<p><strong>ಬೆಂಗಳೂರು:</strong> ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಲ್ಲಿದ್ದ ಪಂಕಜ್ ಕುಮಾರ್ ಪಾಂಡೆ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಇ–ಆಡಳಿತ) ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.</p>.<p>ಬೆಂಗಳೂರು ಜಲಮಂಡಳಿಯ ಅಧ್ಯಕ್ಷ ವಿ.ರಾಮ್ ಪ್ರಸಾತ್ ಮನೋಹರ್ ಅವರಿಗೆ ಕೆಪಿಟಿಸಿಎಲ್ನ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಹೆಚ್ಚುವರಿ ಹೊಣೆ ನೀಡಿ ಸರ್ಕಾರವು ಆದೇಶಿಸಿದೆ.</p>.<p>ಕೆಪಿಟಿಸಿಎಲ್ ವ್ಯವಸ್ಥಾಪಕ ಹುದ್ದೆಯಲ್ಲಿದ್ದ ಅವಧಿಯಲ್ಲಿ ಪಾಂಡೆ ಅವರು ಹಲವು ಅಧಿಕೃತ ಸಭೆಗಳಿಗೆ ಗೈರು ಹಾಜರಾಗಿದ್ದರು. ಈ ಬಗ್ಗೆ ನೋಟಿಸ್ ನೀಡಿ, ವಿವರಣೆ ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಅದರಂತೆ ಮುಖ್ಯ ಕಾರ್ಯದರ್ಶಿ ನೀಡಿದ್ದ ನೋಟಿಸ್ಗೆ ಅವರು ವಿವರಣೆ ನೀಡಿದ್ದರು.</p>.<p>ಅದರ ಬೆನ್ನಲ್ಲೇ, ತಮ್ಮ ಇಲಾಖೆಯಲ್ಲಿ ಮುಖ್ಯಮಂತ್ರಿ ಅವರ ಮಗ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಹಸ್ತಕ್ಷೇಪ ಹೆಚ್ಚುತ್ತಿದೆ ಎಂದು ಬೇಸರಗೊಂಡಿದ್ದ ಕೆ.ಜೆ.ಜಾರ್ಜ್ ಅವರು ಇಂಧನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ವಿಷಯ ವಿಧಾನಸಭೆಯಲ್ಲೂ ಚರ್ಚೆಗೆ ಕಾರಣವಾಗಿತ್ತು. ಈ ವದಂತಿಯನ್ನು ಜಾರ್ಜ್ ಅವರು ನಿರಾಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಲ್ಲಿದ್ದ ಪಂಕಜ್ ಕುಮಾರ್ ಪಾಂಡೆ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಇ–ಆಡಳಿತ) ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.</p>.<p>ಬೆಂಗಳೂರು ಜಲಮಂಡಳಿಯ ಅಧ್ಯಕ್ಷ ವಿ.ರಾಮ್ ಪ್ರಸಾತ್ ಮನೋಹರ್ ಅವರಿಗೆ ಕೆಪಿಟಿಸಿಎಲ್ನ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಹೆಚ್ಚುವರಿ ಹೊಣೆ ನೀಡಿ ಸರ್ಕಾರವು ಆದೇಶಿಸಿದೆ.</p>.<p>ಕೆಪಿಟಿಸಿಎಲ್ ವ್ಯವಸ್ಥಾಪಕ ಹುದ್ದೆಯಲ್ಲಿದ್ದ ಅವಧಿಯಲ್ಲಿ ಪಾಂಡೆ ಅವರು ಹಲವು ಅಧಿಕೃತ ಸಭೆಗಳಿಗೆ ಗೈರು ಹಾಜರಾಗಿದ್ದರು. ಈ ಬಗ್ಗೆ ನೋಟಿಸ್ ನೀಡಿ, ವಿವರಣೆ ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಅದರಂತೆ ಮುಖ್ಯ ಕಾರ್ಯದರ್ಶಿ ನೀಡಿದ್ದ ನೋಟಿಸ್ಗೆ ಅವರು ವಿವರಣೆ ನೀಡಿದ್ದರು.</p>.<p>ಅದರ ಬೆನ್ನಲ್ಲೇ, ತಮ್ಮ ಇಲಾಖೆಯಲ್ಲಿ ಮುಖ್ಯಮಂತ್ರಿ ಅವರ ಮಗ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಹಸ್ತಕ್ಷೇಪ ಹೆಚ್ಚುತ್ತಿದೆ ಎಂದು ಬೇಸರಗೊಂಡಿದ್ದ ಕೆ.ಜೆ.ಜಾರ್ಜ್ ಅವರು ಇಂಧನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ವಿಷಯ ವಿಧಾನಸಭೆಯಲ್ಲೂ ಚರ್ಚೆಗೆ ಕಾರಣವಾಗಿತ್ತು. ಈ ವದಂತಿಯನ್ನು ಜಾರ್ಜ್ ಅವರು ನಿರಾಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>