ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಸದಸ್ಯರಾಗಿ ಅಬಕಾರಿ ಇಲಾಖೆಯ ನಿವೃತ್ತ ಉಪ ಆಯುಕ್ತ ಶಿವನಗೌಡ ಅವರನ್ನು ನೇಮಿಸಿ ಅಧಿಸೂಚನೆ ಹೊರಡಿಸಲಾಗಿದೆ.
ರಾಯಚೂರು ಜಿಲ್ಲೆ ದೇವದುರ್ಗದ ಜಾಲಹಳ್ಳಿಯವರಾದ, ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಶಿವನಗೌಡ ಅವರನ್ನು ಅವರನ್ನು ಅಧಿಕಾರಿ ವಿಭಾಗದಿಂದ ಖಾಲಿ ಇರುವ ಸದಸ್ಯ ಸ್ಥಾನಕ್ಕೆ ನೇಮಿಸಲಾಗಿದೆ.
ಮಾರ್ಚ್ 12ರಂದೇ ಶಿವನಗೌಡ ಅವರನ್ನು ಕೆಪಿಎಸ್ಸಿ ಸದಸ್ಯರನ್ನಾಗಿ ನೇಮಿಸಿ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಿಪ್ಪಣಿ ಕಳುಹಿಸಿದ್ದರು. ಲೋಕಸಭೆ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿ ಇದ್ದುದರಿಂದ ನೇಮಕ ಅಧಿಸೂಚನೆ ಸೂಚನೆ ಪ್ರಕಟ ಆಗಿರಲಿಲ್ಲ.