<p><strong>ಬೆಂಗಳೂರು: </strong>ಮುಜರಾಯಿ ಇಲಾಖೆಯ ವತಿಯಿಂದ ಈಗಾಗಲೇ ಪ್ರಸ್ತಾಪಿಸಲಾಗಿರುವ ಸಾಮೂಹಿಕ ವಿವಾಹದ ಮುಹೂರ್ತ ನಿಗದಿಯಾಗಿದ್ದು, ಮುಂಬರುವ ಏಪ್ರಿಲ್ 26 ಮತ್ತು ಮೇ 24ರಂದು ರಾಜ್ಯದ 90 ರಿಂದ 100 ಎ ದರ್ಜೆ ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹ ನಡೆಯಲಿದೆ.</p>.<p>ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗುರುವಾರ ವಿಧಾನಸೌಧದಲ್ಲಿ ಈ ವಿಷಯ ಪ್ರಕಟಿಸಿದರು.</p>.<p>ವಧುವಿನ ತಾಳಿಗಾಗಿ₹40 ಸಾವಿರ, ಧಾರೆ ಸೀರೆ ಖರೀದಿಸಲು ₹10 ಸಾವಿರ ಹಾಗೂ ವರನಿಗೆ ಪಂಚೆ, ಧೋತಿ ಖರೀದಿಗೆ ₹5 ಸಾವಿರ ನೀಡಲಾಗುವುದು. ಆಯಾ ಜಿಲ್ಲಾಧಿಕಾರಿಗಳು ಒಂದು ತಿಂಗಳ ಮೊದಲಾಗಿ ವರ ಮತ್ತು ವಧುವಿನ ಖಾತೆಗಳಿಗೆ ಈ ಮೊತ್ತ ಜಮಾ ಮಾಡಲಿದ್ದಾರೆ ಎಂದರು.</p>.<p>ಈ ವರ್ಷ 1 ಸಾವಿರ ವಿವಾಹ ನಡೆಯುವ ನಿರೀಕ್ಷೆ ಇದೆ.ಮುಜರಾಯಿ ದೇವಾಲಯಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲಾಗಿದೆ ಎಂದರು.</p>.<p><strong>ಯಕ್ಷಗಾನ ಕಲಾವಿದರ ಗೌರವಧನ ಹೆಚ್ಚಳ ಪರಿಶೀಲನೆಗೆ ಸಮಿತಿ:</strong>ಮುಜರಾಯಿ ಇಲಾಖೆಯ ದೇವಾಲಯಗಳ ವತಿಯಿಂದ ನಡೆಯುತ್ತಿರುವ ಯಕ್ಷಗಾನ ಮೇಳಗಳ ಕಲಾವಿದರಿಗೆ ಗೌರವ ಸಂಭಾವನೆ ಕಡಿಮೆ ಇದೆ ಎಂಬ ಆರೋಪ ಇದೆ. ಇದನ್ನು ಬಗೆಹರಿಸುವ ನಿಟ್ಟಿನಲ್ಲಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ ಹೆಗಡೆ ನೇತೃತ್ವದ ತಜ್ಞರ ಸಮಿತಿ ರಚಿಸಿ, 3 ತಿಂಗಳಲ್ಲಿ ವರದಿ ತರಿಸಿಕೊಂಡು ಬಳಿಕ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಕೋಟ ತಿಳಿಸಿದರು.</p>.<p>ಹಾರಾಡಿ ರಾಮ ಗಾಣಿಗ ಹೆಸರಲ್ಲಿ ₹1 ಲಕ್ಷದ ಪ್ರಶಸ್ತಿ ನೀಡಲಿದ್ದು, ಪ್ರಶಸ್ತಿ ಮೊತ್ತವನ್ನು ಮುಜರಾಯಿ ಇಲಾಖೆಯೇ ನೀಡಲಿದೆ ಎಂದರು.</p>.<p>ಶಿಶು ಕಲ್ಯಾಣ ಇಲಾಖೆಯಿಂದ ನವಜೋಡಿಗೆ ₹10 ಸಾವಿರದ ಬಾಂಡ್ ನೀಡಲಾಗುವುದು ಎಂದು ಸಚಿವ ಕೋಟ ತಿಳಿಸಿದರು.</p>.<p>ಹಿಂದೂ ಸಂಪ್ರದಾಯದಂತೆ ವಿವಾಹವಾಗುವವರಿಗೆ ಮಾತ್ರ ಈ ಸಾಮೂಹಿಕ ವಿವಾಹದಲ್ಲಿ ಅವಕಾಶ ಇದೆ ಎಂದು ಸಚಿವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಜರಾಯಿ ಇಲಾಖೆಯ ವತಿಯಿಂದ ಈಗಾಗಲೇ ಪ್ರಸ್ತಾಪಿಸಲಾಗಿರುವ ಸಾಮೂಹಿಕ ವಿವಾಹದ ಮುಹೂರ್ತ ನಿಗದಿಯಾಗಿದ್ದು, ಮುಂಬರುವ ಏಪ್ರಿಲ್ 26 ಮತ್ತು ಮೇ 24ರಂದು ರಾಜ್ಯದ 90 ರಿಂದ 100 ಎ ದರ್ಜೆ ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹ ನಡೆಯಲಿದೆ.</p>.<p>ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗುರುವಾರ ವಿಧಾನಸೌಧದಲ್ಲಿ ಈ ವಿಷಯ ಪ್ರಕಟಿಸಿದರು.</p>.<p>ವಧುವಿನ ತಾಳಿಗಾಗಿ₹40 ಸಾವಿರ, ಧಾರೆ ಸೀರೆ ಖರೀದಿಸಲು ₹10 ಸಾವಿರ ಹಾಗೂ ವರನಿಗೆ ಪಂಚೆ, ಧೋತಿ ಖರೀದಿಗೆ ₹5 ಸಾವಿರ ನೀಡಲಾಗುವುದು. ಆಯಾ ಜಿಲ್ಲಾಧಿಕಾರಿಗಳು ಒಂದು ತಿಂಗಳ ಮೊದಲಾಗಿ ವರ ಮತ್ತು ವಧುವಿನ ಖಾತೆಗಳಿಗೆ ಈ ಮೊತ್ತ ಜಮಾ ಮಾಡಲಿದ್ದಾರೆ ಎಂದರು.</p>.<p>ಈ ವರ್ಷ 1 ಸಾವಿರ ವಿವಾಹ ನಡೆಯುವ ನಿರೀಕ್ಷೆ ಇದೆ.ಮುಜರಾಯಿ ದೇವಾಲಯಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲಾಗಿದೆ ಎಂದರು.</p>.<p><strong>ಯಕ್ಷಗಾನ ಕಲಾವಿದರ ಗೌರವಧನ ಹೆಚ್ಚಳ ಪರಿಶೀಲನೆಗೆ ಸಮಿತಿ:</strong>ಮುಜರಾಯಿ ಇಲಾಖೆಯ ದೇವಾಲಯಗಳ ವತಿಯಿಂದ ನಡೆಯುತ್ತಿರುವ ಯಕ್ಷಗಾನ ಮೇಳಗಳ ಕಲಾವಿದರಿಗೆ ಗೌರವ ಸಂಭಾವನೆ ಕಡಿಮೆ ಇದೆ ಎಂಬ ಆರೋಪ ಇದೆ. ಇದನ್ನು ಬಗೆಹರಿಸುವ ನಿಟ್ಟಿನಲ್ಲಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ ಹೆಗಡೆ ನೇತೃತ್ವದ ತಜ್ಞರ ಸಮಿತಿ ರಚಿಸಿ, 3 ತಿಂಗಳಲ್ಲಿ ವರದಿ ತರಿಸಿಕೊಂಡು ಬಳಿಕ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಕೋಟ ತಿಳಿಸಿದರು.</p>.<p>ಹಾರಾಡಿ ರಾಮ ಗಾಣಿಗ ಹೆಸರಲ್ಲಿ ₹1 ಲಕ್ಷದ ಪ್ರಶಸ್ತಿ ನೀಡಲಿದ್ದು, ಪ್ರಶಸ್ತಿ ಮೊತ್ತವನ್ನು ಮುಜರಾಯಿ ಇಲಾಖೆಯೇ ನೀಡಲಿದೆ ಎಂದರು.</p>.<p>ಶಿಶು ಕಲ್ಯಾಣ ಇಲಾಖೆಯಿಂದ ನವಜೋಡಿಗೆ ₹10 ಸಾವಿರದ ಬಾಂಡ್ ನೀಡಲಾಗುವುದು ಎಂದು ಸಚಿವ ಕೋಟ ತಿಳಿಸಿದರು.</p>.<p>ಹಿಂದೂ ಸಂಪ್ರದಾಯದಂತೆ ವಿವಾಹವಾಗುವವರಿಗೆ ಮಾತ್ರ ಈ ಸಾಮೂಹಿಕ ವಿವಾಹದಲ್ಲಿ ಅವಕಾಶ ಇದೆ ಎಂದು ಸಚಿವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>