರು</strong>: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘದ (ಕೋಮುಲ್) ನೇಮಕಾತಿ ಅಕ್ರಮ ಪ್ರಕರಣದಲ್ಲಿ, ಸಂಘದ ಅಧ್ಯಕ್ಷ ಮತ್ತು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ₹1.32 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ. </p>.<p>ಸರ್ಕಾರಿ ಜಮೀನು ಮಂಜೂರಾತಿ ಪ್ರಕರಣವೊಂದರ ತನಿಖೆಯ ಭಾಗವಾಗಿ ನಂಜೇಗೌಡ ಅವರ ಮನೆಯಲ್ಲಿ ಶೋಧ ನಡೆಸಿದ್ದ ಇ.ಡಿ ಅಧಿಕಾರಿಗಳು, 2023ರಲ್ಲಿ ಕೋಮುಲ್ನ ವಿವಿಧ ಹುದ್ದೆಗಳಿಗೆ ನಡೆಸಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ದೊರೆತಿದೆ ಎಂದು ತಿಳಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದರು. ಜತೆಗೆ ಕರ್ನಾಟಕ ಲೋಕಾಯುಕ್ತಕ್ಕೂ ಪತ್ರ ಬರೆದಿದ್ದರು.</p>.<p>ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೋಮುಲ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿತ್ತು. ಅಭ್ಯರ್ಥಿಗಳ ಒಎಂಆರ್ ಶೀಟ್ಗಳನ್ನು ತಿದ್ದಿ, ತಮ್ಮ ಶಿಫಾರಸಿನವರಿಗೆ ನೇಮಕಾತಿ ನೀಡಿ ಎಂದು ನಂಜೇಗೌಡ ಅವರು ಕೋಮುಲ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು. ಈ ಅಕ್ರಮದಲ್ಲಿ ಕೋಮುಲ್ನ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಗೋಪಾಲಮೂರ್ತಿ ಭಾಗಿಯಾಗಿದ್ದರು ಎಂದು ಇ.ಡಿ ಹೇಳಿತ್ತು.</p>.<p>ಈ ಅಕ್ರಮದ ಮೂಲಕ ಇಬ್ಬರೂ ಅಭ್ಯರ್ಥಿಗಳಿಂದ ಒಟ್ಟು ₹1.56 ಕೋಟಿ ವಸೂಲಿ ಮಾಡಿದ್ದರು. ನಂಜೇಗೌಡ ಒಬ್ಬರೇ ₹80 ಲಕ್ಷ ಪಡೆದುಕೊಂಡಿದ್ದರು ಎಂದು ಇ.ಡಿ ಮಾಹಿತಿ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘದ (ಕೋಮುಲ್) ನೇಮಕಾತಿ ಅಕ್ರಮ ಪ್ರಕರಣದಲ್ಲಿ, ಸಂಘದ ಅಧ್ಯಕ್ಷ ಮತ್ತು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ₹1.32 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ. </p>.<p>ಸರ್ಕಾರಿ ಜಮೀನು ಮಂಜೂರಾತಿ ಪ್ರಕರಣವೊಂದರ ತನಿಖೆಯ ಭಾಗವಾಗಿ ನಂಜೇಗೌಡ ಅವರ ಮನೆಯಲ್ಲಿ ಶೋಧ ನಡೆಸಿದ್ದ ಇ.ಡಿ ಅಧಿಕಾರಿಗಳು, 2023ರಲ್ಲಿ ಕೋಮುಲ್ನ ವಿವಿಧ ಹುದ್ದೆಗಳಿಗೆ ನಡೆಸಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ದೊರೆತಿದೆ ಎಂದು ತಿಳಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದರು. ಜತೆಗೆ ಕರ್ನಾಟಕ ಲೋಕಾಯುಕ್ತಕ್ಕೂ ಪತ್ರ ಬರೆದಿದ್ದರು.</p>.<p>ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೋಮುಲ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿತ್ತು. ಅಭ್ಯರ್ಥಿಗಳ ಒಎಂಆರ್ ಶೀಟ್ಗಳನ್ನು ತಿದ್ದಿ, ತಮ್ಮ ಶಿಫಾರಸಿನವರಿಗೆ ನೇಮಕಾತಿ ನೀಡಿ ಎಂದು ನಂಜೇಗೌಡ ಅವರು ಕೋಮುಲ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು. ಈ ಅಕ್ರಮದಲ್ಲಿ ಕೋಮುಲ್ನ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಗೋಪಾಲಮೂರ್ತಿ ಭಾಗಿಯಾಗಿದ್ದರು ಎಂದು ಇ.ಡಿ ಹೇಳಿತ್ತು.</p>.<p>ಈ ಅಕ್ರಮದ ಮೂಲಕ ಇಬ್ಬರೂ ಅಭ್ಯರ್ಥಿಗಳಿಂದ ಒಟ್ಟು ₹1.56 ಕೋಟಿ ವಸೂಲಿ ಮಾಡಿದ್ದರು. ನಂಜೇಗೌಡ ಒಬ್ಬರೇ ₹80 ಲಕ್ಷ ಪಡೆದುಕೊಂಡಿದ್ದರು ಎಂದು ಇ.ಡಿ ಮಾಹಿತಿ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>