‘ನಮ್ಮ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರಲು ಅವಕಾಶ ಇದ್ದರೂ ವಂಚಿತವಾಗಿದೆ. ಸಾಮಾಜಿಕ ನ್ಯಾಯ ಸಿಗದೆ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದು ನಿರ್ಲಕ್ಷ್ಯಕ್ಕೆ ಗುರಿಯಾಗಿದೆ. ಕುಲಶಾಸ್ತ್ರೀಯ ಅಧ್ಯಯನದ ಬಗ್ಗೆ ಜಾಗೃತಿ ಮೂಡಿಸಲು 162 ಹೋಬಳಿಗಳಲ್ಲಿ ಈಗಾಗಲೇ ಸಮಾವೇಶ ನಡೆಸಲಾಗಿದೆ. ಉಳಿದ 585 ಹೋಬಳಿಗಳಲ್ಲಿ ಸಮಾವೇಶ ನಡೆಸಿ, ಬೀದರ್ನಿಂದ ಬೆಂಗಳೂರುವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು’ ಎಂದೂ ಅವರು ತಿಳಿಸಿದರು.