ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಪಿಎಸ್ಐ ನೇಮಕಾತಿ ಹಗರಣದ ತನಿಖೆ ಇನ್ನೂ ಮುಗಿದಿಲ್ಲ. ಪ್ರಕರಣದಲ್ಲಿ ಭಾಗಿಯಾದ ಹಿರಿ ತಲೆಗಳನ್ನು ಇನ್ನೂ ಬಂಧಿಸಿಲ್ಲ. ಅಷ್ಟರಲ್ಲಾಗಲೇ ಕೆಪಿಟಿಸಿಎಲ್ ನೇಮಕಾತಿ ಅಕ್ರಮ ಹೊರಬಿದ್ದಿದೆ. ಎಂಜಿನಿಯರ್ಗಳ ನೇಮಕಾತಿ ಪರೀಕ್ಷೆಯಲ್ಲೂ ಲಕ್ಷಗಟ್ಟಲೆ ಹಣದ ಕೈ ಬದಲಾಗಿರುವುದು ಈ ಸರ್ಕಾರದ ಯೋಗ್ಯತೆಗೆ ಕನ್ನಡಿ ಹಿಡಿದಂತಿದೆ’ ಎಂದಿದ್ದಾರೆ.