<p><strong>ಬೆಂಗಳೂರು:</strong> ‘ಕರ್ನಾಟಕ ಲೋಕಸೇವಾ ಆಯೋಗ ದಲ್ಲಿ(ಕೆಪಿಎಸ್ಸಿ) ನಡೆಯುತ್ತಿರುವ ಭ್ರಷ್ಟಾಚಾರ ನಿರ್ಮೂಲನೆಗೆ ಸಂಘಟಿತ ಹೋರಾಟ ಅನಿವಾರ್ಯ’ ಎಂದು ಕರ್ನಾಟಕ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಸಲಹೆಗಾರ ಜಿ.ಎಸ್.ಕುಮಾರ್ ಹೇಳಿದರು.</p>.<p>ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ–ಕರ್ನಾಟಕ ಘಟಕ ಹಮ್ಮಿಕೊಂಡಿದ್ದ ವೆಬಿನಾರ್ನಲ್ಲಿ ಮಾತನಾಡಿದ ಅವರು, ‘ಕೆಪಿಎಸ್ಸಿಯಲ್ಲಿನ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಯುತ್ತಿದೆ. ಅಲ್ಲದೇ ಖಾಲಿ ಇರುವ ಹುದ್ದೆಗಳ ಭರ್ತಿಗೂ ಅವಿರತ ಹೋರಾಟ ಮಾಡಬೇಕಾಗುತ್ತದೆ. ಯುವಜನರ ಸಹಕಾರದಿಂದ ಇದು ಸಾಧ್ಯ’ ಎಂದು ತಿಳಿಸಿದರು.</p>.<p>‘ಒಳಮೀಸಲಾತಿ ಕಾರಣದಿಂದ 56,432 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿತ್ತು. ನೇಮಕದ ಅಧಿಕೃತ ದಿನಾಂಕ ಪ್ರಕಟಣೆಗೆ ಹೋರಾಟ ಮುಂದುವರಿಸಬೇಕಾಗಿದೆ. ಗುರಿ ತಲುಪವವರೆಗೂ ಎಂತಹ ಸಂದರ್ಭದಲ್ಲೂ ಯುವಕರು ವಿಚಲಿತರಾಗಬಾರದು’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಮಿತಿ ರಾಜ್ಯ ಸಂಚಾಲಕ ಸಿದ್ದಲಿಂಗ ಬಾಗೇವಾಡಿ ಮಾತನಾಡಿ, ‘2011ರಿಂದ ನಿರುದ್ಯೋಗದ ವಿರುದ್ಧ ಹೋರಾಟಗಳು ನಡೆದುಕೊಂಡೇ ಬಂದಿವೆ. ಇದಕ್ಕೆ ಹಿರಿಯರಾದ ಸಂತೋಷ್ ಹೆಗ್ಡೆ, ಎಸ್.ಆರ್.ಹಿರೇಮಠ ಸಹಿತ ಹಲವರು ಬೆಂಬಲಿಸಿದ್ದಾರೆ. ಮುಂದೆಯೂ ನಮ್ಮ ಹಕ್ಕು ಪಡೆಯಲು ಒಗ್ಗಟ್ಟಿನಿಂದ ಇರೋಣ’ ಎಂದರು.</p>.<p>ಸಮಿತಿ ಸಹ ಸಂಚಾಲಕರಾದ ವೀರೇಶ್ ನರೇಗಲ್, ಟಿ.ಆರ್.ಸುನೀಲ್, ಭವಾನಿ ಶಂಕರೇಗೌಡ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-4-910452480</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕರ್ನಾಟಕ ಲೋಕಸೇವಾ ಆಯೋಗ ದಲ್ಲಿ(ಕೆಪಿಎಸ್ಸಿ) ನಡೆಯುತ್ತಿರುವ ಭ್ರಷ್ಟಾಚಾರ ನಿರ್ಮೂಲನೆಗೆ ಸಂಘಟಿತ ಹೋರಾಟ ಅನಿವಾರ್ಯ’ ಎಂದು ಕರ್ನಾಟಕ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಸಲಹೆಗಾರ ಜಿ.ಎಸ್.ಕುಮಾರ್ ಹೇಳಿದರು.</p>.<p>ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ–ಕರ್ನಾಟಕ ಘಟಕ ಹಮ್ಮಿಕೊಂಡಿದ್ದ ವೆಬಿನಾರ್ನಲ್ಲಿ ಮಾತನಾಡಿದ ಅವರು, ‘ಕೆಪಿಎಸ್ಸಿಯಲ್ಲಿನ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಯುತ್ತಿದೆ. ಅಲ್ಲದೇ ಖಾಲಿ ಇರುವ ಹುದ್ದೆಗಳ ಭರ್ತಿಗೂ ಅವಿರತ ಹೋರಾಟ ಮಾಡಬೇಕಾಗುತ್ತದೆ. ಯುವಜನರ ಸಹಕಾರದಿಂದ ಇದು ಸಾಧ್ಯ’ ಎಂದು ತಿಳಿಸಿದರು.</p>.<p>‘ಒಳಮೀಸಲಾತಿ ಕಾರಣದಿಂದ 56,432 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿತ್ತು. ನೇಮಕದ ಅಧಿಕೃತ ದಿನಾಂಕ ಪ್ರಕಟಣೆಗೆ ಹೋರಾಟ ಮುಂದುವರಿಸಬೇಕಾಗಿದೆ. ಗುರಿ ತಲುಪವವರೆಗೂ ಎಂತಹ ಸಂದರ್ಭದಲ್ಲೂ ಯುವಕರು ವಿಚಲಿತರಾಗಬಾರದು’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಮಿತಿ ರಾಜ್ಯ ಸಂಚಾಲಕ ಸಿದ್ದಲಿಂಗ ಬಾಗೇವಾಡಿ ಮಾತನಾಡಿ, ‘2011ರಿಂದ ನಿರುದ್ಯೋಗದ ವಿರುದ್ಧ ಹೋರಾಟಗಳು ನಡೆದುಕೊಂಡೇ ಬಂದಿವೆ. ಇದಕ್ಕೆ ಹಿರಿಯರಾದ ಸಂತೋಷ್ ಹೆಗ್ಡೆ, ಎಸ್.ಆರ್.ಹಿರೇಮಠ ಸಹಿತ ಹಲವರು ಬೆಂಬಲಿಸಿದ್ದಾರೆ. ಮುಂದೆಯೂ ನಮ್ಮ ಹಕ್ಕು ಪಡೆಯಲು ಒಗ್ಗಟ್ಟಿನಿಂದ ಇರೋಣ’ ಎಂದರು.</p>.<p>ಸಮಿತಿ ಸಹ ಸಂಚಾಲಕರಾದ ವೀರೇಶ್ ನರೇಗಲ್, ಟಿ.ಆರ್.ಸುನೀಲ್, ಭವಾನಿ ಶಂಕರೇಗೌಡ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-4-910452480</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>