<p><strong>ಬೆಂಗಳೂರು</strong>: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಆಯ್ಕೆಗೆ ನಡೆದ ಮುಖ್ಯ ಪರೀಕ್ಷೆಯಿಂದ 1:3ರ ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ (ಸಂದರ್ಶನ) ಅಭ್ಯರ್ಥಿಗಳ ಅರ್ಹತಾ ಪಟ್ಟಿ ಸಿದ್ಧಪಡಿಸಿದ ವೇಳೆ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉದ್ಯೋಗಾಂಕ್ಷಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.</p><p>ಏತನ್ಮಧ್ಯೆ ನೊಂದಿರುವ ಅರ್ಹ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಕಾಂಗ್ರೆಸ್ ಮುಖಂಡ ಡಿ.ಕೆ. ಸುರೇಶ್ ಅವರು ಆಗ್ರಹಿಸಿದ್ದಾರೆ.</p><p>ಈ ಕುರಿತು ಇಂದು ಟ್ವೀಟ್ ಮಾಡಿರುವ ಅವರು, ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದ ಮುಖ್ಯ ಪರೀಕ್ಷೆ ಫಲಿತಾಂಶದ ಪಟ್ಟಿಯಲ್ಲಿ ಒಂದೇ ಕೊಠಡಿಯಲ್ಲಿ ಮುಖ್ಯ ಪರೀಕ್ಷೆ ಎದುರಿಸಿದ್ದ 15 ಮಂದಿ ಸಂದರ್ಶನಕ್ಕೆ ಆಯ್ಕೆಯಾಗಿರುವುದು ಉಳಿದ ಉದ್ಯೋಗ ಆಕಾಂಕ್ಷಿಗಳಲ್ಲಿ ಗೊಂದಲ ಮೂಡಿಸಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನೊಂದಿರುವ ಅರ್ಹ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಎಚ್ಚರಿಸಿದ್ದಾರೆ.</p><p>ಇನ್ನು ಅರ್ಹತಾ ಪಟ್ಟಿ ಸಿದ್ಧಪಡಿಸಿದ ವೇಳೆ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಕೆಪಿಎಸ್ಸಿಯಿಂದ ವರದಿ ಕೇಳಿದ್ದಾರೆ.</p><p>ಅನ್ಯಾಯ ಖಂಡಿಸಿ ಇಂದು ಉದ್ಯೋಗಾಂಕ್ಷಿಗಳಿಂದ ಅಲ್ಲಲ್ಲಿ ತೀವ್ರ ಪ್ರತಿಭಟನೆಗಳೂ ಸಹ ನಡೆದಿದ್ದು, ಹಲವರು ಕೆಪಿಎಸ್ಸಿ ವಿರುದ್ಧ ಜಾಲತಾಣಗಳಲ್ಲಿ ತೀವ್ರ ಕಿಡಿಕಾರಿದ್ದಾರೆ.</p><p>ವ್ಯಕ್ತಿತ್ವ ಪರೀಕ್ಷೆಗೆ ಅರ್ಹರ ಪಟ್ಟಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಕೆಲವು ಅಭ್ಯರ್ಥಿಗಳು, ಸಂದರ್ಶನಕ್ಕೆ ಅರ್ಹತೆ ಪಡೆದಿರುವವರ ಆಯ್ಕೆಯ ವೇಳೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಸ್ಟ್ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರಿಗೂ ಟ್ಯಾಗ್ ಮಾಡಿ, ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.</p>.ಎಂವಿಐ, ಎಇಇ ನೇಮಕಾತಿ: ಕೆಪಿಎಸ್ಸಿಗೆ ನೀಡಿದ್ದ ಅನುಮತಿ ವಾಪಸ್.'ಡಿ.ಕೆ.ಸುರೇಶ ಅವರನ್ನು ಕೊಲ್ಲಿ' ಎಂಬ ಈಶ್ವರಪ್ಪ ಹೇಳಿಕೆಗೆ ಮುತಾಲಿಕ್ ಸಮರ್ಥನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಆಯ್ಕೆಗೆ ನಡೆದ ಮುಖ್ಯ ಪರೀಕ್ಷೆಯಿಂದ 1:3ರ ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ (ಸಂದರ್ಶನ) ಅಭ್ಯರ್ಥಿಗಳ ಅರ್ಹತಾ ಪಟ್ಟಿ ಸಿದ್ಧಪಡಿಸಿದ ವೇಳೆ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉದ್ಯೋಗಾಂಕ್ಷಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.</p><p>ಏತನ್ಮಧ್ಯೆ ನೊಂದಿರುವ ಅರ್ಹ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಕಾಂಗ್ರೆಸ್ ಮುಖಂಡ ಡಿ.ಕೆ. ಸುರೇಶ್ ಅವರು ಆಗ್ರಹಿಸಿದ್ದಾರೆ.</p><p>ಈ ಕುರಿತು ಇಂದು ಟ್ವೀಟ್ ಮಾಡಿರುವ ಅವರು, ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದ ಮುಖ್ಯ ಪರೀಕ್ಷೆ ಫಲಿತಾಂಶದ ಪಟ್ಟಿಯಲ್ಲಿ ಒಂದೇ ಕೊಠಡಿಯಲ್ಲಿ ಮುಖ್ಯ ಪರೀಕ್ಷೆ ಎದುರಿಸಿದ್ದ 15 ಮಂದಿ ಸಂದರ್ಶನಕ್ಕೆ ಆಯ್ಕೆಯಾಗಿರುವುದು ಉಳಿದ ಉದ್ಯೋಗ ಆಕಾಂಕ್ಷಿಗಳಲ್ಲಿ ಗೊಂದಲ ಮೂಡಿಸಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನೊಂದಿರುವ ಅರ್ಹ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಎಚ್ಚರಿಸಿದ್ದಾರೆ.</p><p>ಇನ್ನು ಅರ್ಹತಾ ಪಟ್ಟಿ ಸಿದ್ಧಪಡಿಸಿದ ವೇಳೆ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಕೆಪಿಎಸ್ಸಿಯಿಂದ ವರದಿ ಕೇಳಿದ್ದಾರೆ.</p><p>ಅನ್ಯಾಯ ಖಂಡಿಸಿ ಇಂದು ಉದ್ಯೋಗಾಂಕ್ಷಿಗಳಿಂದ ಅಲ್ಲಲ್ಲಿ ತೀವ್ರ ಪ್ರತಿಭಟನೆಗಳೂ ಸಹ ನಡೆದಿದ್ದು, ಹಲವರು ಕೆಪಿಎಸ್ಸಿ ವಿರುದ್ಧ ಜಾಲತಾಣಗಳಲ್ಲಿ ತೀವ್ರ ಕಿಡಿಕಾರಿದ್ದಾರೆ.</p><p>ವ್ಯಕ್ತಿತ್ವ ಪರೀಕ್ಷೆಗೆ ಅರ್ಹರ ಪಟ್ಟಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಕೆಲವು ಅಭ್ಯರ್ಥಿಗಳು, ಸಂದರ್ಶನಕ್ಕೆ ಅರ್ಹತೆ ಪಡೆದಿರುವವರ ಆಯ್ಕೆಯ ವೇಳೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಸ್ಟ್ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರಿಗೂ ಟ್ಯಾಗ್ ಮಾಡಿ, ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.</p>.ಎಂವಿಐ, ಎಇಇ ನೇಮಕಾತಿ: ಕೆಪಿಎಸ್ಸಿಗೆ ನೀಡಿದ್ದ ಅನುಮತಿ ವಾಪಸ್.'ಡಿ.ಕೆ.ಸುರೇಶ ಅವರನ್ನು ಕೊಲ್ಲಿ' ಎಂಬ ಈಶ್ವರಪ್ಪ ಹೇಳಿಕೆಗೆ ಮುತಾಲಿಕ್ ಸಮರ್ಥನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>