ಬೆಳಗಾವಿ: ಜಿಲ್ಲೆಯ ಬೆಳಗಾವಿ, ಖಾನಾಪುರ, ಬೈಲಹೊಂಗಲ, ಹಿರೇಬಾಗೇವಾಡಿಯಲ್ಲಿ ಮಳೆ ಮುಂದುವರಿದಿದೆ. ಇನ್ನೊಂದೆಡೆ, ನೆರೆಯ ದಕ್ಷಿಣ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಕೃಷ್ಣಾ ಹಾಗೂ ಉಪನದಿಗಳಾದ ವೇದಗಂಗಾ, ದೂಧ್ಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿ ದಂಡೆಯ ಗ್ರಾಮಗಳಲ್ಲಿ, ಹೊಲ– ಗದ್ದೆಗಳಲ್ಲಿ ನೀರು ನುಗ್ಗುತ್ತಿದೆ.