<p><strong>ಬೆಂಗಳೂರು</strong>: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ.</p>.<p>ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ ಮತ್ತು ಸತೀಶ ಜಾರಕಿಹೊಳಿ ಅವರು ಈ ಕುರಿತು ತಮ್ಮ ಅಭಿಪ್ರಾಯಗಳನ್ನು ಹೊರಹಾಕುವ ಮೂಲಕ ಚರ್ಚೆಗೆ ಚಾಲನೆ ನೀಡಿದ್ದಾರೆ.</p>.<p>ಇತ್ತೀಚೆಗೆ ನಡೆದ ಪಕ್ಷದ ಸಭೆಗಳಲ್ಲಿ ಕೆಪಿಸಿಸಿ ಜವಾಬ್ದಾರಿಯಿಂದ ಹೊರಬರುವ ಇಂಗಿತವನ್ನು ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ವ್ಯಕ್ತಪಡಿಸಿದ ಬೆನ್ನಲ್ಲೇ ಈಗ ಚರ್ಚೆ ಆರಂಭವಾಗಿದೆ. </p>.<p>ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹುದ್ದೆಯ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಲೋಕಸಭಾ ಚುನಾವಣೆವರೆಗೆ ನಿಭಾಯಿಸುವಂತೆ ಪಕ್ಷದ ಹೈಕಮಾಂಡ್ ಶಿವಕುಮಾರ್ ಅವರಿಗೆ ಸೂಚಿಸಿತ್ತು. ಲೋಕಸಭಾ ಚುನಾವಣೆ ಸದ್ಯವೇ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಶಿವಕುಮಾರ್ ಅವರು ‘ಅಧ್ಯಕ್ಷ ಹುದ್ದೆಯಲ್ಲಿ ಎಷ್ಟು ದಿನ ಮುಂದುವರಿಯುತ್ತೇನೊ ಎಂಬುದು ಗೊತ್ತಿಲ್ಲ, ಬದಲಾವಣೆ ಆಗಲೂಬಹುದು’ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. </p>.<p>ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆಗಳಿಗೆ ತಯಾರಿ ನಡೆಸಬೇಕಾಗಿರುವುದರಿಂದ ಜವಾಬ್ದಾರಿ ಬೇರೊಬ್ಬರಿಗೆ ವಹಿಸುವುದು ಸೂಕ್ತ ಎಂಬ ಸಂದೇಶವನ್ನು ಶಿವಕುಮಾರ್ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.</p>.<p>ಸುದ್ದಿಗಾರರ ಪ್ರಶ್ನೆಗೆ ಬುಧವಾರ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಉತ್ತರ ಕರ್ನಾಟಕ ಭಾಗದವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವುದು ಸೂಕ್ತ ಎಂದು ಹೇಳಿದ್ದಾರೆ.</p>.<p>‘ಮೊದಲಿಗೆ ಅಧ್ಯಕ ಸ್ಥಾನ ಖಾಲಿ ಆಗಲಿ. ಅಧಿಕಾರ ಅವಧಿ ವಿಸ್ತರಣೆ ಆದರೂ ಅಚ್ಚರಿ ಇಲ್ಲ. ಒಂದು ವೇಳೆ ಬದಲಿಸುವುದಾದರೆ ಸಮರ್ಥರಿಗೆ, ಸಾಮರ್ಥ್ಯ ಇದ್ದವರಿಗೆ ಕೊಡಿ ಎಂದು ಕೇಳುತ್ತೇನೆ. ರಾಜ್ಯದ ಬಗ್ಗೆ ಗೊತ್ತಿರುವವರು ಮತ್ತು ರಾಜ್ಯ ಸುತ್ತಿದವರಿಗೆ ಕೊಡಿ ಎಂದು ಹೇಳುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ.</p>.<p>ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ ಮತ್ತು ಸತೀಶ ಜಾರಕಿಹೊಳಿ ಅವರು ಈ ಕುರಿತು ತಮ್ಮ ಅಭಿಪ್ರಾಯಗಳನ್ನು ಹೊರಹಾಕುವ ಮೂಲಕ ಚರ್ಚೆಗೆ ಚಾಲನೆ ನೀಡಿದ್ದಾರೆ.</p>.<p>ಇತ್ತೀಚೆಗೆ ನಡೆದ ಪಕ್ಷದ ಸಭೆಗಳಲ್ಲಿ ಕೆಪಿಸಿಸಿ ಜವಾಬ್ದಾರಿಯಿಂದ ಹೊರಬರುವ ಇಂಗಿತವನ್ನು ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ವ್ಯಕ್ತಪಡಿಸಿದ ಬೆನ್ನಲ್ಲೇ ಈಗ ಚರ್ಚೆ ಆರಂಭವಾಗಿದೆ. </p>.<p>ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹುದ್ದೆಯ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಲೋಕಸಭಾ ಚುನಾವಣೆವರೆಗೆ ನಿಭಾಯಿಸುವಂತೆ ಪಕ್ಷದ ಹೈಕಮಾಂಡ್ ಶಿವಕುಮಾರ್ ಅವರಿಗೆ ಸೂಚಿಸಿತ್ತು. ಲೋಕಸಭಾ ಚುನಾವಣೆ ಸದ್ಯವೇ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಶಿವಕುಮಾರ್ ಅವರು ‘ಅಧ್ಯಕ್ಷ ಹುದ್ದೆಯಲ್ಲಿ ಎಷ್ಟು ದಿನ ಮುಂದುವರಿಯುತ್ತೇನೊ ಎಂಬುದು ಗೊತ್ತಿಲ್ಲ, ಬದಲಾವಣೆ ಆಗಲೂಬಹುದು’ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. </p>.<p>ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆಗಳಿಗೆ ತಯಾರಿ ನಡೆಸಬೇಕಾಗಿರುವುದರಿಂದ ಜವಾಬ್ದಾರಿ ಬೇರೊಬ್ಬರಿಗೆ ವಹಿಸುವುದು ಸೂಕ್ತ ಎಂಬ ಸಂದೇಶವನ್ನು ಶಿವಕುಮಾರ್ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.</p>.<p>ಸುದ್ದಿಗಾರರ ಪ್ರಶ್ನೆಗೆ ಬುಧವಾರ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಉತ್ತರ ಕರ್ನಾಟಕ ಭಾಗದವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವುದು ಸೂಕ್ತ ಎಂದು ಹೇಳಿದ್ದಾರೆ.</p>.<p>‘ಮೊದಲಿಗೆ ಅಧ್ಯಕ ಸ್ಥಾನ ಖಾಲಿ ಆಗಲಿ. ಅಧಿಕಾರ ಅವಧಿ ವಿಸ್ತರಣೆ ಆದರೂ ಅಚ್ಚರಿ ಇಲ್ಲ. ಒಂದು ವೇಳೆ ಬದಲಿಸುವುದಾದರೆ ಸಮರ್ಥರಿಗೆ, ಸಾಮರ್ಥ್ಯ ಇದ್ದವರಿಗೆ ಕೊಡಿ ಎಂದು ಕೇಳುತ್ತೇನೆ. ರಾಜ್ಯದ ಬಗ್ಗೆ ಗೊತ್ತಿರುವವರು ಮತ್ತು ರಾಜ್ಯ ಸುತ್ತಿದವರಿಗೆ ಕೊಡಿ ಎಂದು ಹೇಳುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>