<p><strong>ಬೆಂಗಳೂರು</strong>: ರಾಜ್ಯದ 17.09 ಲಕ್ಷ ಸಣ್ಣ, ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯ ನಷ್ಟ ಪರಿಹಾರವಾಗಿ ತಲಾ ₹2,800ರಿಂದ ₹3,000 ಸಾವಿರ ನೀಡಲು ಸರ್ಕಾರ ನಿರ್ಧರಿಸಿದೆ.</p>.<p>ಬರ, ಪ್ರವಾಹ ಮತ್ತು ಇತರ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಿ, ನಿರ್ಣಯ ಕೈಗೊಳ್ಳಲು ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ಸಭೆಯ ಬಳಿಕ ಈ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ‘ಜೀವನೋಪಾಯ ನಷ್ಟ ಪರಿಹಾರ ವಿತರಿಸಲು ರೈತರ ಪಟ್ಟಿ ಸಿದ್ಧಪಡಿಸಲಾಗಿದೆ’ ಎಂದರು.</p>.<p>‘ಮಳೆ ಆಶ್ರಿತ ಮತ್ತು ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೂ ಬೆಳೆ ನಷ್ಟ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಇದರಿಂದ ಸುಮಾರು 7 ಲಕ್ಷ ರೈತರಿಗೆ ಲಾಭವಾಗಲಿದೆ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಈ ಪರಿಹಾರ ವಿತರಿಸಲಾಗುವುದು’ ಎಂದರು.</p>.<p>‘ಕೇಂದ್ರದಿಂದ ಎನ್ಡಿಆರ್ಎಫ್ ಪರಿಹಾರ ₹3,454 ಕೋಟಿ ಬಂದಿತ್ತು. 27.50 ಲಕ್ಷ ರೈತರಿಗೆ ₹2,451 ಕೋಟಿಯನ್ನು ಮೇ ತಿಂಗಳ ಮೊದಲ ವಾರದಲ್ಲಿಯೇ ವಿತರಿಸಲಾಗಿದೆ. ಎನ್ಡಿಆರ್ಎಫ್ನ ಉಳಿದ ಹಣ ಮತ್ತು ರಾಜ್ಯ ಸರ್ಕಾರದಿಂದ ₹272 ಕೋಟಿ ಸೇರಿಸಿ ನಷ್ಟ ಪರಿಹಾರ ನೀಡಲು ಉದ್ದೇಶಿಸಲಾಗಿದೆ. ಇನ್ನೊಂದು ವಾರದಲ್ಲಿ ಪರಿಹಾರ ಪಾವತಿಸಲು ಸಾಧ್ಯವಾಗುವಂತೆ ಅಧಿಕಾರಿಗಳು ಎಲ್ಲ ತಯಾರಿ ಮಾಡಿಕೊಂಡಿದ್ದಾರೆ’ ಎಂದರು. </p>.<p>‘ಮುಂಗಾರು ಸ್ಥಿತಿಯ ಬಗ್ಗೆಯೂ ಸಭೆಯಲ್ಲಿ ಅವಲೋಕನ ನಡೆಸಲಾಗಿದೆ. ವಾಡಿಕೆಯಂತೆ ಪೂರ್ವ ಮುಂಗಾರು ಮಳೆ 115 ಮಿಮೀ ಆಗುತ್ತದೆ. ಆದರೆ, ಈ ಬಾರಿ 150 ಮಿಮೀ ಮಳೆ ಆಗಿದೆ. ಕಳೆದ ವರ್ಷ ಶೇ 71ರಷ್ಟು ಮಳೆ ಕೊರತೆ ಆಗಿತ್ತು. ಈ ಬಾರಿ ಒಂದು ಭಾಗಕ್ಕೆ ಸೀಮಿತವಾಗದೆ, ಎಲ್ಲ ಭಾಗಗಳಲ್ಲೂ ಮಳೆ ಬಂದಿದೆ. ಐದು ಜಿಲ್ಲೆಗಳಲ್ಲಿ ವಾಡಿಕೆ, ನಾಲ್ಕು ಜಿಲ್ಲೆಗಳಲ್ಲಿ ಅಧಿಕ ಮತ್ತು ಉಳಿದ ಜಿಲ್ಲೆಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಿದೆ’ ಎಂದರು.</p>.<p>‘ಕೃಷಿ ವಿಮೆ ಮೂಲಕವೂ ರೈತರಿಗೆ ಈ ಬಾರಿ ಅತೀ ಹೆಚ್ಚು ₹1,654 ಕೋಟಿ ಪರಿಹಾರ ಸಿಕ್ಕಿದೆ. ಇನ್ನೂ ₹130 ಕೋಟಿ ಪರಿಹಾರ ನೀಡಲು ಬಾಕಿ ಇದೆ’ ಎಂದರು.</p>.<p>‘ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಬಗ್ಗೆ ಹವಾಮಾನ ತಜ್ಞರು ಈಗಾಗಲೇ ವರದಿ ನೀಡಿದ್ದಾರೆ. ಮಳೆ ಸಮಯದಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದೇ ಶನಿವಾರದಿಂದ ವಿಭಾಗವಾರು ಸಭೆ ನಡೆಸುತ್ತೇನೆ’ ಎಂದೂ ಕೃಷ್ಣ ಬೈರೇಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದ 17.09 ಲಕ್ಷ ಸಣ್ಣ, ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯ ನಷ್ಟ ಪರಿಹಾರವಾಗಿ ತಲಾ ₹2,800ರಿಂದ ₹3,000 ಸಾವಿರ ನೀಡಲು ಸರ್ಕಾರ ನಿರ್ಧರಿಸಿದೆ.</p>.<p>ಬರ, ಪ್ರವಾಹ ಮತ್ತು ಇತರ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಿ, ನಿರ್ಣಯ ಕೈಗೊಳ್ಳಲು ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ಸಭೆಯ ಬಳಿಕ ಈ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ‘ಜೀವನೋಪಾಯ ನಷ್ಟ ಪರಿಹಾರ ವಿತರಿಸಲು ರೈತರ ಪಟ್ಟಿ ಸಿದ್ಧಪಡಿಸಲಾಗಿದೆ’ ಎಂದರು.</p>.<p>‘ಮಳೆ ಆಶ್ರಿತ ಮತ್ತು ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೂ ಬೆಳೆ ನಷ್ಟ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಇದರಿಂದ ಸುಮಾರು 7 ಲಕ್ಷ ರೈತರಿಗೆ ಲಾಭವಾಗಲಿದೆ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಈ ಪರಿಹಾರ ವಿತರಿಸಲಾಗುವುದು’ ಎಂದರು.</p>.<p>‘ಕೇಂದ್ರದಿಂದ ಎನ್ಡಿಆರ್ಎಫ್ ಪರಿಹಾರ ₹3,454 ಕೋಟಿ ಬಂದಿತ್ತು. 27.50 ಲಕ್ಷ ರೈತರಿಗೆ ₹2,451 ಕೋಟಿಯನ್ನು ಮೇ ತಿಂಗಳ ಮೊದಲ ವಾರದಲ್ಲಿಯೇ ವಿತರಿಸಲಾಗಿದೆ. ಎನ್ಡಿಆರ್ಎಫ್ನ ಉಳಿದ ಹಣ ಮತ್ತು ರಾಜ್ಯ ಸರ್ಕಾರದಿಂದ ₹272 ಕೋಟಿ ಸೇರಿಸಿ ನಷ್ಟ ಪರಿಹಾರ ನೀಡಲು ಉದ್ದೇಶಿಸಲಾಗಿದೆ. ಇನ್ನೊಂದು ವಾರದಲ್ಲಿ ಪರಿಹಾರ ಪಾವತಿಸಲು ಸಾಧ್ಯವಾಗುವಂತೆ ಅಧಿಕಾರಿಗಳು ಎಲ್ಲ ತಯಾರಿ ಮಾಡಿಕೊಂಡಿದ್ದಾರೆ’ ಎಂದರು. </p>.<p>‘ಮುಂಗಾರು ಸ್ಥಿತಿಯ ಬಗ್ಗೆಯೂ ಸಭೆಯಲ್ಲಿ ಅವಲೋಕನ ನಡೆಸಲಾಗಿದೆ. ವಾಡಿಕೆಯಂತೆ ಪೂರ್ವ ಮುಂಗಾರು ಮಳೆ 115 ಮಿಮೀ ಆಗುತ್ತದೆ. ಆದರೆ, ಈ ಬಾರಿ 150 ಮಿಮೀ ಮಳೆ ಆಗಿದೆ. ಕಳೆದ ವರ್ಷ ಶೇ 71ರಷ್ಟು ಮಳೆ ಕೊರತೆ ಆಗಿತ್ತು. ಈ ಬಾರಿ ಒಂದು ಭಾಗಕ್ಕೆ ಸೀಮಿತವಾಗದೆ, ಎಲ್ಲ ಭಾಗಗಳಲ್ಲೂ ಮಳೆ ಬಂದಿದೆ. ಐದು ಜಿಲ್ಲೆಗಳಲ್ಲಿ ವಾಡಿಕೆ, ನಾಲ್ಕು ಜಿಲ್ಲೆಗಳಲ್ಲಿ ಅಧಿಕ ಮತ್ತು ಉಳಿದ ಜಿಲ್ಲೆಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಿದೆ’ ಎಂದರು.</p>.<p>‘ಕೃಷಿ ವಿಮೆ ಮೂಲಕವೂ ರೈತರಿಗೆ ಈ ಬಾರಿ ಅತೀ ಹೆಚ್ಚು ₹1,654 ಕೋಟಿ ಪರಿಹಾರ ಸಿಕ್ಕಿದೆ. ಇನ್ನೂ ₹130 ಕೋಟಿ ಪರಿಹಾರ ನೀಡಲು ಬಾಕಿ ಇದೆ’ ಎಂದರು.</p>.<p>‘ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಬಗ್ಗೆ ಹವಾಮಾನ ತಜ್ಞರು ಈಗಾಗಲೇ ವರದಿ ನೀಡಿದ್ದಾರೆ. ಮಳೆ ಸಮಯದಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದೇ ಶನಿವಾರದಿಂದ ವಿಭಾಗವಾರು ಸಭೆ ನಡೆಸುತ್ತೇನೆ’ ಎಂದೂ ಕೃಷ್ಣ ಬೈರೇಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>