ವ್ಯಕ್ತಿತ್ವ ಪರೀಕ್ಷೆ ಆಯ್ಕೆಯಾಗಿದ್ದ 30 ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಮತ್ತು ಕನ್ನಡ ಕಡ್ಡಾಯ ಪರೀಕ್ಷೆಯಲ್ಲಿ ಪರೀಕ್ಷಾ ನಿಯಮ ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಕೆಪಿಎಸ್ಸಿ ಪಟ್ಟಿಯಿಂದ ಕೈಬಿಟ್ಟಿತ್ತು. ಅಲ್ಲದೆ, 1:5 ಅನುಪಾತದಲ್ಲಿ ಆಯ್ಕೆಯಾದವರಿಗೆ ಈಗಾಗಲೇ ವ್ಯಕ್ತಿತ್ವ ಪರೀಕ್ಷೆಯನ್ನೂ ಮಾಡಿದೆ. ಕೆಪಿಎಸ್ಸಿ ತಮ್ಮನ್ನು ಕೈ ಬಿಟ್ಟಿದ್ದನ್ನು ಪ್ರಶ್ನಿಸಿ 13 ಅಭ್ಯರ್ಥಿಗಳು ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಮೊರೆ ಹೋಗಿದ್ದರು.