ವರ್ಗಾವಣೆಗೆ ಕಾರಣ: ದೇಶದಲ್ಲೇ ಉದ್ದನೆಯ ಮತ್ತು ಎತ್ತರದ ಅತ್ಯಾಧುನಿಕ ತಿಡಗುಂದಿ ಜಲಸೇತುವೆ(ಕಾಲುವೆ)ಯಲ್ಲಿ ಪ್ರಥಮ ಬಾರಿಗೆ ನೀರು ಹರಿಸಿದ ಹಿನ್ನೆಲೆಯಲ್ಲಿ ಯೋಜನೆಯ ರೂವಾರಿ, ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಕೂಡಿಕೊಂಡು ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದ್ದರು. ಅಂದಿನ ಕಾರ್ಯಕ್ರಮದಲ್ಲಿ ಮುಖ್ಯ ಎಂಜಿನಿಯರ್ ಆರ್.ಪಿ.ಕುಲಕರ್ಣಿ ಪಾಲ್ಗೊಂಡಿದ್ದರು.