<p><strong>ಬೆಂಗಳೂರು</strong>: ಉಪವಿಭಾಗಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರದಿರುವ ಪ್ರಕರಣಗಳನ್ನು ದಾಖಲಿಸಿಕೊಂಡರೆ ಮತ್ತು ಕಾನೂನು ಮೀರಿ ಆದೇಶ ಹೊರಡಿಸಿದರೆ, ಶಿಸ್ತು ಕ್ರಮಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.</p>.<p>ಉಪವಿಭಾಗಾಧಿಕಾರಿಗಳ ಜತೆ ಶನಿವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>‘ಸಿವಿಲ್ ನ್ಯಾಯಾಲಯಗಳ ವ್ಯಾಪ್ತಿಗೆ ಬರುವ ಪ್ರಕರಣಗಳನ್ನು ಉಪವಿಭಾಗಾಧಿಕಾರಿಗಳು (ಎ.ಸಿ) ದಾಖಲಿಸಿಕೊಳ್ಳುತ್ತಿರುವ ಬಗ್ಗೆ ವರದಿ ಇದೆ. ಇಂತಹ ಪ್ರಕರಣಗಳಲ್ಲಿ ಕೆಲವು ಎ.ಸಿಗಳು ಕಾನೂನುಬಾಹಿರವಾಗಿ ಆದೇಶ ಹೊರಡಿಸಿದ್ದರ ಬಗ್ಗೆ ಮಾಹಿತಿ ಇದೆ’ ಎಂದು ಸಚಿವರು ಸಭೆಯಲ್ಲಿ ಉಲ್ಲೇಖಿಸಿದರು.</p>.<p>‘ಇಂತಹ ಘಟನೆಗಳು ಪದೇ–ಪದೇ ಮರುಕಳುಹಿಸುತ್ತಿವೆ. ಎ.ಸಿಗಳು ಹೊರಡಿಸಿದ ಆದೇಶದ ಬಗ್ಗೆ ಆಕ್ಷೇಪ ವ್ಯಕ್ತವಾಗಿವೆ. ಇನ್ನು ಮುಂದೆ ಎ.ಸಿಗಳು ತಾವು ಹೊರಡಿಸುವ ಆದೇಶಗಳಲ್ಲಿ, ಯಾವ ಕಾಯ್ದೆ–ಸೆಕ್ಷನ್ಗಳ ಅಡಿಯಲ್ಲಿ ಅಂತಹ ಆದೇಶ ಹೊರಡಿಸಿದ್ದೇವೆ ಎಂಬುದನ್ನು ಉಲ್ಲೇಖಿಸಬೇಕು’ ಎಂದು ಸೂಚಿಸಿದರು.</p>.<p>‘ಈ ಸೂಚನೆಗಳನ್ನು ಮೀರುವ ಅಥವಾ ಪಾಲಿಸದೇ ಇರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ. ನೀವು ಅದರ ವಿರುದ್ಧ ನ್ಯಾಯಾಲಯಕ್ಕೆ ಹೋದರೆ, ಸುಪ್ರೀಂ ಕೋರ್ಟ್ವರೆಗೂ ಹೋಗಲು ನಾವು ಸಿದ್ಧರಿದ್ದೇವೆ’ ಎಂದೂ ಎಚ್ಚರಿಸಿದರು.</p>.<p>‘ಎ.ಸಿಗಳು ಹೊಸ ಪ್ರಕರಣಗಳನ್ನು ದಾಖಲಿಸಿಕೊಳ್ಳುವುದರ ಜತೆಗೆ, ಈಗಾಗಲೇ ತಮ್ಮ ಬಳಿ ಬಾಕಿಯಾಗಿರುವ ಪ್ರಕರಣಗಳ ಇತ್ಯರ್ಥಕ್ಕೆ ಗಮನ ಕೊಡಬೇಕು’ ಎಂದು ಸೂಚಿಸಿದರು.</p>.<p><strong>ಚಿಕ್ಕಮಗಳೂರು ಎ.ಸಿಗೆ ತರಾಟೆ:</strong> </p><p>ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಸುದರ್ಶನ ಅವರು ಸಭೆ ಶುರುವಾದ ನಂತರವೂ ಮೊಬೈಲ್ ಫೋನ್ನಲ್ಲಿ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ಸಚಿವರು, ‘ಸ್ವಾಮಿ ನೀವು ನನಗೆ ಗೌರವ ನೀಡಬೇಕಾಗಿಲ್ಲ. ಈ ಕುರ್ಚಿಗಾದರೂ ಗೌರವ ಕೊಡಿ. ನಾನು ವೈಯಕ್ತಿಕ ಕೆಲಸಕ್ಕಾಗಿ ಇಲ್ಲಿ ಬಂದಿಲ್ಲ. ಸಭೆಯಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಕಲಿತುಕೊಂಡು, ಸಭೆಗೆ ಗೌರವ ನೀಡಿ’ ಎಂದು ತರಾಟೆಗೆ ತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉಪವಿಭಾಗಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರದಿರುವ ಪ್ರಕರಣಗಳನ್ನು ದಾಖಲಿಸಿಕೊಂಡರೆ ಮತ್ತು ಕಾನೂನು ಮೀರಿ ಆದೇಶ ಹೊರಡಿಸಿದರೆ, ಶಿಸ್ತು ಕ್ರಮಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.</p>.<p>ಉಪವಿಭಾಗಾಧಿಕಾರಿಗಳ ಜತೆ ಶನಿವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>‘ಸಿವಿಲ್ ನ್ಯಾಯಾಲಯಗಳ ವ್ಯಾಪ್ತಿಗೆ ಬರುವ ಪ್ರಕರಣಗಳನ್ನು ಉಪವಿಭಾಗಾಧಿಕಾರಿಗಳು (ಎ.ಸಿ) ದಾಖಲಿಸಿಕೊಳ್ಳುತ್ತಿರುವ ಬಗ್ಗೆ ವರದಿ ಇದೆ. ಇಂತಹ ಪ್ರಕರಣಗಳಲ್ಲಿ ಕೆಲವು ಎ.ಸಿಗಳು ಕಾನೂನುಬಾಹಿರವಾಗಿ ಆದೇಶ ಹೊರಡಿಸಿದ್ದರ ಬಗ್ಗೆ ಮಾಹಿತಿ ಇದೆ’ ಎಂದು ಸಚಿವರು ಸಭೆಯಲ್ಲಿ ಉಲ್ಲೇಖಿಸಿದರು.</p>.<p>‘ಇಂತಹ ಘಟನೆಗಳು ಪದೇ–ಪದೇ ಮರುಕಳುಹಿಸುತ್ತಿವೆ. ಎ.ಸಿಗಳು ಹೊರಡಿಸಿದ ಆದೇಶದ ಬಗ್ಗೆ ಆಕ್ಷೇಪ ವ್ಯಕ್ತವಾಗಿವೆ. ಇನ್ನು ಮುಂದೆ ಎ.ಸಿಗಳು ತಾವು ಹೊರಡಿಸುವ ಆದೇಶಗಳಲ್ಲಿ, ಯಾವ ಕಾಯ್ದೆ–ಸೆಕ್ಷನ್ಗಳ ಅಡಿಯಲ್ಲಿ ಅಂತಹ ಆದೇಶ ಹೊರಡಿಸಿದ್ದೇವೆ ಎಂಬುದನ್ನು ಉಲ್ಲೇಖಿಸಬೇಕು’ ಎಂದು ಸೂಚಿಸಿದರು.</p>.<p>‘ಈ ಸೂಚನೆಗಳನ್ನು ಮೀರುವ ಅಥವಾ ಪಾಲಿಸದೇ ಇರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ. ನೀವು ಅದರ ವಿರುದ್ಧ ನ್ಯಾಯಾಲಯಕ್ಕೆ ಹೋದರೆ, ಸುಪ್ರೀಂ ಕೋರ್ಟ್ವರೆಗೂ ಹೋಗಲು ನಾವು ಸಿದ್ಧರಿದ್ದೇವೆ’ ಎಂದೂ ಎಚ್ಚರಿಸಿದರು.</p>.<p>‘ಎ.ಸಿಗಳು ಹೊಸ ಪ್ರಕರಣಗಳನ್ನು ದಾಖಲಿಸಿಕೊಳ್ಳುವುದರ ಜತೆಗೆ, ಈಗಾಗಲೇ ತಮ್ಮ ಬಳಿ ಬಾಕಿಯಾಗಿರುವ ಪ್ರಕರಣಗಳ ಇತ್ಯರ್ಥಕ್ಕೆ ಗಮನ ಕೊಡಬೇಕು’ ಎಂದು ಸೂಚಿಸಿದರು.</p>.<p><strong>ಚಿಕ್ಕಮಗಳೂರು ಎ.ಸಿಗೆ ತರಾಟೆ:</strong> </p><p>ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಸುದರ್ಶನ ಅವರು ಸಭೆ ಶುರುವಾದ ನಂತರವೂ ಮೊಬೈಲ್ ಫೋನ್ನಲ್ಲಿ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ಸಚಿವರು, ‘ಸ್ವಾಮಿ ನೀವು ನನಗೆ ಗೌರವ ನೀಡಬೇಕಾಗಿಲ್ಲ. ಈ ಕುರ್ಚಿಗಾದರೂ ಗೌರವ ಕೊಡಿ. ನಾನು ವೈಯಕ್ತಿಕ ಕೆಲಸಕ್ಕಾಗಿ ಇಲ್ಲಿ ಬಂದಿಲ್ಲ. ಸಭೆಯಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಕಲಿತುಕೊಂಡು, ಸಭೆಗೆ ಗೌರವ ನೀಡಿ’ ಎಂದು ತರಾಟೆಗೆ ತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>