<p><strong>ಬೆಂಗಳೂರು</strong>: ವಿವಿಧ ಇಲಾಖೆಗಳ ಗ್ರೂಪ್–ಬಿ ಹುದ್ದೆಗಳ ನೇಮಕಾತಿಗಾಗಿ ಇದೇ ಶನಿವಾರ (ಸೆ.14), ಭಾನುವಾರ (ಸೆ.15) ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಶುಕ್ರವಾರ ಮುಂದೂಡಿದೆ.</p>.<p>ಇದೇ ಹುದ್ದೆಗಳ ನೇಮಕಾತಿಗಾಗಿ ಇತರೆ ದಿನಾಂಕಗಳಲ್ಲಿ ನಡೆಯಬೇಕಿದ್ದ ವಿಷಯವಾರು ಪತ್ರಿಕೆಗಳ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. </p>.<p>ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯನ್ನು ಮೂರು ವರ್ಷ ಸಡಿಲಿಸಿ ಇದೇ 10ರಂದು ರಾಜ್ಯ ಸರ್ಕಾರ ಆದೇಶಿಸಿತ್ತು.</p>.<p>ಈ ವಯೋಮಿತಿ ಸಡಿಲಿಕೆಯು ಒಂದು ಬಾರಿ ಮಾತ್ರ ಅನ್ವಯವಾಗಲಿದ್ದು, ಈಗಾಗಲೇ ಹೊರಡಿಸಲಾಗಿರುವ ನೇರ ನೇಮಕಾತಿ ಅಧಿಸೂಚನೆಗಳು ಮತ್ತು ಮುಂದಿನ ಒಂದು ವರ್ಷದಲ್ಲಿ ನಡೆಯಲಿರುವ ನೇಮಕಾತಿಗಳಲ್ಲಿ ಇದನ್ನು ಪಾಲಿಸಬೇಕು ಎಂದು ಸರ್ಕಾರ ಆದೇಶಿಸಿತ್ತು. ಈ ಕಾರಣದಿಂದ ಶನಿವಾರ ಮತ್ತು ಭಾನುವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p>ಗರಿಷ್ಠ ವಯೋಮಿತಿ ಮೂರು ವರ್ಷ ಸಡಿಲಿಕೆ ಅನ್ವಯವಾಗುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ನಂತರ ಪರೀಕ್ಷೆಗಳ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿವಿಧ ಇಲಾಖೆಗಳ ಗ್ರೂಪ್–ಬಿ ಹುದ್ದೆಗಳ ನೇಮಕಾತಿಗಾಗಿ ಇದೇ ಶನಿವಾರ (ಸೆ.14), ಭಾನುವಾರ (ಸೆ.15) ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಶುಕ್ರವಾರ ಮುಂದೂಡಿದೆ.</p>.<p>ಇದೇ ಹುದ್ದೆಗಳ ನೇಮಕಾತಿಗಾಗಿ ಇತರೆ ದಿನಾಂಕಗಳಲ್ಲಿ ನಡೆಯಬೇಕಿದ್ದ ವಿಷಯವಾರು ಪತ್ರಿಕೆಗಳ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. </p>.<p>ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯನ್ನು ಮೂರು ವರ್ಷ ಸಡಿಲಿಸಿ ಇದೇ 10ರಂದು ರಾಜ್ಯ ಸರ್ಕಾರ ಆದೇಶಿಸಿತ್ತು.</p>.<p>ಈ ವಯೋಮಿತಿ ಸಡಿಲಿಕೆಯು ಒಂದು ಬಾರಿ ಮಾತ್ರ ಅನ್ವಯವಾಗಲಿದ್ದು, ಈಗಾಗಲೇ ಹೊರಡಿಸಲಾಗಿರುವ ನೇರ ನೇಮಕಾತಿ ಅಧಿಸೂಚನೆಗಳು ಮತ್ತು ಮುಂದಿನ ಒಂದು ವರ್ಷದಲ್ಲಿ ನಡೆಯಲಿರುವ ನೇಮಕಾತಿಗಳಲ್ಲಿ ಇದನ್ನು ಪಾಲಿಸಬೇಕು ಎಂದು ಸರ್ಕಾರ ಆದೇಶಿಸಿತ್ತು. ಈ ಕಾರಣದಿಂದ ಶನಿವಾರ ಮತ್ತು ಭಾನುವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p>ಗರಿಷ್ಠ ವಯೋಮಿತಿ ಮೂರು ವರ್ಷ ಸಡಿಲಿಕೆ ಅನ್ವಯವಾಗುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ನಂತರ ಪರೀಕ್ಷೆಗಳ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>