ಬೆಂಗಳೂರು: ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಇದೇ 24ರಂದು ನಡೆಯಲಿರುವ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಅಂಧರಿಗೆ ಗಂಟೆಗೆ 20 ನಿಮಿಷ ಹೆಚ್ಚುವರಿ ಸಮಯ ನಿಗದಿ ಮಾಡುವಂತೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಿಳಿಸಿದೆ.
ರಾಷ್ಟ್ರೀಯ ಅಂಧರ ಒಕ್ಕೂಟ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನುಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
‘ಕೇಂದ್ರ ಸರ್ಕಾರದ ಇತ್ತೀಚಿನ ಮಾರ್ಗಸೂಚಿ ಪ್ರಕಾರ ಪರೀಕ್ಷೆಯಲ್ಲಿ ಅಂಧರಿಗೆ 20 ನಿಮಿಷ ಹೆಚ್ಚುವರಿ ಸಮಯ ನೀಡಬೇಕು. ರಾಜ್ಯ ಸರ್ಕಾರದ ನಿಯಮಗಳು 10 ನಿಮಿಷ ಸಮಯ ನೀಡಿವೆ. 682 ಅಂಧರು ಕೆಪಿಎಸ್ಸಿ ಪೂರ್ವಸಿದ್ಧತಾ ಪರೀಕ್ಷೆ ತೆಗೆದುಕೊಂಡಿದ್ದಾರೆ’ ಎಂದು ಅರ್ಜಿದಾರರ ಪರ ವಕೀಲರು ವಿವರಿಸಿದರು.