ಆ ನಂತರ ಅಭ್ಯರ್ಥಿಗಳ ಸಿಂಧುತ್ವ ಹಾಗೂ 371(ಜೆ ) ಹಾಗೂ ಇತರೆ ದಾಖಲಾತಿಗಳನ್ನು ಪರಿಶೀಲಿಸಿ ನೇಮಕಾತಿ ಆದೇಶ ನೀಡಲಾಗಿ; 537 ಅಭ್ಯರ್ಥಿಗಳು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಸಾರಿಗೆ, ಅಂಗವಿಕಲ, ಸಹಕಾರ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ರೇಷ್ಮೆ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಗಳು ಉಳಿದ 124 ಅಭ್ಯರ್ಥಿಗಳಿಗೆ ಇಲ್ಲಿಯವರೆಗೂ ನೇಮಕಾತಿ ಆದೇಶ ನೀಡಿಲ್ಲ ಎಂದು ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.