<p><strong>ಬೆಂಗಳೂರು:</strong> ರಾಜ್ಯದ ಎಲ್ಲ ಪುರಸಭೆಗಳು ಮತ್ತು ಪಟ್ಟಣ ಪಂಚಾಯತ್ಗಳ 3 ಕಿ.ಮೀ ವ್ಯಾಪ್ತಿಯ ಅಂತರದಲ್ಲಿರುವ ಯಾವುದೇ ಭೂಮಿಯನ್ನು ಅರ್ಜಿ ನಮೂನೆ 50, 53 ಮತ್ತು 57ರ ಅಡಿ ಮಂಜೂರು ಮಾಡಲು ಅವಕಾಶವಿಲ್ಲ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಕಾಂಗ್ರೆಸ್ನ ಟಿ.ಡಿ.ರಾಜೇಗೌಡ ಅವರ ಗಮನ ಸೆಳೆಯುವ ಸೂಚನೆಯಡಿ ಪ್ರಶ್ನೆಗೆ ಉತ್ತರಿಸಿ ಅವರು ಈ ವಿಷಯ ತಿಳಿಸಿದರು. ಈ ಕಾಯ್ದೆ 40 ವರ್ಷಗಳ ಹಿಂದೆಯೇ ಆಗಿತ್ತು. 2021ರಲ್ಲಿ ಈ ಕುರಿತು ಮತ್ತೊಮ್ಮೆ ಸುತ್ತೋಲೆ ಹೊರಡಿಸಲಾಗಿತ್ತು ಎಂದರು.</p>.<p>ಹೀಗಾಗಿ ಯಾರಾದರೂ ಅರ್ಜಿ ಹಾಕಿದರೆ ಸಹಜವಾಗಿ ತಿರಸ್ಕೃತವಾಗುತ್ತದೆ. ಈ ಜಾಗಗಳಲ್ಲಿ ಯಾರಾದರೂ ಸಾಗುವಳಿ ಮಾಡುತ್ತಿದ್ದರೆ, ಒಕ್ಕಲೆಬ್ಬಿಸುವುದಿಲ್ಲ. ಒಂದು ವೇಳೆ ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸಂದರ್ಭ ಬಂದಾಗ ಪರಿಹಾರವನ್ನು ಯಾವ ರೀತಿ ನೀಡಬೇಕು ಎಂಬ ವಿಚಾರವಾಗಿ ಮುಖ್ಯಮಂತ್ರಿ ಅವರ ಜತೆ ಚರ್ಚಿಸಲಾಗುವುದು ಎಂದು ಕೃಷ್ಣಬೈರೇಗೌಡ ಹೇಳಿದರು.</p>.<p>ಇದಕ್ಕೆ ಧ್ವನಿಗೂಡಿಸಿದ ವಿರೋಧಪಕ್ಷದ ನಾಯಕ ಆರ್.ಅಶೋಕ ಅವರು, ‘ನಾನು ಹಿಂದೆ ಕಂದಾಯ ಸಚಿವನಾಗಿದ್ದೆ. ನಾನೇ ಆಗಲಿ, ಕೃಷ್ಣ ಬೈರೇಗೌಡರೇ ಆಗಲಿ ಕಾನೂನು ಬದಲಾವಣೆ ಮಾಡಲು ಸಾಧ್ಯವಿಲ್ಲ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಎಲ್ಲ ಪುರಸಭೆಗಳು ಮತ್ತು ಪಟ್ಟಣ ಪಂಚಾಯತ್ಗಳ 3 ಕಿ.ಮೀ ವ್ಯಾಪ್ತಿಯ ಅಂತರದಲ್ಲಿರುವ ಯಾವುದೇ ಭೂಮಿಯನ್ನು ಅರ್ಜಿ ನಮೂನೆ 50, 53 ಮತ್ತು 57ರ ಅಡಿ ಮಂಜೂರು ಮಾಡಲು ಅವಕಾಶವಿಲ್ಲ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಕಾಂಗ್ರೆಸ್ನ ಟಿ.ಡಿ.ರಾಜೇಗೌಡ ಅವರ ಗಮನ ಸೆಳೆಯುವ ಸೂಚನೆಯಡಿ ಪ್ರಶ್ನೆಗೆ ಉತ್ತರಿಸಿ ಅವರು ಈ ವಿಷಯ ತಿಳಿಸಿದರು. ಈ ಕಾಯ್ದೆ 40 ವರ್ಷಗಳ ಹಿಂದೆಯೇ ಆಗಿತ್ತು. 2021ರಲ್ಲಿ ಈ ಕುರಿತು ಮತ್ತೊಮ್ಮೆ ಸುತ್ತೋಲೆ ಹೊರಡಿಸಲಾಗಿತ್ತು ಎಂದರು.</p>.<p>ಹೀಗಾಗಿ ಯಾರಾದರೂ ಅರ್ಜಿ ಹಾಕಿದರೆ ಸಹಜವಾಗಿ ತಿರಸ್ಕೃತವಾಗುತ್ತದೆ. ಈ ಜಾಗಗಳಲ್ಲಿ ಯಾರಾದರೂ ಸಾಗುವಳಿ ಮಾಡುತ್ತಿದ್ದರೆ, ಒಕ್ಕಲೆಬ್ಬಿಸುವುದಿಲ್ಲ. ಒಂದು ವೇಳೆ ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸಂದರ್ಭ ಬಂದಾಗ ಪರಿಹಾರವನ್ನು ಯಾವ ರೀತಿ ನೀಡಬೇಕು ಎಂಬ ವಿಚಾರವಾಗಿ ಮುಖ್ಯಮಂತ್ರಿ ಅವರ ಜತೆ ಚರ್ಚಿಸಲಾಗುವುದು ಎಂದು ಕೃಷ್ಣಬೈರೇಗೌಡ ಹೇಳಿದರು.</p>.<p>ಇದಕ್ಕೆ ಧ್ವನಿಗೂಡಿಸಿದ ವಿರೋಧಪಕ್ಷದ ನಾಯಕ ಆರ್.ಅಶೋಕ ಅವರು, ‘ನಾನು ಹಿಂದೆ ಕಂದಾಯ ಸಚಿವನಾಗಿದ್ದೆ. ನಾನೇ ಆಗಲಿ, ಕೃಷ್ಣ ಬೈರೇಗೌಡರೇ ಆಗಲಿ ಕಾನೂನು ಬದಲಾವಣೆ ಮಾಡಲು ಸಾಧ್ಯವಿಲ್ಲ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>