ಕೊಪ್ಪಳ: ‘ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸ್ಪರ್ಧಿಸುವರು' ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕಸಿದ್ದರಾಮಯ್ಯ ಘೋಷಿಸಿದರು.
ಭಾನುವಾರ ಗಂಗಾವತಿಯ ಅನ್ಸಾರಿ ನಿವಾಸಕ್ಕೆ ಭೇಟಿ ನೀಡಿದ್ದ ಅವರು, ‘ವಿಧಾನಸಭಾ ಚುನಾವಣೆಯಲ್ಲಿ ಅನ್ಸಾರಿಗೆ ಅನ್ಯಾಯವಾಗಿದ್ದು,ಅದನ್ನು ಸರಿಪಡಿಸಬೇಕಿದೆ. ಹೀಗಾಗಿ ಅವರೇ ಅಭ್ಯರ್ಥಿಯಾಗಲಿದ್ದಾರೆ’ ಎಂದರು.