<figcaption>""</figcaption>.<figcaption>"ಬಿ.ಎಚ್.ರಸ್ತೆಯಲ್ಲಿ ಡಾಂಬರು ಹಾಕುವ ಕಾಮಗಾರಿ"</figcaption>.<p><strong>ತುಮಕೂರು</strong>: ದ್ವಿದಳ ಧಾನ್ಯಗಳ ಇಳುವರಿಯಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿ ಇರುವ ಕರ್ನಾಟಕವು 2018–19ನೇ ಸಾಲಿನ ಕೇಂದ್ರ ಸರ್ಕಾರದ ಕೃಷಿ ಕರ್ಮಣ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ.</p>.<p>ಕೇಂದ್ರದ ಕೃಷಿ, ಸಹಕಾರ ಮತ್ತು ರೈತರ ಕಲ್ಯಾಣ ಸಚಿವಾಲಯ ಕೊಡಮಾಡುವ ಈ ಪ್ರಶಸ್ತಿಗೆ ರಾಜ್ಯವು ಎರಡನೇ ಬಾರಿಗೆ ಭಾಜನವಾಗಿದೆ. 2010–11ನೇ ಸಾಲಿನಲ್ಲಿ ಸಿರಿಧಾನ್ಯಗಳ ಇಳುವರಿಗಾಗಿ ಈ ಪ್ರಶಸ್ತಿ ರಾಜ್ಯಕ್ಕೆ ಸಂದಿತ್ತು.</p>.<p>ಸಚಿವಾಲಯದ ತಜ್ಞರ ತಂಡ ನಡೆಸಿದ ಸಮೀಕ್ಷೆಯಲ್ಲಿ ಬೆಳೆ ಇಳುವರಿ, ಉತ್ಪಾದನೆ ಹೆಚ್ಚಳಕ್ಕಾಗಿ ಸರ್ಕಾರಿ ಯೋಜನೆಗಳ ಅನುಷ್ಠಾನ, ಕೃಷಿ ಉತ್ತೇಜನಕ್ಕೆ ಅಳವಡಿಸಿಕೊಂಡ ಸುಧಾರಿತ ಉಪಕ್ರಮಗಳನ್ನು ಪರಿಗಣಿಸಲಾಗಿದೆ.</p>.<p>‘ಕರ್ನಾಟಕವು ತೊಗರಿ, ಕಡಲೆ, ಹುರುಳಿ, ಉದ್ದು, ಹೆಸರು, ಅವರೆ, ಅಲಸಂದೆ ಕಾಳುಗಳನ್ನು ಹೆಚ್ಚಾಗಿ ಉತ್ಪಾದಿಸುತ್ತ ದೇಶದ ಜನರ ಆಹಾರ ಭದ್ರತೆಗೆ ಕೊಡುಗೆ ನೀಡುತ್ತಿದೆ’ ಎಂದು ತಂಡವು ಸದಾಭಿಪ್ರಾಯ ವ್ಯಕ್ತಪಡಿಸಿದೆ.</p>.<p><strong>ಪ್ರಧಾನಿಯಿಂದ ಪ್ರಶಸ್ತಿ ಪ್ರದಾನ:</strong> ತುಮಕೂರಿನಲ್ಲಿ ಜ.2ರಂದು ನಡೆಯುವ ಬೃಹತ್ ಸಮಾವೇಶದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಅವರು ಪ್ರಧಾನ ಮಾಡಲಿದ್ದಾರೆ. ಪ್ರಶಸ್ತಿಯು ₹1 ಕೋಟಿ ಮತ್ತು ಪಾರಿತೋಷಕ ಒಳಗೊಂಡಿದೆ.</p>.<p><strong>‘ಅದೃಷ್ಟಶಾಲಿ’ ರೈತರಿಗೆ ‘ಸಮ್ಮಾನ್ ನಿಧಿ’</strong><br />‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’(ಪಿಎಂ–ಕಿಸಾನ್) ಯೋಜನೆಯ ಎರಡನೇ ವರ್ಷದ ಮೊದಲ ಕಂತನ್ನು ಪಡೆಯಲು ದೇಶದ 40 ‘ಅದೃಷ್ಟಶಾಲಿ’ ರೈತರನ್ನು ಕ್ರಮಸಂಖ್ಯೆಯ ಮೂಲಕ ಆಯ್ಕೆ ಮಾಡಲಾಗಿದೆ.</p>.<p>ಈ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಸುಮಾರು 40 ಕೋಟಿ ರೈತರಲ್ಲಿ 1 ಕೋಟಿ, 2 ಕೋಟಿ, 3 ಕೋಟಿ..... ಹೀಗೆ ಕೋಟಿಯ ಕ್ರಮಸಂಖ್ಯೆಯ ಅರ್ಜಿದಾರ ರೈತರನ್ನು ಸಮಾವೇಶದ ವೇದಿಕೆಗೆ ಕರಿಸಿ ಪ್ರಧಾನಿಯಿಂದ ಕಂತಿನ ಮೊತ್ತವನ್ನು ವಿತರಣೆ ಮಾಡಲಾಗುತ್ತಿದೆ.</p>.<p>ಅದೃಷ್ಟಶಾಲಿಗಳ ಪಟ್ಟಿಯಲ್ಲಿ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಗೌಡಪ್ಪನಪಾಳ್ಯದ ಜಿ.ರಂಗಪ್ಪ ಮತ್ತು ತುರುವೇಕೆರೆ ತಾಲ್ಲೂಕಿನವೆಂಕಟಾಪುರದ ರೈತ ಮಹಲಿಂಗಣ್ಣ ಇದ್ದಾರೆ.</p>.<p><strong>ಪ್ರಧಾನಿ ಕಾರ್ಯಕ್ರಮಕ್ಕೆ 1.50 ಲಕ್ಷ ಜನ: ಸಿಎಂ<br />ತುಮಕೂರು</strong>: ಗುರುವಾರ (ಜ. 2) ತುಮಕೂರಿನಲ್ಲಿ ನಡೆಯುವ ರೈತ ಸಮಾವೇಶಕ್ಕೆ 1.50 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.</p>.<p>ಪ್ರಧಾನಿ ಭೇಟಿ ನೀಡಲಿರುವ ಸಿದ್ಧಗಂಗಾ ಮಠ, ಹೆಲಿಪ್ಯಾಡ್ ಹಾಗೂ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಸಿದ್ಧತಾ ಕಾರ್ಯಗಳನ್ನು ಮಂಗಳವಾರ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಸಾರ್ವಜನಿಕರ ಅನುಕೂಲಕ್ಕಾಗಿ ಪ್ರಮುಖ ರಸ್ತೆ, ವೃತ್ತಗಳಲ್ಲಿ ಧ್ವನಿವರ್ಧಕ, ಎಲ್ಇಡಿ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದರು.</p>.<p>*<br />ಕೃಷಿ ಸುಧಾರಣಾ ಯೋಜನೆಗಳು ಮತ್ತು ರಾಜ್ಯದ ರೈತರ ಶ್ರಮದಿಂದಾಗಿ ಪ್ರಶಸ್ತಿ ಸಂದಿದೆ. ಇದರಿಂದ ಮತ್ತಷ್ಟು ಉತ್ಸಾಹದಿಂದ ಕೆಲಸ ಮಾಡುವ ಹುಮ್ಮಸ್ಸು ಬಂದಿದೆ.<br /><em><strong>-ಬಿ.ವೈ.ಶ್ರೀನಿವಾಸ್, ಕೃಷಿ ನಿರ್ದೇಶಕ, ರಾಜ್ಯ ಕೃಷಿ ನಿರ್ದೇಶನಾಲಯ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<figcaption>"ಬಿ.ಎಚ್.ರಸ್ತೆಯಲ್ಲಿ ಡಾಂಬರು ಹಾಕುವ ಕಾಮಗಾರಿ"</figcaption>.<p><strong>ತುಮಕೂರು</strong>: ದ್ವಿದಳ ಧಾನ್ಯಗಳ ಇಳುವರಿಯಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿ ಇರುವ ಕರ್ನಾಟಕವು 2018–19ನೇ ಸಾಲಿನ ಕೇಂದ್ರ ಸರ್ಕಾರದ ಕೃಷಿ ಕರ್ಮಣ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ.</p>.<p>ಕೇಂದ್ರದ ಕೃಷಿ, ಸಹಕಾರ ಮತ್ತು ರೈತರ ಕಲ್ಯಾಣ ಸಚಿವಾಲಯ ಕೊಡಮಾಡುವ ಈ ಪ್ರಶಸ್ತಿಗೆ ರಾಜ್ಯವು ಎರಡನೇ ಬಾರಿಗೆ ಭಾಜನವಾಗಿದೆ. 2010–11ನೇ ಸಾಲಿನಲ್ಲಿ ಸಿರಿಧಾನ್ಯಗಳ ಇಳುವರಿಗಾಗಿ ಈ ಪ್ರಶಸ್ತಿ ರಾಜ್ಯಕ್ಕೆ ಸಂದಿತ್ತು.</p>.<p>ಸಚಿವಾಲಯದ ತಜ್ಞರ ತಂಡ ನಡೆಸಿದ ಸಮೀಕ್ಷೆಯಲ್ಲಿ ಬೆಳೆ ಇಳುವರಿ, ಉತ್ಪಾದನೆ ಹೆಚ್ಚಳಕ್ಕಾಗಿ ಸರ್ಕಾರಿ ಯೋಜನೆಗಳ ಅನುಷ್ಠಾನ, ಕೃಷಿ ಉತ್ತೇಜನಕ್ಕೆ ಅಳವಡಿಸಿಕೊಂಡ ಸುಧಾರಿತ ಉಪಕ್ರಮಗಳನ್ನು ಪರಿಗಣಿಸಲಾಗಿದೆ.</p>.<p>‘ಕರ್ನಾಟಕವು ತೊಗರಿ, ಕಡಲೆ, ಹುರುಳಿ, ಉದ್ದು, ಹೆಸರು, ಅವರೆ, ಅಲಸಂದೆ ಕಾಳುಗಳನ್ನು ಹೆಚ್ಚಾಗಿ ಉತ್ಪಾದಿಸುತ್ತ ದೇಶದ ಜನರ ಆಹಾರ ಭದ್ರತೆಗೆ ಕೊಡುಗೆ ನೀಡುತ್ತಿದೆ’ ಎಂದು ತಂಡವು ಸದಾಭಿಪ್ರಾಯ ವ್ಯಕ್ತಪಡಿಸಿದೆ.</p>.<p><strong>ಪ್ರಧಾನಿಯಿಂದ ಪ್ರಶಸ್ತಿ ಪ್ರದಾನ:</strong> ತುಮಕೂರಿನಲ್ಲಿ ಜ.2ರಂದು ನಡೆಯುವ ಬೃಹತ್ ಸಮಾವೇಶದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಅವರು ಪ್ರಧಾನ ಮಾಡಲಿದ್ದಾರೆ. ಪ್ರಶಸ್ತಿಯು ₹1 ಕೋಟಿ ಮತ್ತು ಪಾರಿತೋಷಕ ಒಳಗೊಂಡಿದೆ.</p>.<p><strong>‘ಅದೃಷ್ಟಶಾಲಿ’ ರೈತರಿಗೆ ‘ಸಮ್ಮಾನ್ ನಿಧಿ’</strong><br />‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’(ಪಿಎಂ–ಕಿಸಾನ್) ಯೋಜನೆಯ ಎರಡನೇ ವರ್ಷದ ಮೊದಲ ಕಂತನ್ನು ಪಡೆಯಲು ದೇಶದ 40 ‘ಅದೃಷ್ಟಶಾಲಿ’ ರೈತರನ್ನು ಕ್ರಮಸಂಖ್ಯೆಯ ಮೂಲಕ ಆಯ್ಕೆ ಮಾಡಲಾಗಿದೆ.</p>.<p>ಈ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಸುಮಾರು 40 ಕೋಟಿ ರೈತರಲ್ಲಿ 1 ಕೋಟಿ, 2 ಕೋಟಿ, 3 ಕೋಟಿ..... ಹೀಗೆ ಕೋಟಿಯ ಕ್ರಮಸಂಖ್ಯೆಯ ಅರ್ಜಿದಾರ ರೈತರನ್ನು ಸಮಾವೇಶದ ವೇದಿಕೆಗೆ ಕರಿಸಿ ಪ್ರಧಾನಿಯಿಂದ ಕಂತಿನ ಮೊತ್ತವನ್ನು ವಿತರಣೆ ಮಾಡಲಾಗುತ್ತಿದೆ.</p>.<p>ಅದೃಷ್ಟಶಾಲಿಗಳ ಪಟ್ಟಿಯಲ್ಲಿ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಗೌಡಪ್ಪನಪಾಳ್ಯದ ಜಿ.ರಂಗಪ್ಪ ಮತ್ತು ತುರುವೇಕೆರೆ ತಾಲ್ಲೂಕಿನವೆಂಕಟಾಪುರದ ರೈತ ಮಹಲಿಂಗಣ್ಣ ಇದ್ದಾರೆ.</p>.<p><strong>ಪ್ರಧಾನಿ ಕಾರ್ಯಕ್ರಮಕ್ಕೆ 1.50 ಲಕ್ಷ ಜನ: ಸಿಎಂ<br />ತುಮಕೂರು</strong>: ಗುರುವಾರ (ಜ. 2) ತುಮಕೂರಿನಲ್ಲಿ ನಡೆಯುವ ರೈತ ಸಮಾವೇಶಕ್ಕೆ 1.50 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.</p>.<p>ಪ್ರಧಾನಿ ಭೇಟಿ ನೀಡಲಿರುವ ಸಿದ್ಧಗಂಗಾ ಮಠ, ಹೆಲಿಪ್ಯಾಡ್ ಹಾಗೂ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಸಿದ್ಧತಾ ಕಾರ್ಯಗಳನ್ನು ಮಂಗಳವಾರ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಸಾರ್ವಜನಿಕರ ಅನುಕೂಲಕ್ಕಾಗಿ ಪ್ರಮುಖ ರಸ್ತೆ, ವೃತ್ತಗಳಲ್ಲಿ ಧ್ವನಿವರ್ಧಕ, ಎಲ್ಇಡಿ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದರು.</p>.<p>*<br />ಕೃಷಿ ಸುಧಾರಣಾ ಯೋಜನೆಗಳು ಮತ್ತು ರಾಜ್ಯದ ರೈತರ ಶ್ರಮದಿಂದಾಗಿ ಪ್ರಶಸ್ತಿ ಸಂದಿದೆ. ಇದರಿಂದ ಮತ್ತಷ್ಟು ಉತ್ಸಾಹದಿಂದ ಕೆಲಸ ಮಾಡುವ ಹುಮ್ಮಸ್ಸು ಬಂದಿದೆ.<br /><em><strong>-ಬಿ.ವೈ.ಶ್ರೀನಿವಾಸ್, ಕೃಷಿ ನಿರ್ದೇಶಕ, ರಾಜ್ಯ ಕೃಷಿ ನಿರ್ದೇಶನಾಲಯ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>