<p><strong>ಬೆಂಗಳೂರು</strong>: ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳ ಮುಚ್ಚುವುದನ್ನು ಸರ್ಕಾರ ನಿಲ್ಲಿಸಬೇಕು ಎಂದು ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಒತ್ತಾಯಿಸಿದರು.</p>.<p>ಎಐಡಿಎಸ್ಒ ಕರ್ನಾಟಕ ರಾಜ್ಯ ಸಮಿತಿಯು ಶನಿವಾರ ಆಯೋಜಿಸಿದ್ದ ‘ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಮುಚ್ಚುವ ನಿರ್ಧಾರದ ವಿರುದ್ಧ ಸಮಾವೇಶ’ದಲ್ಲಿ ಅವರು ಮಾತನಾಡಿದರು.</p>.<p>‘ಬಡ ಕುಟುಂಬದ ಮಕ್ಕಳು ಈಗಲೂ ಸರ್ಕಾರಿ ಶಾಲೆಗಳಿಗೇ ಹೋಗುತ್ತಿದ್ದಾರೆ. ಆ ಶಾಲೆಗಳನ್ನು ಮುಚ್ಚಿದರೆ, ಮಕ್ಕಳು ಎಲ್ಲಿಗೆ ಹೋಗಬೇಕು? ಹೆಣ್ಣುಮಕ್ಕಳಂತು 5–7 ಕಿ.ಮೀ.ದೂರದ ಕೆಪಿಎಸ್ ಮತ್ತು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಿಗೆ ನಡೆದುಕೊಂಡು ಹೋಗುವುದು ಸಾಧ್ಯವಿಲ್ಲ. ಸರ್ಕಾರಿ ಶಾಲೆಗಳನ್ನು ಮುಚ್ಚಿದರೆ, ಈ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಲೇಖಕಿ ಸಬಿಹಾ ಭೂಮಿ ಗೌಡ, ‘ಶಿಕ್ಷಣವು ವೈಜ್ಞಾನಿಕ ಮನೋಭಾವದ ಮೂಲಕ ಮೌಢ್ಯ ಹಾಗೂ ದಾಸ್ಯವನ್ನು ಹೋಗಲಾಡಿಸುತ್ತದೆ. ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಮೂಲಕ, ಅಂತಹ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ ನಡೆಸಲಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷ ವಿ.ಎನ್.ರಾಜಶೇಖರ್, ‘ಊರಿನಾಚೆ ಇರುವ ಮ್ಯಾಗ್ನೆಟ್ ಶಾಲೆಗಳಿಗೆ ಉಚಿತ ಬಸ್ ಒದಗಿಸಲಾಗುತ್ತಿದೆ ಎಂಬುದು ಸುಳ್ಳು. ಅದರ ಸಂಪೂರ್ಣ ಹೊಣೆಯನ್ನು ಎಸ್ಡಿಎಂಸಿ ಮತ್ತು ಪೋಷಕರ ತಲೆಗೆ ಕಟ್ಟಲಾಗಿದೆ’ ಎಂದರು.</p>.<p>ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರೆಗೋಡು, ಶಿಕ್ಷಣ ತಜ್ಞ ಪ್ರೊ. ನಿರಂಜನಾರಾಧ್ಯ, ಎಐಡಿಎಸ್ಓ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಸಮಾವೇಶದಲ್ಲಿ ವಿಷಯ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳ ಮುಚ್ಚುವುದನ್ನು ಸರ್ಕಾರ ನಿಲ್ಲಿಸಬೇಕು ಎಂದು ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಒತ್ತಾಯಿಸಿದರು.</p>.<p>ಎಐಡಿಎಸ್ಒ ಕರ್ನಾಟಕ ರಾಜ್ಯ ಸಮಿತಿಯು ಶನಿವಾರ ಆಯೋಜಿಸಿದ್ದ ‘ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಮುಚ್ಚುವ ನಿರ್ಧಾರದ ವಿರುದ್ಧ ಸಮಾವೇಶ’ದಲ್ಲಿ ಅವರು ಮಾತನಾಡಿದರು.</p>.<p>‘ಬಡ ಕುಟುಂಬದ ಮಕ್ಕಳು ಈಗಲೂ ಸರ್ಕಾರಿ ಶಾಲೆಗಳಿಗೇ ಹೋಗುತ್ತಿದ್ದಾರೆ. ಆ ಶಾಲೆಗಳನ್ನು ಮುಚ್ಚಿದರೆ, ಮಕ್ಕಳು ಎಲ್ಲಿಗೆ ಹೋಗಬೇಕು? ಹೆಣ್ಣುಮಕ್ಕಳಂತು 5–7 ಕಿ.ಮೀ.ದೂರದ ಕೆಪಿಎಸ್ ಮತ್ತು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಿಗೆ ನಡೆದುಕೊಂಡು ಹೋಗುವುದು ಸಾಧ್ಯವಿಲ್ಲ. ಸರ್ಕಾರಿ ಶಾಲೆಗಳನ್ನು ಮುಚ್ಚಿದರೆ, ಈ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಲೇಖಕಿ ಸಬಿಹಾ ಭೂಮಿ ಗೌಡ, ‘ಶಿಕ್ಷಣವು ವೈಜ್ಞಾನಿಕ ಮನೋಭಾವದ ಮೂಲಕ ಮೌಢ್ಯ ಹಾಗೂ ದಾಸ್ಯವನ್ನು ಹೋಗಲಾಡಿಸುತ್ತದೆ. ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಮೂಲಕ, ಅಂತಹ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ ನಡೆಸಲಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷ ವಿ.ಎನ್.ರಾಜಶೇಖರ್, ‘ಊರಿನಾಚೆ ಇರುವ ಮ್ಯಾಗ್ನೆಟ್ ಶಾಲೆಗಳಿಗೆ ಉಚಿತ ಬಸ್ ಒದಗಿಸಲಾಗುತ್ತಿದೆ ಎಂಬುದು ಸುಳ್ಳು. ಅದರ ಸಂಪೂರ್ಣ ಹೊಣೆಯನ್ನು ಎಸ್ಡಿಎಂಸಿ ಮತ್ತು ಪೋಷಕರ ತಲೆಗೆ ಕಟ್ಟಲಾಗಿದೆ’ ಎಂದರು.</p>.<p>ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರೆಗೋಡು, ಶಿಕ್ಷಣ ತಜ್ಞ ಪ್ರೊ. ನಿರಂಜನಾರಾಧ್ಯ, ಎಐಡಿಎಸ್ಓ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಸಮಾವೇಶದಲ್ಲಿ ವಿಷಯ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>