<p><strong>ಬೆಳಗಾವಿ:</strong>‘ವಿಧಾನಪರಿಷತ್ ಚುನಾವಣೆಯು ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ’ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಹಾನಗಲ್ ವಿಧಾನಸಭೆ ಉಪಚುನಾವಣೆಯಲ್ಲಿ ಜನರು ಬದಲಾವಣೆ ಬಯಸಿದ್ದರು. ಈಗ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಬದಲಾವಣೆ ಬಯಸಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿ ಯಶಸ್ವಿಯಾಗಿದ್ದೇವೆ’ ಎಂದು ಪ್ರತಿಕ್ರಿಯಿಸಿದರು.</p>.<p><strong>ಓದಿ:</strong><a href="https://www.prajavani.net/karnataka-news/karnataka-mlc-election-results-2021-bjp-and-congress-gains-jds-lost-seats-892767.html" itemprop="url">ವಿಧಾನ ಪರಿಷತ್: ಬಲ ವರ್ಧಿಸಿಕೊಂಡ ಬಿಜೆಪಿ; ಬೀಗಿದ ಕಾಂಗ್ರೆಸ್, ಕುಗ್ಗಿದ ಜೆಡಿಎಸ್ </a></p>.<p>‘ನಮ್ಮ ನಿರೀಕ್ಷೆ ಪ್ರಕಾರ ರಾಜ್ಯದಲ್ಲಿ 13–14 ಸ್ಥಾನ ಗೆಲ್ಲಬೇಕಿತ್ತು. ಆದರೆ, 11 ಕಡೆ ಗೆದ್ದಿದ್ದೇವೆ. ಕಲಬುರಗಿ, ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ನಿರೀಕ್ಷೆ ಹುಸಿಯಾಗಿದೆ’ ಎಂದರು.</p>.<p><strong>ರಮೇಶಗೆ ಟಾಂಗ್ ಕೊಟ್ಟ ಡಿಕೆಶಿ:</strong> ‘ಚುನಾವಣೆ ಫಲಿತಾಂಶ ಬಳಿಕ ಡಿಕೆಶಿ ಜೊತೆಗೆ ಓಪನ್ ವಾರ್ ಆಗಲಿ’ ಎಂಬ ಶಾಸಕ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ‘ಯಾರು ಯಾರನ್ನೂ ಸೋಲಿಸಿದರು ಎಂಬುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಹೇಳಬೇಕು. ಬಿಜೆಪಿ ಸ್ವಯಂಕೃತ ಅಪರಾಧ ಮಾಡಿಕೊಂಡಿದೆ’ ಎಂದು ಉತ್ತರಿಸಿದರು.</p>.<p><strong>ಓದಿ:</strong><a href="https://www.prajavani.net/karnataka-news/karnataka-mlc-election-results-2021-party-majority-892365.html" itemprop="url">ಫಲಿತಾಂಶ | ಪಕ್ಷಗಳ ಬಲಾಬಲ: ಬಿಜೆಪಿ–11, ಕಾಂಗ್ರೆಸ್–11, ಜೆಡಿಎಸ್–02, ಇತರೆ–01 </a></p>.<p>‘ಈ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳು ಹಣ ಬಲದಿಂದ ಗೆದ್ದಿವೆ’ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ, ‘ಒಟ್ಟಿನಲ್ಲಿ ಒಂದು ಬಲ ಇದೆಯಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong>‘ವಿಧಾನಪರಿಷತ್ ಚುನಾವಣೆಯು ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ’ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಹಾನಗಲ್ ವಿಧಾನಸಭೆ ಉಪಚುನಾವಣೆಯಲ್ಲಿ ಜನರು ಬದಲಾವಣೆ ಬಯಸಿದ್ದರು. ಈಗ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಬದಲಾವಣೆ ಬಯಸಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿ ಯಶಸ್ವಿಯಾಗಿದ್ದೇವೆ’ ಎಂದು ಪ್ರತಿಕ್ರಿಯಿಸಿದರು.</p>.<p><strong>ಓದಿ:</strong><a href="https://www.prajavani.net/karnataka-news/karnataka-mlc-election-results-2021-bjp-and-congress-gains-jds-lost-seats-892767.html" itemprop="url">ವಿಧಾನ ಪರಿಷತ್: ಬಲ ವರ್ಧಿಸಿಕೊಂಡ ಬಿಜೆಪಿ; ಬೀಗಿದ ಕಾಂಗ್ರೆಸ್, ಕುಗ್ಗಿದ ಜೆಡಿಎಸ್ </a></p>.<p>‘ನಮ್ಮ ನಿರೀಕ್ಷೆ ಪ್ರಕಾರ ರಾಜ್ಯದಲ್ಲಿ 13–14 ಸ್ಥಾನ ಗೆಲ್ಲಬೇಕಿತ್ತು. ಆದರೆ, 11 ಕಡೆ ಗೆದ್ದಿದ್ದೇವೆ. ಕಲಬುರಗಿ, ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ನಿರೀಕ್ಷೆ ಹುಸಿಯಾಗಿದೆ’ ಎಂದರು.</p>.<p><strong>ರಮೇಶಗೆ ಟಾಂಗ್ ಕೊಟ್ಟ ಡಿಕೆಶಿ:</strong> ‘ಚುನಾವಣೆ ಫಲಿತಾಂಶ ಬಳಿಕ ಡಿಕೆಶಿ ಜೊತೆಗೆ ಓಪನ್ ವಾರ್ ಆಗಲಿ’ ಎಂಬ ಶಾಸಕ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ‘ಯಾರು ಯಾರನ್ನೂ ಸೋಲಿಸಿದರು ಎಂಬುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಹೇಳಬೇಕು. ಬಿಜೆಪಿ ಸ್ವಯಂಕೃತ ಅಪರಾಧ ಮಾಡಿಕೊಂಡಿದೆ’ ಎಂದು ಉತ್ತರಿಸಿದರು.</p>.<p><strong>ಓದಿ:</strong><a href="https://www.prajavani.net/karnataka-news/karnataka-mlc-election-results-2021-party-majority-892365.html" itemprop="url">ಫಲಿತಾಂಶ | ಪಕ್ಷಗಳ ಬಲಾಬಲ: ಬಿಜೆಪಿ–11, ಕಾಂಗ್ರೆಸ್–11, ಜೆಡಿಎಸ್–02, ಇತರೆ–01 </a></p>.<p>‘ಈ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳು ಹಣ ಬಲದಿಂದ ಗೆದ್ದಿವೆ’ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ, ‘ಒಟ್ಟಿನಲ್ಲಿ ಒಂದು ಬಲ ಇದೆಯಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>