ಬೆಂಗಳೂರು: ಮತದಾರರು ನೀಡಿದ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಉಪ ಚುನಾವಣೆಯ ನಡೆದ ಆರ್.ಆರ್. ನಗರ ಮತ್ತು ಶಿರಾ ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಿನ್ನಡೆಯಲ್ಲಿದೆ. ಈ ಮಧ್ಯೆ, ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮತ ಎಣಿಕೆ ಮುಗಿಯಲು ಇನ್ನೂ ಒಂದೂವರೆಗೆ ಗಂಟೆ ಇದೆ. ಫಲಿತಾಂಶದಲ್ಲಿ ಏನು ಬೇಕಾದರೂ ಆಗುವುದು. ನೋಡೋಣ’ ಎಂದರು.