<p><strong>ಬೆಂಗಳೂರು:</strong> ‘ವಿನಯ್ ಕುಲಕರ್ಣಿ ಪ್ರಭಾವಿ. ಹೀಗಾಗಿ, ಅವರನ್ನು ಮಟ್ಟಹಾಕಲು ಆ ಭಾಗದ ಬಿಜೆಪಿ ನಾಯಕರು ಹೊರಟಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರಿದರು.</p>.<p>ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದನ್ನು ನಾನು ಗಮನಿಸಿದ್ದೇನೆ. ಈ ಹಿಂದೆ, ವಿನಯ್ ಕುಲಕರ್ಣಿ ಬಳಿ ಎಲ್ಲವನ್ನೂ ವಿಚಾರಿಸಿದ್ದೇನೆ. ಈಗಾಗಲೇ ಅವರ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸಿ ಪೊಲೀಸರು ವರದಿ ನೀಡಿದ್ದಾರೆ’ ಎಂದರು.</p>.<p>‘ಸಿಬಿಐನವರು ರಾಜಕೀಯಕ್ಕೆ ತಲೆಬಾಗಬಾರದು. ಕೆ.ಜೆ. ಜಾರ್ಜ್ಗೆ ಸಿಬಿಐನವರು ಎಷ್ಟು ಕಿರುಕುಳ ಕೊಟ್ಟಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿದೆ. ರಾಜಕಾರಣದಲ್ಲಿ ಚಕ್ರ ತಿರುಗುತ್ತಿರುತ್ತದೆ. ಸಿಬಿಐನವರು ರಾಜಕೀಯ ಅಸ್ತ್ರ ಆಗಬಾರದು’ ಎಂದರು.</p>.<p>‘ವಿನಯ್ ಪ್ರಕರಣದಲ್ಲಿ ಕೆಲವು ಬಿಜೆಪಿಯವರಿಗೆ ಖುಷಿ ಆಗಿರಬಹುದು. ಆದರೆ, ದೇಶದ ಕಾನೂನಿನ ಬಗ್ಗೆ ನಮಗೆ ನಂಬಿಕೆ ಇದೆ. ನಮ್ಮವರು ಯಾರೂ ಯಾವುದೇ ತಪ್ಪು ಮಾಡಿಲ್ಲ. ನಮ್ಮ ನಾಯಕರನ್ನು ಮುಗಿಸಲು ಈ ರೀತಿ ಮಾಡುತ್ತಿದ್ದಾರೆ. ನನ್ನ ಮೇಲಿನ ಪ್ರಕರಣದಲ್ಲೂ ಯಡಿಯೂರಪ್ಪ ವಿಚಾರಣೆಗೆ ಅನುಮತಿ ಕೊಟ್ಟಿದ್ದರು. ಸಿಬಿಐನವರು ಕಾನೂನು ಬಿಟ್ಟು ಏನನ್ನೂ ಮಾಡುವುದಿಲ್ಲವೆಂಬ ವಿಶ್ವಾಸವಿದೆ’ ಎಂದರು.</p>.<p>‘ಈ ಸಂದರ್ಭದಲ್ಲಿ ನಾನು ಹೆಚ್ಚು ಮಾತನಾಡುವುದಿಲ್ಲ. ಬಿಜೆಪಿಯ ಒಬ್ಬರು ಸಚಿವರು ವಿನಯ್ ಅವರನ್ನು ತಮ್ಮ ಪಕ್ಷ ಸೇರುವಂತೆ ಆಹ್ವಾನಿಸಿದ್ದರು. ಪ್ರಧಾನಿಯವರೂ ಈ ಬಗ್ಗೆ ಮಾತನಾಡಿಲ್ವಾ. ಬಿಜೆಪಿ ನಾಯಕರೇ ಈ ಬಗ್ಗೆ ಸ್ಪಷ್ಟನೆ ನೀಡಲಿ’ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/district/dakshina-kannada/cm-bs-yediyurappa-reaction-about-vinay-kulkarni-interrogation-by-cbi-officials-for-yogeshgowda-776603.html" target="_blank">ಆರೋಪ, ಸಾಕ್ಷ್ಯಾಧಾರ ಕಾರಣ ವಿನಯ ಕುಲಕರ್ಣಿ ಬಂಧನ: ಯಡಿಯೂರಪ್</a>ಪ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವಿನಯ್ ಕುಲಕರ್ಣಿ ಪ್ರಭಾವಿ. ಹೀಗಾಗಿ, ಅವರನ್ನು ಮಟ್ಟಹಾಕಲು ಆ ಭಾಗದ ಬಿಜೆಪಿ ನಾಯಕರು ಹೊರಟಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರಿದರು.</p>.<p>ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದನ್ನು ನಾನು ಗಮನಿಸಿದ್ದೇನೆ. ಈ ಹಿಂದೆ, ವಿನಯ್ ಕುಲಕರ್ಣಿ ಬಳಿ ಎಲ್ಲವನ್ನೂ ವಿಚಾರಿಸಿದ್ದೇನೆ. ಈಗಾಗಲೇ ಅವರ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸಿ ಪೊಲೀಸರು ವರದಿ ನೀಡಿದ್ದಾರೆ’ ಎಂದರು.</p>.<p>‘ಸಿಬಿಐನವರು ರಾಜಕೀಯಕ್ಕೆ ತಲೆಬಾಗಬಾರದು. ಕೆ.ಜೆ. ಜಾರ್ಜ್ಗೆ ಸಿಬಿಐನವರು ಎಷ್ಟು ಕಿರುಕುಳ ಕೊಟ್ಟಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿದೆ. ರಾಜಕಾರಣದಲ್ಲಿ ಚಕ್ರ ತಿರುಗುತ್ತಿರುತ್ತದೆ. ಸಿಬಿಐನವರು ರಾಜಕೀಯ ಅಸ್ತ್ರ ಆಗಬಾರದು’ ಎಂದರು.</p>.<p>‘ವಿನಯ್ ಪ್ರಕರಣದಲ್ಲಿ ಕೆಲವು ಬಿಜೆಪಿಯವರಿಗೆ ಖುಷಿ ಆಗಿರಬಹುದು. ಆದರೆ, ದೇಶದ ಕಾನೂನಿನ ಬಗ್ಗೆ ನಮಗೆ ನಂಬಿಕೆ ಇದೆ. ನಮ್ಮವರು ಯಾರೂ ಯಾವುದೇ ತಪ್ಪು ಮಾಡಿಲ್ಲ. ನಮ್ಮ ನಾಯಕರನ್ನು ಮುಗಿಸಲು ಈ ರೀತಿ ಮಾಡುತ್ತಿದ್ದಾರೆ. ನನ್ನ ಮೇಲಿನ ಪ್ರಕರಣದಲ್ಲೂ ಯಡಿಯೂರಪ್ಪ ವಿಚಾರಣೆಗೆ ಅನುಮತಿ ಕೊಟ್ಟಿದ್ದರು. ಸಿಬಿಐನವರು ಕಾನೂನು ಬಿಟ್ಟು ಏನನ್ನೂ ಮಾಡುವುದಿಲ್ಲವೆಂಬ ವಿಶ್ವಾಸವಿದೆ’ ಎಂದರು.</p>.<p>‘ಈ ಸಂದರ್ಭದಲ್ಲಿ ನಾನು ಹೆಚ್ಚು ಮಾತನಾಡುವುದಿಲ್ಲ. ಬಿಜೆಪಿಯ ಒಬ್ಬರು ಸಚಿವರು ವಿನಯ್ ಅವರನ್ನು ತಮ್ಮ ಪಕ್ಷ ಸೇರುವಂತೆ ಆಹ್ವಾನಿಸಿದ್ದರು. ಪ್ರಧಾನಿಯವರೂ ಈ ಬಗ್ಗೆ ಮಾತನಾಡಿಲ್ವಾ. ಬಿಜೆಪಿ ನಾಯಕರೇ ಈ ಬಗ್ಗೆ ಸ್ಪಷ್ಟನೆ ನೀಡಲಿ’ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/district/dakshina-kannada/cm-bs-yediyurappa-reaction-about-vinay-kulkarni-interrogation-by-cbi-officials-for-yogeshgowda-776603.html" target="_blank">ಆರೋಪ, ಸಾಕ್ಷ್ಯಾಧಾರ ಕಾರಣ ವಿನಯ ಕುಲಕರ್ಣಿ ಬಂಧನ: ಯಡಿಯೂರಪ್</a>ಪ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>