<p><strong>ಕೆ.ಆರ್.ನಗರ (ಮೈಸೂರು ಜಿಲ್ಲೆ): </strong>ಇಲ್ಲಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ಗೆ ಒಳಗಾದ 30 ಮಂದಿಗೆ ಹೆಪಟೈಟಿಸ್ ಸಿ ಸೋಂಕು ತಗುಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಣಿಪಾಲದ ‘ಸೆಂಟರ್ ಆಫ್ ವೈರಾಲಜಿ’ ಕೇಂದ್ರದಿಂದ ತಜ್ಞರನ್ನು ಕರೆಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ.</p>.<p>‘ಇಲ್ಲಿ ಡಯಾಲಿಸಿಸ್ ಕೇಂದ್ರ ನಡೆಸುತ್ತಿರುವ ಬಿ.ಆರ್.ಶೆಟ್ಟಿ ಕಂಪನಿಯೇ ಜಿಲ್ಲೆಯ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲೂ ಡಯಾಲಿಸಿಸ್ ನಡೆಸುತ್ತಿದೆ. ಒಂದು ವೇಳೆ ಸೋಂಕು ತಗುಲಿರುವುದು ದೃಢಪಟ್ಟರೆ, ಸೋಂಕು ತಗುಲಿರಬಹುದಾದ ಸಾಧ್ಯತೆಗಳನ್ನು ಪತ್ತೆ ಹಚ್ಚಲು ತಜ್ಞರನ್ನು ಕರೆಸಲಾಗುವುದು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈಗಾಗಲೇ ಆರೋಗ್ಯ ಇಲಾಖೆಯ ಆಯುಕ್ತರು ಶುಕ್ರವಾರ ನೇರವಾಗಿ ಬಿ.ಆರ್.ಶೆಟ್ಟಿ ಕಂಪನಿಗೆ ನೋಟಿಸ್ ನೀಡಿ, ಈ ಆರೋಪಕ್ಕೆ ವಿವರಣೆ ಕೇಳಿದ್ದಾರೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ನಗರ (ಮೈಸೂರು ಜಿಲ್ಲೆ): </strong>ಇಲ್ಲಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ಗೆ ಒಳಗಾದ 30 ಮಂದಿಗೆ ಹೆಪಟೈಟಿಸ್ ಸಿ ಸೋಂಕು ತಗುಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಣಿಪಾಲದ ‘ಸೆಂಟರ್ ಆಫ್ ವೈರಾಲಜಿ’ ಕೇಂದ್ರದಿಂದ ತಜ್ಞರನ್ನು ಕರೆಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ.</p>.<p>‘ಇಲ್ಲಿ ಡಯಾಲಿಸಿಸ್ ಕೇಂದ್ರ ನಡೆಸುತ್ತಿರುವ ಬಿ.ಆರ್.ಶೆಟ್ಟಿ ಕಂಪನಿಯೇ ಜಿಲ್ಲೆಯ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲೂ ಡಯಾಲಿಸಿಸ್ ನಡೆಸುತ್ತಿದೆ. ಒಂದು ವೇಳೆ ಸೋಂಕು ತಗುಲಿರುವುದು ದೃಢಪಟ್ಟರೆ, ಸೋಂಕು ತಗುಲಿರಬಹುದಾದ ಸಾಧ್ಯತೆಗಳನ್ನು ಪತ್ತೆ ಹಚ್ಚಲು ತಜ್ಞರನ್ನು ಕರೆಸಲಾಗುವುದು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈಗಾಗಲೇ ಆರೋಗ್ಯ ಇಲಾಖೆಯ ಆಯುಕ್ತರು ಶುಕ್ರವಾರ ನೇರವಾಗಿ ಬಿ.ಆರ್.ಶೆಟ್ಟಿ ಕಂಪನಿಗೆ ನೋಟಿಸ್ ನೀಡಿ, ಈ ಆರೋಪಕ್ಕೆ ವಿವರಣೆ ಕೇಳಿದ್ದಾರೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>