<p><strong>ಬೆಂಗಳೂರು</strong>: ಬಗರ್ಹುಕುಂ ಅಡಿ ಸಲ್ಲಿಸಲಾಗಿರುವ ನಮೂನೆ 53 ಹಾಗೂ ನಮೂನೆ 57ರ ಅರ್ಜಿಗಳು ವಿಲೇವಾರಿಯಾಗದೇ ರೈತರ ಬೆಳೆ ನಾಶ ಮಾಡುವುದು ಅಥವಾ ಒಕ್ಕಲೆಬ್ಬಿಸುವ ಕ್ರಮಕ್ಕೆ ಮುಂದಾಗಬಾರದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಯ ಶೈಲೇಂದ್ರ ಬೆಲ್ದಾಳೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಅಂತಹ ಘಟನೆಗಳು ನಡೆದರೆ ಕೂಡಲೇ ನನ್ನ ಗಮನಕ್ಕೆ ತರಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಈ ಅರ್ಜಿಗಳು ಇತ್ಯರ್ಥ ಆಗುವುದಕ್ಕೂ ಮೊದಲು ಅರ್ಜಿದಾರರನ್ನು ಒಕ್ಕಲೆಬ್ಬಿಸಲು ಸಾಧ್ಯವಿಲ್ಲ. ಅಲ್ಲದೇ, ಅರ್ಜಿ ಹಾಕಿರುವ ಕಡೆ ರೈತರ ಬೆಳೆ ಕಟಾವು ಮಾಡಲು ಅಡ್ಡಿಪಡಿಸಬಾರದು. ಈ ಸಂಬಂಧ ಸ್ಪಷ್ಟವಾದ ಕಾನೂನು ರೂಪಿಸಲಾಗಿದೆ. ಬಗರ್ಹುಕುಂಗೆ ಸಂಬಂಧಿಸಿದಂತೆ ಇಷ್ಟು ಸ್ಪಷ್ಟವಾಗಿ ಹಿಂದೆ ಯಾವತ್ತೂ ಸುತ್ತೋಲೆ ಹೊರಡಿಸಿರಲಿಲ್ಲ’ ಎಂದು ಅವರು ಹೇಳಿದರು.</p>.<p>ಬಗರ್ಹುಕುಂ ಯೋಜನೆ ಅಡಿ ಭೂಮಂಜೂರು ಮಾಡಲು ರಾಜ್ಯದಲ್ಲಿ ಈವರೆಗೆ 185 ಸಮಿತಿಗಳನ್ನು ರಚಿಸಲಾಗಿದೆ. ಇದೊಂದು ಹೊಸ ದಾಖಲೆ. ಅರ್ಜಿ ವಿಲೇವಾರಿಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<p>‘ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ, ಅತಿ ಹೆಚ್ಚು ಬಗರ್ಹುಕುಂ ಸಮಿತಿಗಳನ್ನು ರಚಿಸಿದ್ದು, ನಮ್ಮ ಅವಧಿಯಲ್ಲೇ. ಅರ್ಜಿ ವಿಲೇ ಕೆಲಸಗಳನ್ನು ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ಧೇನೆ. ಈ ಸಂಬಂಧ ಅಧಿಕಾರಿಗಳಿಗೆ ಗಡುವು ನೀಡಿದ್ದು ನಿಜ. ಸರ್ಕಾರವೇ ಅದರ ಬೆನ್ನಟ್ಟಿರುವುದೂ ನಿಜ’ ಎಂದು ಕೃಷ್ಣ ಬೈರೇಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಗರ್ಹುಕುಂ ಅಡಿ ಸಲ್ಲಿಸಲಾಗಿರುವ ನಮೂನೆ 53 ಹಾಗೂ ನಮೂನೆ 57ರ ಅರ್ಜಿಗಳು ವಿಲೇವಾರಿಯಾಗದೇ ರೈತರ ಬೆಳೆ ನಾಶ ಮಾಡುವುದು ಅಥವಾ ಒಕ್ಕಲೆಬ್ಬಿಸುವ ಕ್ರಮಕ್ಕೆ ಮುಂದಾಗಬಾರದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಯ ಶೈಲೇಂದ್ರ ಬೆಲ್ದಾಳೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಅಂತಹ ಘಟನೆಗಳು ನಡೆದರೆ ಕೂಡಲೇ ನನ್ನ ಗಮನಕ್ಕೆ ತರಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಈ ಅರ್ಜಿಗಳು ಇತ್ಯರ್ಥ ಆಗುವುದಕ್ಕೂ ಮೊದಲು ಅರ್ಜಿದಾರರನ್ನು ಒಕ್ಕಲೆಬ್ಬಿಸಲು ಸಾಧ್ಯವಿಲ್ಲ. ಅಲ್ಲದೇ, ಅರ್ಜಿ ಹಾಕಿರುವ ಕಡೆ ರೈತರ ಬೆಳೆ ಕಟಾವು ಮಾಡಲು ಅಡ್ಡಿಪಡಿಸಬಾರದು. ಈ ಸಂಬಂಧ ಸ್ಪಷ್ಟವಾದ ಕಾನೂನು ರೂಪಿಸಲಾಗಿದೆ. ಬಗರ್ಹುಕುಂಗೆ ಸಂಬಂಧಿಸಿದಂತೆ ಇಷ್ಟು ಸ್ಪಷ್ಟವಾಗಿ ಹಿಂದೆ ಯಾವತ್ತೂ ಸುತ್ತೋಲೆ ಹೊರಡಿಸಿರಲಿಲ್ಲ’ ಎಂದು ಅವರು ಹೇಳಿದರು.</p>.<p>ಬಗರ್ಹುಕುಂ ಯೋಜನೆ ಅಡಿ ಭೂಮಂಜೂರು ಮಾಡಲು ರಾಜ್ಯದಲ್ಲಿ ಈವರೆಗೆ 185 ಸಮಿತಿಗಳನ್ನು ರಚಿಸಲಾಗಿದೆ. ಇದೊಂದು ಹೊಸ ದಾಖಲೆ. ಅರ್ಜಿ ವಿಲೇವಾರಿಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<p>‘ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ, ಅತಿ ಹೆಚ್ಚು ಬಗರ್ಹುಕುಂ ಸಮಿತಿಗಳನ್ನು ರಚಿಸಿದ್ದು, ನಮ್ಮ ಅವಧಿಯಲ್ಲೇ. ಅರ್ಜಿ ವಿಲೇ ಕೆಲಸಗಳನ್ನು ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ಧೇನೆ. ಈ ಸಂಬಂಧ ಅಧಿಕಾರಿಗಳಿಗೆ ಗಡುವು ನೀಡಿದ್ದು ನಿಜ. ಸರ್ಕಾರವೇ ಅದರ ಬೆನ್ನಟ್ಟಿರುವುದೂ ನಿಜ’ ಎಂದು ಕೃಷ್ಣ ಬೈರೇಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>