<p>ಕೊಪ್ಪಳ: ನೂತನ ಸಂಪುಟದಲ್ಲಿ ಸಹೋದರ, ಶಾಸಕ ರಾಘವೇಂದ್ರ ಹಿಟ್ನಾಳಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಘವೇಂದ್ರ ಹಿಟ್ನಾಳಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಮೇಲೆ ಒತ್ತಡ ತಂದಿದ್ದೇವೆ. ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಿದ್ದು, ಮುಂದೆ ಸಚಿವರ ಆಯ್ಕೆ ಜರುಗಲಿದೆ. ನನ್ನ ಸಹೋದರ ಸತತ ಮೂರು ಬಾರಿ ಶಾಸಕರಾಗಿದ್ದಾರೆ. ಎರಡು ಬಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಕೆಲಸ ಮಾಡಿದ ಅನುಭವ ಇದೆ. ಈ ಭಾಗದ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಗೆ ಕೆಲಸ ಮಾಡಿದ್ದಾರೆ. ಹೈಕಮಾಂಡ್ ಮತ್ತು ಡಿ.ಕೆ. ಶಿವಕುಮಾರ್ ಅವರ ಮೇಲೆ ಒತ್ತಡ ಹೇರಿ ಸಚಿವ ಸ್ಥಾನ ಪಡೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಹೇಳಿದರು.</p>.<p>‘ಕೊಪ್ಪಳ ಕ್ಷೇತ್ರದಿಂದ ಗೆದ್ದವರು ಸಚಿವರಾಗಿ ಯಾರೂ ಕೆಲಸ ಮಾಡಿಲ್ಲ. ಪಕ್ಷ ಹಾಗೂ ಕ್ಷೇತ್ರದ ಅಭಿವೃದ್ಧಿ ಹಿತದೃಷ್ಟಿಯಿಂದ ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಹೇಳಿದರು.</p>.<p>‘ನಮ್ಮದು ದೊಡ್ಡ ರಾಷ್ಟ್ರೀಯ ಪಕ್ಷ, ಇಲ್ಲಿ ಬಹಳಷ್ಟು ಜನ ಹಿರಿಯ ನಾಯಕರು ಆಯ್ಕೆಯಾಗಿದ್ದಾರೆ. ಸಾಕಷ್ಟು ಸ್ಪರ್ಧೆಯ ನಡುವೆಯೂ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ. ಸಿದ್ದರಾಮಯ್ಯ ಅವರು ಹಿಟ್ನಾಳ ಕುಟುಂಬಕ್ಕೆ ಬಹಳಷ್ಟು ಆತ್ಮೀಯರು. ಶಿವಕುಮಾರ್ ಕೂಡ ಆತ್ಮೀಯರು. ನಮ್ಮನ್ನ ಗುರುತಿಸುತ್ತಾರೆ ಎನ್ನುವ ವಿಶ್ವಾಸವಿದೆ’ ಎಂದು ಹೇಳಿದರು.</p>.<p>‘ಹಿಂದೆ ನಮ್ಮ ಸಮಾಜದ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದರಿಂದ ಬೇರೆ ಸಮಾಜಕ್ಕೆ ಅವಕಾಶ ಕೊಡಲು ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ಕೊಟ್ಟಿರಲಿಲ್ಲ. ಈಗ ಸಮಾಜವನ್ನು ಗುರುತಿಸಿ ಸಚಿವ ಸ್ಥಾನ ನೀಡುವ ವಿಶ್ವಾಸ ಇದೆ. ಉತ್ತರ ಕರ್ನಾಟಕ ಭಾಗದಲ್ಲಿ ನಮ್ಮ ಸಮಾಜದ 5 ಜನ ಶಾಸಕರಿದ್ದಾರೆ. ಅದರಲ್ಲಿ ಇಬ್ಬರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-35-1041715311</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ನೂತನ ಸಂಪುಟದಲ್ಲಿ ಸಹೋದರ, ಶಾಸಕ ರಾಘವೇಂದ್ರ ಹಿಟ್ನಾಳಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಘವೇಂದ್ರ ಹಿಟ್ನಾಳಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಮೇಲೆ ಒತ್ತಡ ತಂದಿದ್ದೇವೆ. ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಿದ್ದು, ಮುಂದೆ ಸಚಿವರ ಆಯ್ಕೆ ಜರುಗಲಿದೆ. ನನ್ನ ಸಹೋದರ ಸತತ ಮೂರು ಬಾರಿ ಶಾಸಕರಾಗಿದ್ದಾರೆ. ಎರಡು ಬಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಕೆಲಸ ಮಾಡಿದ ಅನುಭವ ಇದೆ. ಈ ಭಾಗದ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಗೆ ಕೆಲಸ ಮಾಡಿದ್ದಾರೆ. ಹೈಕಮಾಂಡ್ ಮತ್ತು ಡಿ.ಕೆ. ಶಿವಕುಮಾರ್ ಅವರ ಮೇಲೆ ಒತ್ತಡ ಹೇರಿ ಸಚಿವ ಸ್ಥಾನ ಪಡೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಹೇಳಿದರು.</p>.<p>‘ಕೊಪ್ಪಳ ಕ್ಷೇತ್ರದಿಂದ ಗೆದ್ದವರು ಸಚಿವರಾಗಿ ಯಾರೂ ಕೆಲಸ ಮಾಡಿಲ್ಲ. ಪಕ್ಷ ಹಾಗೂ ಕ್ಷೇತ್ರದ ಅಭಿವೃದ್ಧಿ ಹಿತದೃಷ್ಟಿಯಿಂದ ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಹೇಳಿದರು.</p>.<p>‘ನಮ್ಮದು ದೊಡ್ಡ ರಾಷ್ಟ್ರೀಯ ಪಕ್ಷ, ಇಲ್ಲಿ ಬಹಳಷ್ಟು ಜನ ಹಿರಿಯ ನಾಯಕರು ಆಯ್ಕೆಯಾಗಿದ್ದಾರೆ. ಸಾಕಷ್ಟು ಸ್ಪರ್ಧೆಯ ನಡುವೆಯೂ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ. ಸಿದ್ದರಾಮಯ್ಯ ಅವರು ಹಿಟ್ನಾಳ ಕುಟುಂಬಕ್ಕೆ ಬಹಳಷ್ಟು ಆತ್ಮೀಯರು. ಶಿವಕುಮಾರ್ ಕೂಡ ಆತ್ಮೀಯರು. ನಮ್ಮನ್ನ ಗುರುತಿಸುತ್ತಾರೆ ಎನ್ನುವ ವಿಶ್ವಾಸವಿದೆ’ ಎಂದು ಹೇಳಿದರು.</p>.<p>‘ಹಿಂದೆ ನಮ್ಮ ಸಮಾಜದ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದರಿಂದ ಬೇರೆ ಸಮಾಜಕ್ಕೆ ಅವಕಾಶ ಕೊಡಲು ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ಕೊಟ್ಟಿರಲಿಲ್ಲ. ಈಗ ಸಮಾಜವನ್ನು ಗುರುತಿಸಿ ಸಚಿವ ಸ್ಥಾನ ನೀಡುವ ವಿಶ್ವಾಸ ಇದೆ. ಉತ್ತರ ಕರ್ನಾಟಕ ಭಾಗದಲ್ಲಿ ನಮ್ಮ ಸಮಾಜದ 5 ಜನ ಶಾಸಕರಿದ್ದಾರೆ. ಅದರಲ್ಲಿ ಇಬ್ಬರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-35-1041715311</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>