<p><strong>ಬೆಳಗಾವಿ: </strong>ನೆರೆ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಕೆಪಿಸಿಸಿ ಮಹಿಳಾ ಘಟಕದವರು, ಹಾಳಾದ ಬೆಳೆಯನ್ನು ಚೀಲದಲ್ಲಿ ಹಾಕಿ ಪ್ರಧಾನಿ ಕಚೇರಿಗೆ ಸ್ಪೀಡ್ ಪೋಸ್ಟ್ ಮಾಡುವ ಮೂಲಕ ಮಂಗಳವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.</p>.<p>ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಮಾತನಾಡಿ, ‘ಗೋವಿನಜೋಳ, ಹತ್ತಿ, ಸೂರ್ಯಕಾಂತಿ, ಸೌತೆಕಾಯಿ, ಮೆಣಸಿನಕಾಯಿ ಮೊದಲಾದ ಗಿಡಗಳನ್ನು ರವಾನಿಸಲಾಗಿದೆ. ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಈ ಬಗ್ಗೆ ಸರ್ಕಾರವನ್ನು ಎಚ್ಚರಿಸಲು ಪ್ರತಿಭಟನೆ ನಡೆಸಲಾಗುತ್ತಿದೆ. ಕೂಡಲೇ ರೈತರ ಸಾಲ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮುಖಂಡರು ಕುರುಡರಾಗಿದ್ದಾರೆ, ಕಿವುಡರಾಗಿದ್ದಾರೆ. ರಾಜ್ಯದ ನಾಲಾಯಕ್ ಸಂಸದರು ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಟ್ಟು, ಕೈಗೆ ಬಳೆ ತೊಟ್ಟುಕೊಂಡು ಮನೆಗಳಲ್ಲಿ ಕುಳಿತುಕೊಳ್ಳಬೇಕು’ ಎಂದರು.</p>.<p>‘ಪ್ರಧಾನಿಯು ರಷ್ಯಾಕ್ಕೆ ₹ 72ಸಾವಿರ ಕೋಟಿ ಸಾಲ ಕೊಟ್ದಿದ್ದಾರೆ. ಅವರು ಬೇಕಿದ್ದರೆ ಅಮೆರಿಕದಲ್ಲಿಯೇ ಕುಳಿತುಕೊಳ್ಳಲಿ. ರಾಜ್ಯದ ಸಂತ್ರಸ್ತರಿಗೆ ಅನುದಾನ ಕೊಡಲಿ’ ಎಂದು ಒತ್ತಾಯಿಸಿದರು.</p>.<p>ಪಕ್ಷದಿಂದ ನಡೆದ ಪ್ರತಿಭಟನೆಯಲ್ಲೂ ಘಟಕದ ಕಾರ್ಯಕರ್ತೆಯರು ಹಾಳಾದ ಗಡಿಗಳನ್ನು ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ನೆರೆ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಕೆಪಿಸಿಸಿ ಮಹಿಳಾ ಘಟಕದವರು, ಹಾಳಾದ ಬೆಳೆಯನ್ನು ಚೀಲದಲ್ಲಿ ಹಾಕಿ ಪ್ರಧಾನಿ ಕಚೇರಿಗೆ ಸ್ಪೀಡ್ ಪೋಸ್ಟ್ ಮಾಡುವ ಮೂಲಕ ಮಂಗಳವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.</p>.<p>ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಮಾತನಾಡಿ, ‘ಗೋವಿನಜೋಳ, ಹತ್ತಿ, ಸೂರ್ಯಕಾಂತಿ, ಸೌತೆಕಾಯಿ, ಮೆಣಸಿನಕಾಯಿ ಮೊದಲಾದ ಗಿಡಗಳನ್ನು ರವಾನಿಸಲಾಗಿದೆ. ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಈ ಬಗ್ಗೆ ಸರ್ಕಾರವನ್ನು ಎಚ್ಚರಿಸಲು ಪ್ರತಿಭಟನೆ ನಡೆಸಲಾಗುತ್ತಿದೆ. ಕೂಡಲೇ ರೈತರ ಸಾಲ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮುಖಂಡರು ಕುರುಡರಾಗಿದ್ದಾರೆ, ಕಿವುಡರಾಗಿದ್ದಾರೆ. ರಾಜ್ಯದ ನಾಲಾಯಕ್ ಸಂಸದರು ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಟ್ಟು, ಕೈಗೆ ಬಳೆ ತೊಟ್ಟುಕೊಂಡು ಮನೆಗಳಲ್ಲಿ ಕುಳಿತುಕೊಳ್ಳಬೇಕು’ ಎಂದರು.</p>.<p>‘ಪ್ರಧಾನಿಯು ರಷ್ಯಾಕ್ಕೆ ₹ 72ಸಾವಿರ ಕೋಟಿ ಸಾಲ ಕೊಟ್ದಿದ್ದಾರೆ. ಅವರು ಬೇಕಿದ್ದರೆ ಅಮೆರಿಕದಲ್ಲಿಯೇ ಕುಳಿತುಕೊಳ್ಳಲಿ. ರಾಜ್ಯದ ಸಂತ್ರಸ್ತರಿಗೆ ಅನುದಾನ ಕೊಡಲಿ’ ಎಂದು ಒತ್ತಾಯಿಸಿದರು.</p>.<p>ಪಕ್ಷದಿಂದ ನಡೆದ ಪ್ರತಿಭಟನೆಯಲ್ಲೂ ಘಟಕದ ಕಾರ್ಯಕರ್ತೆಯರು ಹಾಳಾದ ಗಡಿಗಳನ್ನು ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>