<p><strong>ಬೆಂಗಳೂರು:</strong> ಮೋಟಾರು ವಾಹನ ನಿರೀಕ್ಷಕ (ಎಂವಿಐ) ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ‘ವಿಶೇಷ ಪ್ರಕರಣ’ವೆಂದು ಪರಿಗಣಿಸಿ ಮುಂದುವರಿಸಲು ಕೆಪಿಎಸ್ಸಿಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.</p>.<p>ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಕೆಪಿಎಸ್ಸಿ ಕಾರ್ಯದರ್ಶಿಗೆ ಗುರುವಾರ ಪತ್ರ ಬರೆದಿದ್ದಾರೆ.</p>.<p>ಲೋಕೋಪಯೋಗಿ ಇಲಾಖೆಯ ಎಇಇ ಒಟ್ಟು 42 (ಈ ಪೈಕಿ 12 ಹೈಕ) ಹುದ್ದೆಗಳ ನೇಮಕಾತಿಗೆ 2024ರ ಸೆ. 18ರಂದು ಹಾಗೂ ಸಾರಿಗೆ ಇಲಾಖೆಯಲ್ಲಿನ ಎಂವಿಐ ಒಟ್ಟು 76 (ಈ ಪೈಕಿ 6 ಹೈಕ) ಹುದ್ದೆಗಳಿಗೆ ನೇಮಕಾತಿಗೆ 2024ರ ಮಾರ್ಚ್ 14ರಂದು ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿತ್ತು.</p>.<p>ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಅಳವಡಿಸಬೇಕೆಂಬ ಕಾರಣಕ್ಕೆ 2024ರ ಅ. 28ಕ್ಕೂ ಮೊದಲು ನೇಮಕಾತಿಗೆ ಅಧಿಸೂಚನೆ ಹೊರಡಿಸಿ, ಆ ಅಧಿಸೂಚನೆಯಲ್ಲಿ ಅ. 28ರ ನಂತರ ಯಾವುದಾದರೂ ತಿದ್ದುಪಡಿ ಆಗಿದ್ದರೆ, ಅಂತಹ ಎಲ್ಲ ಅಧಿಸೂಚನೆಗಳನ್ನೂ ರದ್ದುಪಡಿಸಬೇಕು. ಒಳ ಮೀಸಲಾತಿ ಅಳವಡಿಸಿ ಮರು ಅಧಿಸೂಚನೆ ಹೊರಡಿಸಿ, ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು 2025ರ ಸೆ. 4ರಂದು ಸರ್ಕಾರ ಆದೇಶ ಹೊರಡಿಸಿತ್ತು.</p>.<p>ಈ ಆದೇಶದ ಅನ್ವಯ ಎರಡೂ ತಿದ್ದುಪಡಿ ಅಧಿಸೂಚನೆಗಳನ್ನು ರದ್ದುಪಡಿಸಲು ಕೆಪಿಎಸ್ಸಿ ನಿರ್ಣಯ ತೆಗೆದುಕೊಂಡಿತ್ತು. ಆದರೆ, ಆ ನಿರ್ಣಯವನ್ನು ಮರೆಮಾಚಿ ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಕೆಪಿಎಸ್ಸಿ ಅಧ್ಯಕ್ಷ ಮತ್ತು ಕಾರ್ಯದರ್ಶಿ ಸರ್ಕಾರದಿಂದ ಅನುಮತಿ ಪಡೆದಿದ್ದಾರೆಂದು ಆರೋಪಿಸಿ ಆಯೋಗದ ಸಭೆಯಲ್ಲಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೋಟಾರು ವಾಹನ ನಿರೀಕ್ಷಕ (ಎಂವಿಐ) ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ‘ವಿಶೇಷ ಪ್ರಕರಣ’ವೆಂದು ಪರಿಗಣಿಸಿ ಮುಂದುವರಿಸಲು ಕೆಪಿಎಸ್ಸಿಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.</p>.<p>ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಕೆಪಿಎಸ್ಸಿ ಕಾರ್ಯದರ್ಶಿಗೆ ಗುರುವಾರ ಪತ್ರ ಬರೆದಿದ್ದಾರೆ.</p>.<p>ಲೋಕೋಪಯೋಗಿ ಇಲಾಖೆಯ ಎಇಇ ಒಟ್ಟು 42 (ಈ ಪೈಕಿ 12 ಹೈಕ) ಹುದ್ದೆಗಳ ನೇಮಕಾತಿಗೆ 2024ರ ಸೆ. 18ರಂದು ಹಾಗೂ ಸಾರಿಗೆ ಇಲಾಖೆಯಲ್ಲಿನ ಎಂವಿಐ ಒಟ್ಟು 76 (ಈ ಪೈಕಿ 6 ಹೈಕ) ಹುದ್ದೆಗಳಿಗೆ ನೇಮಕಾತಿಗೆ 2024ರ ಮಾರ್ಚ್ 14ರಂದು ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿತ್ತು.</p>.<p>ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಅಳವಡಿಸಬೇಕೆಂಬ ಕಾರಣಕ್ಕೆ 2024ರ ಅ. 28ಕ್ಕೂ ಮೊದಲು ನೇಮಕಾತಿಗೆ ಅಧಿಸೂಚನೆ ಹೊರಡಿಸಿ, ಆ ಅಧಿಸೂಚನೆಯಲ್ಲಿ ಅ. 28ರ ನಂತರ ಯಾವುದಾದರೂ ತಿದ್ದುಪಡಿ ಆಗಿದ್ದರೆ, ಅಂತಹ ಎಲ್ಲ ಅಧಿಸೂಚನೆಗಳನ್ನೂ ರದ್ದುಪಡಿಸಬೇಕು. ಒಳ ಮೀಸಲಾತಿ ಅಳವಡಿಸಿ ಮರು ಅಧಿಸೂಚನೆ ಹೊರಡಿಸಿ, ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು 2025ರ ಸೆ. 4ರಂದು ಸರ್ಕಾರ ಆದೇಶ ಹೊರಡಿಸಿತ್ತು.</p>.<p>ಈ ಆದೇಶದ ಅನ್ವಯ ಎರಡೂ ತಿದ್ದುಪಡಿ ಅಧಿಸೂಚನೆಗಳನ್ನು ರದ್ದುಪಡಿಸಲು ಕೆಪಿಎಸ್ಸಿ ನಿರ್ಣಯ ತೆಗೆದುಕೊಂಡಿತ್ತು. ಆದರೆ, ಆ ನಿರ್ಣಯವನ್ನು ಮರೆಮಾಚಿ ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಕೆಪಿಎಸ್ಸಿ ಅಧ್ಯಕ್ಷ ಮತ್ತು ಕಾರ್ಯದರ್ಶಿ ಸರ್ಕಾರದಿಂದ ಅನುಮತಿ ಪಡೆದಿದ್ದಾರೆಂದು ಆರೋಪಿಸಿ ಆಯೋಗದ ಸಭೆಯಲ್ಲಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>