ವೇತನವನ್ನು ಶೇ 22 ರಷ್ಟು ಹೆಚ್ಚಳ ಮಾಡುವಂತೆ ಒತ್ತಾಯಿಸಿ ಗುರುವಾರದಿಂದ ರಾಜ್ಯದಾದ್ಯಂತ ಎಲ್ಲ ನೌಕರರು ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಈ ವಿಚಾರವಾಗಿ ಇಂಧನ ಸಚಿವ ವಿ. ಸುನಿಲ್ಕುಮಾರ್ ಅವರು ಕೆಪಿಟಿಸಿಎಲ್ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳ ಜತೆಗೆ ಮಂಗಳವಾರ ಚರ್ಚೆ ನಡೆಸಿ, ಬಳಿಕ ಮುಖ್ಯಮಂತ್ರಿ ಯವರೊಂದಿಗೆ ಸಮಾಲೋಚನೆ ನಡೆಸಿ ವೇತನ ಪರಿಷ್ಕರಣೆಗೆ ಒಪ್ಪಿಗೆ
ಸೂಚಿಸಲಾಯಿತು.