<p>ಬೆಳಗಾವಿ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಸಹಾಯಕ ಎಂಜಿನಿಯರ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.</p>.<p>ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಎಸ್. ಸುರೇಶ್ ಕುಮಾರ್, ಈ ಹುದ್ದೆಗಳ ಆಯ್ಕೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಐದು ತಿಂಗಳ ಹಿಂದೆಯೇ ಪರೀಕ್ಷೆ ನಡೆಸಿದೆ. ಫಲಿತಾಂಶ ಪ್ರಕಟಿಸುವುದು ಹೋಗಲಿ, ಕನಿಷ್ಠ ಕೀ ಉತ್ತರವನ್ನು ಪ್ರಕಟಿಸಿಲ್ಲ ಎಂದು ಆಕ್ಷೇಪಿಸಿದರು.</p>.<p>ಇಂತಹ ಹುದ್ದೆಗಳಿಗೆ ನೇಮಕವಾದವರು ಆಡಳಿತ ಯಂತ್ರದ ಭಾಗವಾಗುತ್ತಾರೆ. ಕರ್ನಾಟಕದಲ್ಲಿ ಕೆಇಎ ಹಾಗೂ ಕರ್ನಾಟಕ ಲೋಕಸೇವಾ ಆಯೋಗವು ಯಾವುದೇ ಪರೀಕ್ಷೆ ನಡೆಸಿದರೂ ಫಲಿತಾಂಶ ಪ್ರಕಟಿಸಲು ವಿಳಂಬ ತೋರುತ್ತಲೇ ಇದೆ. ಈ ರೀತಿ ಧೋರಣೆಯಿಂದಾಗಿ ಮುಂದೆ ಆಡಳಿತಾಂಗಕ್ಕೆ ಬರುವವರು ಆರಂಭದಲ್ಲೇ ಸಿನಿಕರಾಗುವ, ವ್ಯವಸ್ಥೆ ಬಗ್ಗೆಯೇ ಹತಾಶರಾಗುವ ಸ್ಥಿತಿ ತಲುಪುವಂತಾಗಿದೆ. ಈ ಬೆಳವಣಿಗೆ ರಾಜ್ಯಕ್ಕೆ, ಆಡಳಿತಕ್ಕೆ ಒಳಿತು ತರುವುದಿಲ್ಲ. ಕೆಇಎ, ಕೆಪಿಎಸ್ಸಿಯನ್ನು ಚುರುಕುಗೊಳಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಸಹಾಯಕ ಎಂಜಿನಿಯರ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.</p>.<p>ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಎಸ್. ಸುರೇಶ್ ಕುಮಾರ್, ಈ ಹುದ್ದೆಗಳ ಆಯ್ಕೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಐದು ತಿಂಗಳ ಹಿಂದೆಯೇ ಪರೀಕ್ಷೆ ನಡೆಸಿದೆ. ಫಲಿತಾಂಶ ಪ್ರಕಟಿಸುವುದು ಹೋಗಲಿ, ಕನಿಷ್ಠ ಕೀ ಉತ್ತರವನ್ನು ಪ್ರಕಟಿಸಿಲ್ಲ ಎಂದು ಆಕ್ಷೇಪಿಸಿದರು.</p>.<p>ಇಂತಹ ಹುದ್ದೆಗಳಿಗೆ ನೇಮಕವಾದವರು ಆಡಳಿತ ಯಂತ್ರದ ಭಾಗವಾಗುತ್ತಾರೆ. ಕರ್ನಾಟಕದಲ್ಲಿ ಕೆಇಎ ಹಾಗೂ ಕರ್ನಾಟಕ ಲೋಕಸೇವಾ ಆಯೋಗವು ಯಾವುದೇ ಪರೀಕ್ಷೆ ನಡೆಸಿದರೂ ಫಲಿತಾಂಶ ಪ್ರಕಟಿಸಲು ವಿಳಂಬ ತೋರುತ್ತಲೇ ಇದೆ. ಈ ರೀತಿ ಧೋರಣೆಯಿಂದಾಗಿ ಮುಂದೆ ಆಡಳಿತಾಂಗಕ್ಕೆ ಬರುವವರು ಆರಂಭದಲ್ಲೇ ಸಿನಿಕರಾಗುವ, ವ್ಯವಸ್ಥೆ ಬಗ್ಗೆಯೇ ಹತಾಶರಾಗುವ ಸ್ಥಿತಿ ತಲುಪುವಂತಾಗಿದೆ. ಈ ಬೆಳವಣಿಗೆ ರಾಜ್ಯಕ್ಕೆ, ಆಡಳಿತಕ್ಕೆ ಒಳಿತು ತರುವುದಿಲ್ಲ. ಕೆಇಎ, ಕೆಪಿಎಸ್ಸಿಯನ್ನು ಚುರುಕುಗೊಳಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>