<p><strong>ಬೆಂಗಳೂರು</strong>: ಮೋಟಾರು ವಾಹನ ನಿರೀಕ್ಷಕರ ಆಯ್ಕೆಯಲ್ಲಿನ ಅಕ್ರಮದ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.</p>.<p>ಈ ಕುರಿತು ‘ಪ್ರಜಾವಾಣಿ’ ವರದಿಯನ್ನು ಟ್ವೀಟ್ನಲ್ಲಿ ಹಂಚಿಕೊಂಡಿರುವ ಕೆಪಿಸಿಸಿ, ‘ಶೇ 40 ಸರ್ಕಾರದ ಹುದ್ದೆ ಮಾರಾಟ ಪರ್ವ ಮುಂದುವರೆದಿದೆ. ಪಿಎಸ್ಐ ಅಕ್ರಮದಂತೆ ಸಾರಿಗೆ ಇಲಾಖೆಯ ಬ್ರೇಕ್ ಇನ್ಸ್ಪೆಕ್ಟರ್ ಆಯ್ಕೆಯಲ್ಲೂ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ’ ಎಂದು ಹೇಳಿದೆ.</p>.<p>‘ಭ್ರಷ್ಟಾಚಾರದ ಕೂಪವಾಗಿರುವ ಕೆಪಿಎಸ್ಇಯೇ ಅನರ್ಹರೆಂದು ಗುರುತಿಸಿದ್ದ ಅಭ್ಯರ್ಥಿಗಳನ್ನು ಅರ್ಹರೆಂದು ಮುದ್ರೆ ಒತ್ತಿದ್ದೇಕೆ? ಇದರಲ್ಲೂ ಶೇ 40 ವಸೂಲಿ ನಡೆದಿರುವುದು ನಿಶ್ಚಿತ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.</p>.<p>ಮೋಟಾರು ವಾಹನ ನಿರೀಕ್ಷಕ (ಐಎಂವಿ– ಬ್ರೇಕ್ ಇನ್ಸ್ಪೆಕ್ಟರ್) ಹುದ್ದೆಗೆ ಕೆಪಿಎಸ್ಸಿ ಪ್ರಕಟಿಸಿರುವ ಪರಿಷ್ಕೃತ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ 141 ಅಭ್ಯರ್ಥಿಗಳಲ್ಲಿ, ಈ ಹುದ್ದೆಗೆ ‘ಅನರ್ಹ’ರೆಂದು ಕೆಪಿಎಸ್ಸಿಯೇ ಗುರುತಿಸಿದ್ದ 107 ಅಭ್ಯರ್ಥಿಗಳ ಹೆಸರುಗಳಿರುವುದು ಸಂಶಯಕ್ಕೆ ಕಾರಣವಾಗಿದೆ.</p>.<p>ಅನರ್ಹರೆಂದು ಗುರುತಿಸಲಾಗಿದ್ದವರ ಪೈಕಿ ಕೆಲವರಿಗೆ ಸಾರಿಗೆ ಇಲಾಖೆಯೇ ‘ಅರ್ಹತೆ’ಯ ಪ್ರಮಾಣಪತ್ರ ನೀಡಲು ಮುಂದಾಗಿದೆ ಎಂದೂ ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೋಟಾರು ವಾಹನ ನಿರೀಕ್ಷಕರ ಆಯ್ಕೆಯಲ್ಲಿನ ಅಕ್ರಮದ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.</p>.<p>ಈ ಕುರಿತು ‘ಪ್ರಜಾವಾಣಿ’ ವರದಿಯನ್ನು ಟ್ವೀಟ್ನಲ್ಲಿ ಹಂಚಿಕೊಂಡಿರುವ ಕೆಪಿಸಿಸಿ, ‘ಶೇ 40 ಸರ್ಕಾರದ ಹುದ್ದೆ ಮಾರಾಟ ಪರ್ವ ಮುಂದುವರೆದಿದೆ. ಪಿಎಸ್ಐ ಅಕ್ರಮದಂತೆ ಸಾರಿಗೆ ಇಲಾಖೆಯ ಬ್ರೇಕ್ ಇನ್ಸ್ಪೆಕ್ಟರ್ ಆಯ್ಕೆಯಲ್ಲೂ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ’ ಎಂದು ಹೇಳಿದೆ.</p>.<p>‘ಭ್ರಷ್ಟಾಚಾರದ ಕೂಪವಾಗಿರುವ ಕೆಪಿಎಸ್ಇಯೇ ಅನರ್ಹರೆಂದು ಗುರುತಿಸಿದ್ದ ಅಭ್ಯರ್ಥಿಗಳನ್ನು ಅರ್ಹರೆಂದು ಮುದ್ರೆ ಒತ್ತಿದ್ದೇಕೆ? ಇದರಲ್ಲೂ ಶೇ 40 ವಸೂಲಿ ನಡೆದಿರುವುದು ನಿಶ್ಚಿತ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.</p>.<p>ಮೋಟಾರು ವಾಹನ ನಿರೀಕ್ಷಕ (ಐಎಂವಿ– ಬ್ರೇಕ್ ಇನ್ಸ್ಪೆಕ್ಟರ್) ಹುದ್ದೆಗೆ ಕೆಪಿಎಸ್ಸಿ ಪ್ರಕಟಿಸಿರುವ ಪರಿಷ್ಕೃತ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ 141 ಅಭ್ಯರ್ಥಿಗಳಲ್ಲಿ, ಈ ಹುದ್ದೆಗೆ ‘ಅನರ್ಹ’ರೆಂದು ಕೆಪಿಎಸ್ಸಿಯೇ ಗುರುತಿಸಿದ್ದ 107 ಅಭ್ಯರ್ಥಿಗಳ ಹೆಸರುಗಳಿರುವುದು ಸಂಶಯಕ್ಕೆ ಕಾರಣವಾಗಿದೆ.</p>.<p>ಅನರ್ಹರೆಂದು ಗುರುತಿಸಲಾಗಿದ್ದವರ ಪೈಕಿ ಕೆಲವರಿಗೆ ಸಾರಿಗೆ ಇಲಾಖೆಯೇ ‘ಅರ್ಹತೆ’ಯ ಪ್ರಮಾಣಪತ್ರ ನೀಡಲು ಮುಂದಾಗಿದೆ ಎಂದೂ ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>