<p><strong>ಬೆಂಗಳೂರು:</strong> ಕೊಪ್ಪಳದಲ್ಲಿ ವಾಲ್ಮೀಕಿ ಸಮಾಜದ ಯುವಕ ಗವಿ ಸಿದ್ದಪ್ಪ ಅವರನ್ನು ಹತ್ಯೆ ಮಾಡಿದ ಪ್ರಕರಣವನ್ನು ಎನ್ಐಎಗೆ ಒಪ್ಪಿಸುವಂತೆ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.</p>.<p>ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಎಂಬ ಕಾರಣಕ್ಕೆ ಗವಿ ಸಿದ್ಧಪ್ಪ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಹೇಳಿದರು. ಸರ್ಕಾರ ತಕ್ಷಣವೇ ಉತ್ತರ ನೀಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಒಕ್ಕೊರಲಿನಿಂದ ಆಗ್ರಹಿಸಿದರು.</p>.<p>ಕೊಲೆಗಾರರು ಕೊಲೆ ಮಾಡುವುದಕ್ಕೂ ಮೊದಲೇ ಇನ್ಸ್ಟಾಗ್ರಾಂನಲ್ಲಿ ಕೊಲೆಯ ಬೆದರಿಕೆ ಹಾಕಿದ್ದರು. ಆದರೆ, ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಗವಿಸಿದ್ಧಪ್ಪ ಅವರದು ಬಡ ಕುಟುಂಬ. ಕೂಲಿ ಕೆಲಸ ಮಾಡುತ್ತಿದ್ದಾರೆ. ಆ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು. ಇವರ ಕುಟುಂಬದ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.</p>.<p>ವಿರೋಧಪಕ್ಷದ ನಾಯಕ ಆರ್.ಅಶೋಕ, ಡಾ.ಸಿ.ಎನ್.ಅಶ್ವತ್ಥನಾರಾಯಣ ಸೇರಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸರ್ಕಾರ ತಕ್ಷಣವೇ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. </p>.<h2>ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಿಜೆಪಿ–ಜೆಡಿಎಸ್ </h2>.<p>ಗವಿಸಿದ್ದಪ್ಪ ಅವರ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಬಿಜೆಪಿ–ಜೆಡಿಎಸ್ ನಿಯೋಗ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಬುಧವಾರ ಮನವಿ ಸಲ್ಲಿಸಿತು.</p><p> ಭೇಟಿಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮಾಜಿ ಸಚಿವ ಬಿ.ಶ್ರೀರಾಮುಲು ‘ಬೀದರ್ ಕಲಬುರಗಿ ರಾಯಚೂರು ಬಳ್ಳಾರಿ ಕೊಪ್ಪಳದ ಜನತೆ ಜಾತ್ಯತೀವಾಗಿ ಎಲ್ಲರನ್ನೂ ಪ್ರೀತಿಸುವವರು. ಆದರೆ ಗ್ಯಾರಂಟಿ ಸರ್ಕಾರ ಬಂದ ಬಳಿಕ ಬಡವರ ಹಿಂದೂಪರ ಕಾರ್ಯಕರ್ತರ ಪ್ರಾಣಕ್ಕೆ ಗ್ಯಾರಂಟಿ ಇಲ್ಲವಾಗಿದೆ’ ಎಂದರು.</p><p> ‘ಗುಪ್ತಚರ ಇಲಾಖೆ ವೈಫಲ್ಯವಾಗಿದೆ. ಇದರ ಹೊಣೆ ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿಯವರಿಗೆ ಕುರ್ಚಿ ಉಳಿಸಿಕೊಳ್ಳುವುದನ್ನು ಬಿಟ್ಟು ಬೇರೇನೂ ಮಾಡುತ್ತಿಲ್ಲ’ ಎಂದು ಅವರು ದೂರಿದರು. </p><p>‘ಮುಸ್ಲಿಂ ಹುಡುಗಿಯನ್ನು ಪ್ರೀತಿ ಮಾಡಿದ ಕಾರಣಕ್ಕೆ ಗವಿ ಸಿದ್ದಪ್ಪ ನಾಯಕ ಹತ್ಯೆಯಾಗಿದ್ದಾನೆ. ಯಾರೂ ಪ್ರೀತಿ ಮಾಡಬಾರದೇ? ಅದೇ ಹುಡುಗಿ ಬಂದು ಪ್ರೀತಿ ಮಾಡಿದ್ದಾಳೆ. ನನ್ನ ಮಗ ಅಲ್ಲಿಗೆ ಹೋಗಿಲ್ಲ ಎಂದು ಗವಿಸಿದ್ದಪ್ಪ ಅವರ ತಂದೆ ತಿಳಿಸಿದ್ದಾರೆ. ಹತ್ಯೆಯನ್ನು 8 ರಿಂದ 10 ಜನ ಸೇರಿ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದ್ದರಿಂದ ಎನ್ಐಎ ತನಿಖೆ ಆಗಬೇಕು. ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು’ ಎಂದು ಅವರು ಒತ್ತಾಯಿಸಿದರು. ನಿಯೋಗದಲ್ಲಿ ಬಿ.ವೈ.ವಿಜಯೇಂದ್ರ ಆರ್.ಅಶೋಕ ಜಿ.ಜನಾರ್ದನರೆಡ್ಡಿ ರಾಜುಗೌಡ ಶಿವನಗೌಡ ನಾಯಕ ಮೊದಲಾದವರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊಪ್ಪಳದಲ್ಲಿ ವಾಲ್ಮೀಕಿ ಸಮಾಜದ ಯುವಕ ಗವಿ ಸಿದ್ದಪ್ಪ ಅವರನ್ನು ಹತ್ಯೆ ಮಾಡಿದ ಪ್ರಕರಣವನ್ನು ಎನ್ಐಎಗೆ ಒಪ್ಪಿಸುವಂತೆ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.</p>.<p>ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಎಂಬ ಕಾರಣಕ್ಕೆ ಗವಿ ಸಿದ್ಧಪ್ಪ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಹೇಳಿದರು. ಸರ್ಕಾರ ತಕ್ಷಣವೇ ಉತ್ತರ ನೀಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಒಕ್ಕೊರಲಿನಿಂದ ಆಗ್ರಹಿಸಿದರು.</p>.<p>ಕೊಲೆಗಾರರು ಕೊಲೆ ಮಾಡುವುದಕ್ಕೂ ಮೊದಲೇ ಇನ್ಸ್ಟಾಗ್ರಾಂನಲ್ಲಿ ಕೊಲೆಯ ಬೆದರಿಕೆ ಹಾಕಿದ್ದರು. ಆದರೆ, ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಗವಿಸಿದ್ಧಪ್ಪ ಅವರದು ಬಡ ಕುಟುಂಬ. ಕೂಲಿ ಕೆಲಸ ಮಾಡುತ್ತಿದ್ದಾರೆ. ಆ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು. ಇವರ ಕುಟುಂಬದ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.</p>.<p>ವಿರೋಧಪಕ್ಷದ ನಾಯಕ ಆರ್.ಅಶೋಕ, ಡಾ.ಸಿ.ಎನ್.ಅಶ್ವತ್ಥನಾರಾಯಣ ಸೇರಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸರ್ಕಾರ ತಕ್ಷಣವೇ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. </p>.<h2>ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಿಜೆಪಿ–ಜೆಡಿಎಸ್ </h2>.<p>ಗವಿಸಿದ್ದಪ್ಪ ಅವರ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಬಿಜೆಪಿ–ಜೆಡಿಎಸ್ ನಿಯೋಗ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಬುಧವಾರ ಮನವಿ ಸಲ್ಲಿಸಿತು.</p><p> ಭೇಟಿಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮಾಜಿ ಸಚಿವ ಬಿ.ಶ್ರೀರಾಮುಲು ‘ಬೀದರ್ ಕಲಬುರಗಿ ರಾಯಚೂರು ಬಳ್ಳಾರಿ ಕೊಪ್ಪಳದ ಜನತೆ ಜಾತ್ಯತೀವಾಗಿ ಎಲ್ಲರನ್ನೂ ಪ್ರೀತಿಸುವವರು. ಆದರೆ ಗ್ಯಾರಂಟಿ ಸರ್ಕಾರ ಬಂದ ಬಳಿಕ ಬಡವರ ಹಿಂದೂಪರ ಕಾರ್ಯಕರ್ತರ ಪ್ರಾಣಕ್ಕೆ ಗ್ಯಾರಂಟಿ ಇಲ್ಲವಾಗಿದೆ’ ಎಂದರು.</p><p> ‘ಗುಪ್ತಚರ ಇಲಾಖೆ ವೈಫಲ್ಯವಾಗಿದೆ. ಇದರ ಹೊಣೆ ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿಯವರಿಗೆ ಕುರ್ಚಿ ಉಳಿಸಿಕೊಳ್ಳುವುದನ್ನು ಬಿಟ್ಟು ಬೇರೇನೂ ಮಾಡುತ್ತಿಲ್ಲ’ ಎಂದು ಅವರು ದೂರಿದರು. </p><p>‘ಮುಸ್ಲಿಂ ಹುಡುಗಿಯನ್ನು ಪ್ರೀತಿ ಮಾಡಿದ ಕಾರಣಕ್ಕೆ ಗವಿ ಸಿದ್ದಪ್ಪ ನಾಯಕ ಹತ್ಯೆಯಾಗಿದ್ದಾನೆ. ಯಾರೂ ಪ್ರೀತಿ ಮಾಡಬಾರದೇ? ಅದೇ ಹುಡುಗಿ ಬಂದು ಪ್ರೀತಿ ಮಾಡಿದ್ದಾಳೆ. ನನ್ನ ಮಗ ಅಲ್ಲಿಗೆ ಹೋಗಿಲ್ಲ ಎಂದು ಗವಿಸಿದ್ದಪ್ಪ ಅವರ ತಂದೆ ತಿಳಿಸಿದ್ದಾರೆ. ಹತ್ಯೆಯನ್ನು 8 ರಿಂದ 10 ಜನ ಸೇರಿ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದ್ದರಿಂದ ಎನ್ಐಎ ತನಿಖೆ ಆಗಬೇಕು. ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು’ ಎಂದು ಅವರು ಒತ್ತಾಯಿಸಿದರು. ನಿಯೋಗದಲ್ಲಿ ಬಿ.ವೈ.ವಿಜಯೇಂದ್ರ ಆರ್.ಅಶೋಕ ಜಿ.ಜನಾರ್ದನರೆಡ್ಡಿ ರಾಜುಗೌಡ ಶಿವನಗೌಡ ನಾಯಕ ಮೊದಲಾದವರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>